Advertisement
ಸುದ್ದಿಗಳು

WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

Share

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

11 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

14 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

20 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago