ಸುದ್ದಿಗಳು

WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

Advertisement

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

3 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

8 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago