Advertisement
ಸುದ್ದಿಗಳು

WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

Share

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago