Advertisement
ಸುದ್ದಿಗಳು

WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

Share

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

9 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

9 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

19 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

20 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago