Advertisement
ಸುದ್ದಿಗಳು

WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

Share

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

2 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

2 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

2 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

2 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

2 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

2 hours ago