Advertisement
ಪ್ರಮುಖ

ಬಿಳಿ ಹಾತೆ ದಾಳಿಯಿಂದ ಸಂಕಷ್ಟದಲ್ಲಿರುವ ಭಾರತದ ತೆಂಗಿನ ಬೆಳೆ

Share

ಭಾರತದ ಪ್ರಮುಖ ತೆಂಗಿನ ಬೆಳೆ ಪ್ರದೇಶಗಳು ಗಂಭೀರವಾದ ವೈಟ್‌ಫ್ಲೈ ಅಥವಾ ಬಿಳಿ ಹಾತೆ (Rugose Spiralling Whitefly) ಕೀಟದ ದಾಳಿಯನ್ನು ಎದುರಿಸುತ್ತಿದ್ದು, ಇದರಿಂದ ತೆಂಗಿನ ಇಳುವರಿ ಕುಸಿತವಾಗುವ ಜೊತೆಗೆ ರೈತರ ಆದಾಯಕ್ಕೂ ಭಾರೀ ಹೊಡೆತ ಬೀರುತ್ತಿದೆ ಎಂದು ವರದಿಯಾಗಿದೆ.

2016ರಲ್ಲಿ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪತ್ತೆಯಾದ ಈ ವೈಟ್‌ಫ್ಲೈ ಕೀಟವು ತೆಂಗು, ಬಾಳೆ, ತಾಳೆ ಮುಂತಾದ ಬೆಳೆಗಳ ಎಲೆಗಳಿಂದ ರಸವನ್ನು ಹೀರಿ, ‘ಹನಿಡ್ಯೂ’ ಎಂಬ ಅಂಟು ದ್ರವವನ್ನು ಹೊರಸೂಸುತ್ತದೆ. ಇದರಿಂದ ಎಲೆಗಳ ಮೇಲೆ ಕಪ್ಪು ಬೂದಿ (sooty mould) ಬೆಳೆಯಾಗಿ, ಸಸ್ಯಗಳ ದ್ಯುತಿ ಸಂಶ್ಲೇಷಣೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ ಬೆಳೆಗಳ ಆರೋಗ್ಯ ಕುಸಿದು ಇಳುವರಿ ತೀವ್ರವಾಗಿ ಕಡಿಮೆಯಾಗುತ್ತಿದೆ.

ದಕ್ಷಿಣ ಭಾರತದ ತೆಂಗಿನ ಬೆಳೆ ವಲಯಕ್ಕೆ ಆತಂಕ : ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುವ ತೆಂಗು, ಲಕ್ಷಾಂತರ ರೈತರ ಜೀವನಾಧಾರವಾಗಿದೆ. ಆದರೆ ವೈಟ್‌ಫ್ಲೈ ಹಾವಳಿಯಿಂದ ಅನೇಕ ತೋಟಗಳಲ್ಲಿ ಉತ್ಪಾದನೆ ಇಳಿಕೆಯಾಗಿದ್ದು, ಸಣ್ಣ ಮತ್ತು ಮಧ್ಯಮ ರೈತರು ಹೆಚ್ಚುತ್ತಿರುವ ಸಾಲಭಾರವನ್ನು ಎದುರಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೈಟ್‌ಫ್ಲೈ ನಿಯಂತ್ರಣಕ್ಕಾಗಿ ಕೆಲವು ಜೈವಿಕ ಮತ್ತು ರಾಸಾಯನಿಕ ಕ್ರಮಗಳನ್ನು ಶಿಫಾರಸು ಮಾಡಲಾಗಿದ್ದರೂ, ಅವುಗಳು  ನಿರೀಕ್ಷಿತ ಫಲ ನೀಡುತ್ತಿಲ್ಲ ಎಂಬುದು ರೈತರ ಅಳಲು. ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಕಾರ್ಮಿಕ ಕೊರತೆ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚಗಳು ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸುತ್ತಿವೆ. ತಜ್ಞರ ಪ್ರಕಾರ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು, ವಿಜ್ಞಾನ ಆಧಾರಿತ ಸಂಶೋಧನೆ ಮತ್ತು ಸರ್ಕಾರದ ನೆರವು ಇಲ್ಲದೆ ಈ ಸಮಸ್ಯೆಯನ್ನು ತಡೆಯುವುದು ಕಷ್ಟಸಾಧ್ಯವಾಗಿದೆ.

ವೈಟ್‌ಫ್ಲೈ ಸಮಸ್ಯೆ ಪರಿಹಾರವಾಗದಿದ್ದರೆ, ಭಾರತದ ತೆಂಗಿನ ಕೃಷಿ ಮಾತ್ರವಲ್ಲದೆ, ಗ್ರಾಮೀಣ ಆರ್ಥಿಕತೆಯ ಮೇಲೆಯೂ ದೀರ್ಘಕಾಲದ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ವರದಿ ನೀಡಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

8 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

8 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

9 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

9 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

20 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago