ಬಿಳಿ ಹಾತೆ ದಾಳಿಯಿಂದ ಸಂಕಷ್ಟದಲ್ಲಿರುವ ಭಾರತದ ತೆಂಗಿನ ಬೆಳೆ

January 25, 2026
7:00 AM

ಭಾರತದ ಪ್ರಮುಖ ತೆಂಗಿನ ಬೆಳೆ ಪ್ರದೇಶಗಳು ಗಂಭೀರವಾದ ವೈಟ್‌ಫ್ಲೈ ಅಥವಾ ಬಿಳಿ ಹಾತೆ (Rugose Spiralling Whitefly) ಕೀಟದ ದಾಳಿಯನ್ನು ಎದುರಿಸುತ್ತಿದ್ದು, ಇದರಿಂದ ತೆಂಗಿನ ಇಳುವರಿ ಕುಸಿತವಾಗುವ ಜೊತೆಗೆ ರೈತರ ಆದಾಯಕ್ಕೂ ಭಾರೀ ಹೊಡೆತ ಬೀರುತ್ತಿದೆ ಎಂದು ವರದಿಯಾಗಿದೆ.

2016ರಲ್ಲಿ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪತ್ತೆಯಾದ ಈ ವೈಟ್‌ಫ್ಲೈ ಕೀಟವು ತೆಂಗು, ಬಾಳೆ, ತಾಳೆ ಮುಂತಾದ ಬೆಳೆಗಳ ಎಲೆಗಳಿಂದ ರಸವನ್ನು ಹೀರಿ, ‘ಹನಿಡ್ಯೂ’ ಎಂಬ ಅಂಟು ದ್ರವವನ್ನು ಹೊರಸೂಸುತ್ತದೆ. ಇದರಿಂದ ಎಲೆಗಳ ಮೇಲೆ ಕಪ್ಪು ಬೂದಿ (sooty mould) ಬೆಳೆಯಾಗಿ, ಸಸ್ಯಗಳ ದ್ಯುತಿ ಸಂಶ್ಲೇಷಣೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ ಬೆಳೆಗಳ ಆರೋಗ್ಯ ಕುಸಿದು ಇಳುವರಿ ತೀವ್ರವಾಗಿ ಕಡಿಮೆಯಾಗುತ್ತಿದೆ.

Advertisement

ದಕ್ಷಿಣ ಭಾರತದ ತೆಂಗಿನ ಬೆಳೆ ವಲಯಕ್ಕೆ ಆತಂಕ : ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುವ ತೆಂಗು, ಲಕ್ಷಾಂತರ ರೈತರ ಜೀವನಾಧಾರವಾಗಿದೆ. ಆದರೆ ವೈಟ್‌ಫ್ಲೈ ಹಾವಳಿಯಿಂದ ಅನೇಕ ತೋಟಗಳಲ್ಲಿ ಉತ್ಪಾದನೆ ಇಳಿಕೆಯಾಗಿದ್ದು, ಸಣ್ಣ ಮತ್ತು ಮಧ್ಯಮ ರೈತರು ಹೆಚ್ಚುತ್ತಿರುವ ಸಾಲಭಾರವನ್ನು ಎದುರಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೈಟ್‌ಫ್ಲೈ ನಿಯಂತ್ರಣಕ್ಕಾಗಿ ಕೆಲವು ಜೈವಿಕ ಮತ್ತು ರಾಸಾಯನಿಕ ಕ್ರಮಗಳನ್ನು ಶಿಫಾರಸು ಮಾಡಲಾಗಿದ್ದರೂ, ಅವುಗಳು  ನಿರೀಕ್ಷಿತ ಫಲ ನೀಡುತ್ತಿಲ್ಲ ಎಂಬುದು ರೈತರ ಅಳಲು. ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಕಾರ್ಮಿಕ ಕೊರತೆ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚಗಳು ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸುತ್ತಿವೆ. ತಜ್ಞರ ಪ್ರಕಾರ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು, ವಿಜ್ಞಾನ ಆಧಾರಿತ ಸಂಶೋಧನೆ ಮತ್ತು ಸರ್ಕಾರದ ನೆರವು ಇಲ್ಲದೆ ಈ ಸಮಸ್ಯೆಯನ್ನು ತಡೆಯುವುದು ಕಷ್ಟಸಾಧ್ಯವಾಗಿದೆ.

Advertisement

ವೈಟ್‌ಫ್ಲೈ ಸಮಸ್ಯೆ ಪರಿಹಾರವಾಗದಿದ್ದರೆ, ಭಾರತದ ತೆಂಗಿನ ಕೃಷಿ ಮಾತ್ರವಲ್ಲದೆ, ಗ್ರಾಮೀಣ ಆರ್ಥಿಕತೆಯ ಮೇಲೆಯೂ ದೀರ್ಘಕಾಲದ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ವರದಿ ನೀಡಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror