Advertisement
ಸುದ್ದಿಗಳು

ನಿರಂತರ ಹೆಡ್ ಫೋನ್ ಬಳಸುವುದರಿಂದ ಯಾವೆಲ್ಲಾ ಸಮಸ್ಯೆಗಳು ಎದುರಾಗಬಹುದು…?

Share

ನಿರಂತರವಾಗಿ ಇಯರ್ ಫೋನ್ ಬಳಸಿ ಹಾಡುಗಳನ್ನು ಕೇಳುತ್ತಾ ಇರುವವರಿಗೆ ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಅದೇನೆಂದರೆ ನಿರಂತರವಾಗಿ ಇಯರ್ ಫೋನ್ ಬಳಸುವುದರಿಂದ ಮುಂದಿನ ದಿನಗಳಲ್ಲಿ ಶ್ರವಣ ದೋಷಕ್ಕೆ ಕಾರಣವಾಗಬಹುದು, ಜೊತೆಗೆ ಕಿವಿಗೆ ಸಂಬಂಧಪಟ್ಟ ಇತರ ಆರೋಗ್ಯ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಇಯರ್ ಫೋನ್ ಗಳಲ್ಲಿ ಜೋರಾದ ಧ್ವನಿಯನ್ನು ನಿರಂತರವಾಗಿ ಕೇಳುವುದರಿಂದ ಕಿವಿಯೊಳಗಿನ ಸೂಕ್ಷ್ಮ ಕೂದಲಿನ ಕೋಶಗಳ ಮೇಲೆ ಒತ್ತಡ ಉಂಟಾಗುತ್ತದೆ. ಕಿವಿಯು ದೀರ್ಘಾಕಾಲದವರೆಗೆ 85 ಡೆಸಿಬಲ್ ಗಳಿಗಿಂತ ಹೆಚ್ಚಿ ಶಬ್ದಗಳಿಗೆ ಒಡ್ಡಿ ಕೊಂಡಾಗ ಶಬ್ದ-ಪ್ರೇರಿತ ಶ್ರವಣ ನಷ್ಟ ಸಂಭವಿಸುತ್ತದೆ. ಈ ಕೂದಲಿನ ಕೋಶಗಳು ಹಾನಿಗೊಳಗಾದ ನಂತರ, ಅವು ತಮ್ಮನ್ನು ತಾವು ಸರಿಪಡಿಸಿ ಕೊಳ್ಳುವುದಿಲ್ಲ. ಆರಂಭದಲ್ಲಿ, ಸಮಸ್ಯೆ ತಾತ್ಕಾಲಿಕವಾಗಿ ಕಾಣಿಸಬಹುದು, ಆದರೆ ಕಾಲಾ ನಂತರದಲ್ಲಿ ಅದು ಶಾಶ್ವತವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಹೆಡ್ ಫೋನ್ ಗಳ ಬಳಕೆಯಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ..?

  • ಹೆಡ್ ಫೋನ್ ಮತ್ತು ಇಯರ್ ಫೋನ್ ಗಳನ್ನು ಅತಿಯಾಗಿ ಬಳಸುವುದರಿಂದ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
  • ಹೆಡ್ ಫೋನ್ ಗಳು ಹೂರಸೂಸುವ ವಿದ್ಯುತ್ಕಾಂತೀಯ ಅಲೆಗಳು ಮೆದುಳಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಇದರಿಂದ ತಲೆನೋವು ಮತ್ತು ಮೈಗ್ರೇನ್ ಗೆ ಕಾರಣವಾಗುತ್ತದೆ.
  • ಇದು ಹೃದಯದ ಬಡಿತವನ್ನು ಹೆಚ್ಚಿಸುತ್ತದೆ, ಇದರಿಂದ ಹೃದಯಕ್ಕೆ ಹಾನಿ
  • ಇಯರ್ ಫೋನ್ ಗಳನ್ನು ದೀರ್ಘಕಾಲದವರೆಗೆ ಬಳಸುವುದರಿಂದ ಕಿವಿ ಕಾಲುವೆಯಲ್ಲಿ ಶಾಖ ಮತ್ತು ತೇವಾಂಶ ಹೆಚ್ಚಾಗುತ್ತದೆ. ಇದು ಬ್ಯಾಕ್ಟೀರಿಯಾ ಮತ್ತು ಶೀಲೀಂಧ್ರಗಳು ಬೆಳೆಯಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ.
  • ಇದು ಕಿವಿ ತುರಿಕೆ, ಕಿವಿಯಲ್ಲಿ ಮೇಣದ ಸಂಗ್ರಹ, ಅಡಚಣೆಗಳು ಮತ್ತು ಆಗಾಗ್ಗೆ ಕಿವಿ ಸೋಂಕುಗಳಿಗೆ ಕಾರಣವಾಗುತ್ತದೆ.
  • ಇದು ಹೆಚ್ಚಿದ ಒತ್ತಡ, ಕಿರಿಕಿರಿ, ಕೇಂದ್ರೀಕರಿಸುವಲ್ಲಿ ತೊಂದರೆ ಮತ್ತು ನಿದ್ರೆಯ ಸಮಸ್ಯೆಗಳಿಗೆ ಕಾರಣವಾಗಬಹುದು.
  • ಇದು ಆತಂಕ ಅಥವಾ ಒತ್ತಡಕ್ಕೆ ಕಾರಣವಾಗಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

7 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

7 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

12 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago