Advertisement
ಮಾಹಿತಿ

ಪಿಎಂ ಕಿಸಾನ್‌ ಯೋಜನೆ ಮುಂದಿನ ಕಂತು ಯಾವಾಗ..?

Share

ಕೇಂದ್ರ ಸರ್ಕಾರವು(Central Govt) ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು(PM Kissan yojan) ರೈತರಿಗಾಗಿ(Farmers) ಪ್ರಾರಂಭಿಸಿರುವ ಯೋಜನೆಯಾಗಿದೆ(Scheme). ದೇಶದ ಕೋಟ್ಯಾಂತರ ರೈತರು ಈ ಯೋಜನೆಯ  ಲಾಭ ಪಡೆಯುತ್ತಿದ್ದಾರೆ. ಈ ಯೋಜನೆಯನ್ನು 2019ರ ಫೆಬ್ರವರಿಯಲ್ಲಿ ಜಾರಿಗೆ ತರಲಾಯಿತು. ಅಂದಿನಿಂದ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿ ಬೆಳೆ ಸಹಾಯಕ್ಕಾಗಿ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಈ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ(Account) ಮೂರು ಕಂತುಗಳಲ್ಲಿ ಅಂದರೆ, ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಡಿಸೆಂಬರ್-ಮಾರ್ಚ್ ಅವಧಿಯಲ್ಲಿ ಪ್ರತಿ ಕಂತಿನಲ್ಲಿ ಎಕರೆಗೆ 2 ಸಾವಿರದಂತೆ ಜಮಾ ಮಾಡುತ್ತದೆ.

ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17 ನೇ ಕಂತು ಬಿಡುಗಡೆ ಮಾಡಿದರು. ಈ ಹಣವನ್ನು 18 ಜೂನ್ 2024 ರಂದು ರೈತರ ಖಾತೆಗೆ ಜಮಾ ಮಾಡಲಾಗಿದೆ. ಈ ಯೋಜನೆಯ ಭಾಗವಾಗಿ ಒಟ್ಟು 9 ಕೋಟಿಗೂ ಅಧಿಕ ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ. ಆದರೆ ಈಗ ರೈತರ ಗಮನ 18ನೇ ಕಂತಿನ ಹಣದತ್ತ ನೆಟ್ಟಿದೆ. ಹಾಗಾದ್ರೆ ಈ ನಿಧಿ ಯಾವಾಗ ಬರುತ್ತದೆ ಎಂಬ ಚರ್ಚೆಯೂ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚಿನ ಮಾಹಿತಿ ಪ್ರಕಾರ ನವೆಂಬರ್ ಮೊದಲ ವಾರದಲ್ಲಿ 18ನೇ ಕಂತಿನ ಪಿಎಂ ಕಿಸಾನ್ ನಿಧಿಯನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಬಜೆಟ್ ಸಭೆಗಳಲ್ಲಿ ಪಿಎಂ ಕಿಸಾನ್ 18ನೇ ಕಂತಿನ ಹಣದ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ. ರೈತರಿಗೆ ನೀಡಲಾಗುವ ಈ ನೆರವನ್ನು ಯಾವುದೇ ವಿಳಂಬವಿಲ್ಲದೆ ಸಕಾಲದಲ್ಲಿ ಪಾವತಿಸಲು ಎಲ್ಲಾ ವ್ಯವಸ್ಥೆಗಳನ್ನು ಸಹ ಮಾಡಲಾಗುತ್ತಿದೆಯಂತೆ.

ಈ ಮಧ್ಯೆ, ಇ-ಕೆವೈಸಿಯು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಹಣವನ್ನು ಪಡೆಯಲು ರೈತರು ಪೂರ್ಣಗೊಳಿಸಬೇಕಾದ ಪ್ರಮುಖ ಕೆಲಸವಾಗಿದೆ. ಇದನ್ನು ಪೂರ್ಣಗೊಳಿಸಿದವರಿಗೆ ಮಾತ್ರ ಪಿಎಂ ಕಿಸಾನ್ ಮೊತ್ತ ಜಮಾ ಆಗುತ್ತದೆ. ನಿಮ್ಮ ಇ-ಕೆವೈಸಿಯನ್ನು ನೀವು ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬೇಕು. ಅಲ್ಲದೆ ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಜೊತೆ ಲಿಂಕ್ ಮಾಡಬೇಕು. PM Kisan E-KYC ಗಾಗಿ PM Kisan ಅಧಿಕೃತ ಪೋರ್ಟಲ್ pmkisan.gov.in ಗೆ ಹೋಗಿ.. ಅಲ್ಲಿ ರಿಜಿಸ್ಟರ್​ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ ಮತ್ತು ಭೂಮಿಯ ಸಂಪೂರ್ಣ ಮಾಹಿತಿಯನ್ನು ನಮೂದಿಸಿ.

ನಂತರ ನೀವು ನಿಮ್ಮ ಮೊಬೈಲ್ ಸಂಖ್ಯೆಗೆ ಸ್ವೀಕರಿಸಿದ OTP ಅನ್ನು ನಮೂದಿಸಬೇಕು ಮತ್ತು ನೋಂದಣಿಗೆ ಮುಂದುವರಿಯಬೇಕು. ಬ್ಯಾಂಕ್ ಖಾತೆ ವಿವರಗಳನ್ನು ಸರಿಯಾಗಿ ನಮೂದಿಸಬೇಕು. ಅಲ್ಲದೆ ನಿಮ್ಮ ವೈಯಕ್ತಿಕ ವಿವರಗಳನ್ನು ಆಧಾರ್‌ನಲ್ಲಿರುವಂತೆ ಸರಿಯಾಗಿ ನಮೂದಿಸಬೇಕು. ಅದರ ನಂತರ ಸಬ್​ಮಿಟ್​ ಕ್ಲಿಕ್​ ಮಾಡ್ಬೇಕು. ಇದು ಆಧಾರ್ ಅಥೆಂಟಿಕೇಶನ್ ಸಕ್ಸಸ್ ಎಂದು ಹೇಳುತ್ತದೆ. ಇಷ್ಟಾದ್ರೆ ನಿಮ್ಮ ಇ-ಕೆವೈಸಿ ಅಪ್ಡೇಟ್ ಕೆಲಸ ಮುಗಿದಂತೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago