Advertisement
ಸುದ್ದಿಗಳು

WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

Share

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

10 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

17 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

17 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago