Advertisement
ಮಾಹಿತಿ

ಪಿಎಂ ಕಿಸಾನ್‌ ಯೋಜನೆ ಮುಂದಿನ ಕಂತು ಯಾವಾಗ..?

Share

ಕೇಂದ್ರ ಸರ್ಕಾರವು(Central Govt) ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು(PM Kissan yojan) ರೈತರಿಗಾಗಿ(Farmers) ಪ್ರಾರಂಭಿಸಿರುವ ಯೋಜನೆಯಾಗಿದೆ(Scheme). ದೇಶದ ಕೋಟ್ಯಾಂತರ ರೈತರು ಈ ಯೋಜನೆಯ  ಲಾಭ ಪಡೆಯುತ್ತಿದ್ದಾರೆ. ಈ ಯೋಜನೆಯನ್ನು 2019ರ ಫೆಬ್ರವರಿಯಲ್ಲಿ ಜಾರಿಗೆ ತರಲಾಯಿತು. ಅಂದಿನಿಂದ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿ ಬೆಳೆ ಸಹಾಯಕ್ಕಾಗಿ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಈ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ(Account) ಮೂರು ಕಂತುಗಳಲ್ಲಿ ಅಂದರೆ, ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಡಿಸೆಂಬರ್-ಮಾರ್ಚ್ ಅವಧಿಯಲ್ಲಿ ಪ್ರತಿ ಕಂತಿನಲ್ಲಿ ಎಕರೆಗೆ 2 ಸಾವಿರದಂತೆ ಜಮಾ ಮಾಡುತ್ತದೆ.

ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17 ನೇ ಕಂತು ಬಿಡುಗಡೆ ಮಾಡಿದರು. ಈ ಹಣವನ್ನು 18 ಜೂನ್ 2024 ರಂದು ರೈತರ ಖಾತೆಗೆ ಜಮಾ ಮಾಡಲಾಗಿದೆ. ಈ ಯೋಜನೆಯ ಭಾಗವಾಗಿ ಒಟ್ಟು 9 ಕೋಟಿಗೂ ಅಧಿಕ ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ. ಆದರೆ ಈಗ ರೈತರ ಗಮನ 18ನೇ ಕಂತಿನ ಹಣದತ್ತ ನೆಟ್ಟಿದೆ. ಹಾಗಾದ್ರೆ ಈ ನಿಧಿ ಯಾವಾಗ ಬರುತ್ತದೆ ಎಂಬ ಚರ್ಚೆಯೂ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚಿನ ಮಾಹಿತಿ ಪ್ರಕಾರ ನವೆಂಬರ್ ಮೊದಲ ವಾರದಲ್ಲಿ 18ನೇ ಕಂತಿನ ಪಿಎಂ ಕಿಸಾನ್ ನಿಧಿಯನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಬಜೆಟ್ ಸಭೆಗಳಲ್ಲಿ ಪಿಎಂ ಕಿಸಾನ್ 18ನೇ ಕಂತಿನ ಹಣದ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ. ರೈತರಿಗೆ ನೀಡಲಾಗುವ ಈ ನೆರವನ್ನು ಯಾವುದೇ ವಿಳಂಬವಿಲ್ಲದೆ ಸಕಾಲದಲ್ಲಿ ಪಾವತಿಸಲು ಎಲ್ಲಾ ವ್ಯವಸ್ಥೆಗಳನ್ನು ಸಹ ಮಾಡಲಾಗುತ್ತಿದೆಯಂತೆ.

ಈ ಮಧ್ಯೆ, ಇ-ಕೆವೈಸಿಯು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಹಣವನ್ನು ಪಡೆಯಲು ರೈತರು ಪೂರ್ಣಗೊಳಿಸಬೇಕಾದ ಪ್ರಮುಖ ಕೆಲಸವಾಗಿದೆ. ಇದನ್ನು ಪೂರ್ಣಗೊಳಿಸಿದವರಿಗೆ ಮಾತ್ರ ಪಿಎಂ ಕಿಸಾನ್ ಮೊತ್ತ ಜಮಾ ಆಗುತ್ತದೆ. ನಿಮ್ಮ ಇ-ಕೆವೈಸಿಯನ್ನು ನೀವು ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬೇಕು. ಅಲ್ಲದೆ ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಜೊತೆ ಲಿಂಕ್ ಮಾಡಬೇಕು. PM Kisan E-KYC ಗಾಗಿ PM Kisan ಅಧಿಕೃತ ಪೋರ್ಟಲ್ pmkisan.gov.in ಗೆ ಹೋಗಿ.. ಅಲ್ಲಿ ರಿಜಿಸ್ಟರ್​ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ ಮತ್ತು ಭೂಮಿಯ ಸಂಪೂರ್ಣ ಮಾಹಿತಿಯನ್ನು ನಮೂದಿಸಿ.

ನಂತರ ನೀವು ನಿಮ್ಮ ಮೊಬೈಲ್ ಸಂಖ್ಯೆಗೆ ಸ್ವೀಕರಿಸಿದ OTP ಅನ್ನು ನಮೂದಿಸಬೇಕು ಮತ್ತು ನೋಂದಣಿಗೆ ಮುಂದುವರಿಯಬೇಕು. ಬ್ಯಾಂಕ್ ಖಾತೆ ವಿವರಗಳನ್ನು ಸರಿಯಾಗಿ ನಮೂದಿಸಬೇಕು. ಅಲ್ಲದೆ ನಿಮ್ಮ ವೈಯಕ್ತಿಕ ವಿವರಗಳನ್ನು ಆಧಾರ್‌ನಲ್ಲಿರುವಂತೆ ಸರಿಯಾಗಿ ನಮೂದಿಸಬೇಕು. ಅದರ ನಂತರ ಸಬ್​ಮಿಟ್​ ಕ್ಲಿಕ್​ ಮಾಡ್ಬೇಕು. ಇದು ಆಧಾರ್ ಅಥೆಂಟಿಕೇಶನ್ ಸಕ್ಸಸ್ ಎಂದು ಹೇಳುತ್ತದೆ. ಇಷ್ಟಾದ್ರೆ ನಿಮ್ಮ ಇ-ಕೆವೈಸಿ ಅಪ್ಡೇಟ್ ಕೆಲಸ ಮುಗಿದಂತೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

4 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

5 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

6 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

13 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

17 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

17 hours ago