ಸುದ್ದಿಗಳು

WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

Advertisement

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

3 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

3 hours ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

20 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

23 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

1 day ago