#Diabetes | ಮಧುಮೇಹ ರೋಗಿಗಳು ಯಾವೆಲ್ಲಾ ಹಣ್ಣುಗಳನ್ನು ಸೇವಿಸಬಹುದು..? ಹಣ್ಣುಗಳ ಸೇವನೆಯ ಮಹತ್ವವೇನು..?

October 12, 2023
1:47 PM
ಸಿಟ್ರೆಸ್ ಹಣ್ಣುಗಳು ವಿಟಮಿನ್ ಎ ಮತ್ತು ಸಿ ಮೂಲವಾಗಿದೆ.  ಬಾಳೆಹಣ್ಣು ಪೊಟಾಸಿಯಂ ಮತ್ತು  tryptopan ಮೂಲವಾಗಿದೆ. ಸೇಬುಗಳು ಕಬ್ಬಿಣ ಮತ್ತು ಖನಿಜಾಂಶಗಳನ್ನು ಒದಗಿಸುತ್ತದೆ.  ನಾರಿನಂಶ /ಫೈಬರ್ ಸಮೃದ್ಧ ಹಣ್ಣುಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯಕಾರಿ. ಫೈಬರ್ ಸಮೃದ್ಧವಾಗಿರುವ ಆಹಾರ ರಕ್ತದಿಂದ ಗ್ಲುಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ  ಹಸಿವನ್ನು ಕಡಿಮೆ ಮಾಡುತ್ತದೆ.

ಹಣ್ಣುಗಳು.. ಕಾರ್ಬೋಹೈಡ್ರೇಟ್ಗಳು, ಅಗತ್ಯವಾದ ಜೀವಸತ್ವಗಳು ಖನಿಜಗಳು ಮತ್ತು ನಾರಿನಂಶಗಳು ಸಮೃದ್ಧಿ ಮೂಲವಾಗಿದೆ.ಕೆಲವು ಪೋಷಕಾಂಶ ಹಣ್ಣುಗಳಲ್ಲಿ ಮಾತ್ರದೊರೆಯುತ್ತದೆ. ಹೀಗಾಗಿ ಸಮತೋಲನ ಹಾಗೂ ಆರೋಗ್ಯಕರ ಆಹಾರವನ್ನು ಹೊಂದಲು ಹಣ್ಣುಗಳು ನಮಗೆ ಅತ್ಯಗತ್ಯ.  ಹಣ್ಣುಗಳು ನೈಸರ್ಗಿಕ ಸಕ್ಕರೆ ಪ್ರಕ್ಟೊಸನ್ನು ಹೊಂದಿರುತ್ತದೆ.

ಸಿಟ್ರೆಸ್ ಹಣ್ಣುಗಳು ವಿಟಮಿನ್ ಎ ಮತ್ತು ಸಿ ಮೂಲವಾಗಿದೆ.  ಬಾಳೆಹಣ್ಣು ಪೊಟಾಸಿಯಂ ಮತ್ತು  tryptopan ಮೂಲವಾಗಿದೆ. ಸೇಬುಗಳು ಕಬ್ಬಿಣ ಮತ್ತು ಖನಿಜಾಂಶಗಳನ್ನು ಒದಗಿಸುತ್ತದೆ. ನಾರಿನಂಶ /ಫೈಬರ್ ಸಮೃದ್ಧ ಹಣ್ಣುಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯಕಾರಿ. ಫೈಬರ್ ಸಮೃದ್ಧವಾಗಿರುವ ಆಹಾರ ರಕ್ತದಿಂದ ಗ್ಲುಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.  ಹಸಿವನ್ನು ಕಡಿಮೆ ಮಾಡುತ್ತದೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.  ಟೈಪ್ ಟು ಮಧುಮೇಹಕ್ಕೆ ಸ್ತೂಲಕಾಯ ಒಂದು ಕಾರಣವಾಗಿದೆ. ಫೈಬರ್ ಸಮೃದ್ಧವಾಗಿರುವ ಹಣ್ಣುಗಳ ಸೇವನೆಯಿಂದ ತೂಕವನ್ನು ನಿಯಂತ್ರಿಸುವ ಮೂಲಕ ಮಧುಮೆಹವನ್ನು ತಡೆಗಟ್ಟಬಹುದು.

Low Glycemic Index(LGI) ಅಂದರೆ ನಮ್ಮ ದೇಹದಲ್ಲಿ ಹರಿಯುವ ರಕ್ತಕ್ಕೆ ಗ್ಲುಕೋಸ್ ಅನ್ನು ನಿಧಾನವಾಗಿ ಬಿಡುಗಡೆ ಮಾಡುವಂಥದ್ದು  ಈ ಕಡಿಮೆ glycemic index ಇರುವ ಎಲ್ಲಾ ಹಣ್ಣುಗಳು ಮಧುಮೇಹ ರೋಗಿಗಳು ಉಪಯೋಗಿಸಬಹುದು ಅವುಗಳು ಯಾವುವೆಂದರೆ. ಸೇಬು, ಪಪ್ಪಾಯ, ಕಿತ್ತಳೆ, ಮರಸೇಬು, ಚೆರ್ರಿ, ನೇರಳೆ, ಪೇರಳೆ, ಡ್ರಾಗನ್ ಫ್ರೂಟ್, ಕಿವಿಹಣ್ಣು, ಅವಕಾಡೋ.

ಪಪ್ಪಾಯಿ: ಕಡಿಮೆ ಕ್ಯಾಲೋರಿಇದೆ  hypoglycemic effect..ಎಲ್ಲಾ ವಿಟಮಿನ್ ಗಳು   ಫೈಬರ್ ಅಂಶ ಜಾಸ್ತಿ ಇರವುದರಿಂದ  ಮಧುಮೆಹ ರೋಗದಲ್ಲಿ  ಬಳಸಬಹುದು.

ಚೆರ್ರಿ : ಸ್ವಾಭಾವಿಕವಾಗಿ ಸಿಗುವ ಚೆರ್ರಿ ಹಣ್ಣು antioxidents.ಇದ್ದು ರೋಗ ನಿರೋಧಕ  ಶಕ್ತಿ ಹೆಚ್ಚಿಸುವಲ್ಲಿ ಸಹಾಯಕಾರಿ. ಕೃತಕ ಚೆರ್ರಿಯಲ್ಲಿ ಸಕ್ಕರೆ ಅಂಶ  ಇರುವುದರಿಂದ ಸೇವಿಸುವುದು ಒಳ್ಳೇದಲ್ಲ.

ಕಿವಿಹಣ್ಣು : ಬಿಳಿರಕ್ತ ಕಣಗಳನ್ನು ಹೆಚಿಸುತ್ತದೆ  ಫೈಬರ್, ಪೊಟಾಸಿಯಂ ವಿಟಮಿನ್ಸ್ ಸಮೃದ್ಧವಾಗಿದ್ದು ಕಡಿಮೆ ಕ್ಯಾಲೋರಿ ಯನ್ನು ಹೊಂದಿದೆ.

ಡ್ರ್ಯಾಗನ್ ಫ್ರೂಟ್ : ಕೆಡಿಮೆ ಕ್ಯಾಲರಿ,ಆಂಟಿ ಆಕ್ಸಿಡೆಂಟ್ ಹಾಗೂ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಈ ಎಲ್ಲಾ ಹಣ್ಣುಗಳನ್ನು ಮಿತವಾಗಿ ಸೇವಿಸಿ. ಮಧುಮೆಹ ರೋಗಿಗಳು  ಬಾಳೆಹಣ್ಣು, ಮಾವಿನ ಹಣ್ಣು, ದ್ರಾಕ್ಷಿ, ಚಿಕ್ಕು, ಇವುಗಳಲ್ಲಿ ಸಕ್ಕರೆಯ ಪ್ರಮಾಣ (High Glycemic Index ) ಅಧಿಕವಿರುವುದರಿಂದ  ಸೇವಿಸದೆ ಇರುವುದು ಉತ್ತಮ. ಉತ್ತಮ ಆಹಾರಪದ್ದತಿ  ವ್ಯಾಯಾಮ  ಯೋಗ   ವಾಕ್   ಉತ್ತಮ ಜೀವನಶೈಲಿ  ಇವುಗಳಿಂದ ಮಧುಮೇಹ ನಿಯಂತ್ರಿಸಬಹುದು.

( ಸಂಗ್ರಹ ಮಾಹಿತಿ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror