Advertisement
ಪ್ರಮುಖ

ಬಿಳಿ ಹಾತೆ ದಾಳಿಯಿಂದ ಸಂಕಷ್ಟದಲ್ಲಿರುವ ಭಾರತದ ತೆಂಗಿನ ಬೆಳೆ

Share

ಭಾರತದ ಪ್ರಮುಖ ತೆಂಗಿನ ಬೆಳೆ ಪ್ರದೇಶಗಳು ಗಂಭೀರವಾದ ವೈಟ್‌ಫ್ಲೈ ಅಥವಾ ಬಿಳಿ ಹಾತೆ (Rugose Spiralling Whitefly) ಕೀಟದ ದಾಳಿಯನ್ನು ಎದುರಿಸುತ್ತಿದ್ದು, ಇದರಿಂದ ತೆಂಗಿನ ಇಳುವರಿ ಕುಸಿತವಾಗುವ ಜೊತೆಗೆ ರೈತರ ಆದಾಯಕ್ಕೂ ಭಾರೀ ಹೊಡೆತ ಬೀರುತ್ತಿದೆ ಎಂದು ವರದಿಯಾಗಿದೆ.

2016ರಲ್ಲಿ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪತ್ತೆಯಾದ ಈ ವೈಟ್‌ಫ್ಲೈ ಕೀಟವು ತೆಂಗು, ಬಾಳೆ, ತಾಳೆ ಮುಂತಾದ ಬೆಳೆಗಳ ಎಲೆಗಳಿಂದ ರಸವನ್ನು ಹೀರಿ, ‘ಹನಿಡ್ಯೂ’ ಎಂಬ ಅಂಟು ದ್ರವವನ್ನು ಹೊರಸೂಸುತ್ತದೆ. ಇದರಿಂದ ಎಲೆಗಳ ಮೇಲೆ ಕಪ್ಪು ಬೂದಿ (sooty mould) ಬೆಳೆಯಾಗಿ, ಸಸ್ಯಗಳ ದ್ಯುತಿ ಸಂಶ್ಲೇಷಣೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ ಬೆಳೆಗಳ ಆರೋಗ್ಯ ಕುಸಿದು ಇಳುವರಿ ತೀವ್ರವಾಗಿ ಕಡಿಮೆಯಾಗುತ್ತಿದೆ.

ದಕ್ಷಿಣ ಭಾರತದ ತೆಂಗಿನ ಬೆಳೆ ವಲಯಕ್ಕೆ ಆತಂಕ : ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುವ ತೆಂಗು, ಲಕ್ಷಾಂತರ ರೈತರ ಜೀವನಾಧಾರವಾಗಿದೆ. ಆದರೆ ವೈಟ್‌ಫ್ಲೈ ಹಾವಳಿಯಿಂದ ಅನೇಕ ತೋಟಗಳಲ್ಲಿ ಉತ್ಪಾದನೆ ಇಳಿಕೆಯಾಗಿದ್ದು, ಸಣ್ಣ ಮತ್ತು ಮಧ್ಯಮ ರೈತರು ಹೆಚ್ಚುತ್ತಿರುವ ಸಾಲಭಾರವನ್ನು ಎದುರಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೈಟ್‌ಫ್ಲೈ ನಿಯಂತ್ರಣಕ್ಕಾಗಿ ಕೆಲವು ಜೈವಿಕ ಮತ್ತು ರಾಸಾಯನಿಕ ಕ್ರಮಗಳನ್ನು ಶಿಫಾರಸು ಮಾಡಲಾಗಿದ್ದರೂ, ಅವುಗಳು  ನಿರೀಕ್ಷಿತ ಫಲ ನೀಡುತ್ತಿಲ್ಲ ಎಂಬುದು ರೈತರ ಅಳಲು. ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಕಾರ್ಮಿಕ ಕೊರತೆ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚಗಳು ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸುತ್ತಿವೆ. ತಜ್ಞರ ಪ್ರಕಾರ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು, ವಿಜ್ಞಾನ ಆಧಾರಿತ ಸಂಶೋಧನೆ ಮತ್ತು ಸರ್ಕಾರದ ನೆರವು ಇಲ್ಲದೆ ಈ ಸಮಸ್ಯೆಯನ್ನು ತಡೆಯುವುದು ಕಷ್ಟಸಾಧ್ಯವಾಗಿದೆ.

ವೈಟ್‌ಫ್ಲೈ ಸಮಸ್ಯೆ ಪರಿಹಾರವಾಗದಿದ್ದರೆ, ಭಾರತದ ತೆಂಗಿನ ಕೃಷಿ ಮಾತ್ರವಲ್ಲದೆ, ಗ್ರಾಮೀಣ ಆರ್ಥಿಕತೆಯ ಮೇಲೆಯೂ ದೀರ್ಘಕಾಲದ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ವರದಿ ನೀಡಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

3 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

5 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

17 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

17 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago