Advertisement
ಪ್ರಮುಖ

ಬಿಳಿ ಹಾತೆ ದಾಳಿಯಿಂದ ಸಂಕಷ್ಟದಲ್ಲಿರುವ ಭಾರತದ ತೆಂಗಿನ ಬೆಳೆ

Share

ಭಾರತದ ಪ್ರಮುಖ ತೆಂಗಿನ ಬೆಳೆ ಪ್ರದೇಶಗಳು ಗಂಭೀರವಾದ ವೈಟ್‌ಫ್ಲೈ ಅಥವಾ ಬಿಳಿ ಹಾತೆ (Rugose Spiralling Whitefly) ಕೀಟದ ದಾಳಿಯನ್ನು ಎದುರಿಸುತ್ತಿದ್ದು, ಇದರಿಂದ ತೆಂಗಿನ ಇಳುವರಿ ಕುಸಿತವಾಗುವ ಜೊತೆಗೆ ರೈತರ ಆದಾಯಕ್ಕೂ ಭಾರೀ ಹೊಡೆತ ಬೀರುತ್ತಿದೆ ಎಂದು ವರದಿಯಾಗಿದೆ.

2016ರಲ್ಲಿ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪತ್ತೆಯಾದ ಈ ವೈಟ್‌ಫ್ಲೈ ಕೀಟವು ತೆಂಗು, ಬಾಳೆ, ತಾಳೆ ಮುಂತಾದ ಬೆಳೆಗಳ ಎಲೆಗಳಿಂದ ರಸವನ್ನು ಹೀರಿ, ‘ಹನಿಡ್ಯೂ’ ಎಂಬ ಅಂಟು ದ್ರವವನ್ನು ಹೊರಸೂಸುತ್ತದೆ. ಇದರಿಂದ ಎಲೆಗಳ ಮೇಲೆ ಕಪ್ಪು ಬೂದಿ (sooty mould) ಬೆಳೆಯಾಗಿ, ಸಸ್ಯಗಳ ದ್ಯುತಿ ಸಂಶ್ಲೇಷಣೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ ಬೆಳೆಗಳ ಆರೋಗ್ಯ ಕುಸಿದು ಇಳುವರಿ ತೀವ್ರವಾಗಿ ಕಡಿಮೆಯಾಗುತ್ತಿದೆ.

ದಕ್ಷಿಣ ಭಾರತದ ತೆಂಗಿನ ಬೆಳೆ ವಲಯಕ್ಕೆ ಆತಂಕ : ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುವ ತೆಂಗು, ಲಕ್ಷಾಂತರ ರೈತರ ಜೀವನಾಧಾರವಾಗಿದೆ. ಆದರೆ ವೈಟ್‌ಫ್ಲೈ ಹಾವಳಿಯಿಂದ ಅನೇಕ ತೋಟಗಳಲ್ಲಿ ಉತ್ಪಾದನೆ ಇಳಿಕೆಯಾಗಿದ್ದು, ಸಣ್ಣ ಮತ್ತು ಮಧ್ಯಮ ರೈತರು ಹೆಚ್ಚುತ್ತಿರುವ ಸಾಲಭಾರವನ್ನು ಎದುರಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೈಟ್‌ಫ್ಲೈ ನಿಯಂತ್ರಣಕ್ಕಾಗಿ ಕೆಲವು ಜೈವಿಕ ಮತ್ತು ರಾಸಾಯನಿಕ ಕ್ರಮಗಳನ್ನು ಶಿಫಾರಸು ಮಾಡಲಾಗಿದ್ದರೂ, ಅವುಗಳು  ನಿರೀಕ್ಷಿತ ಫಲ ನೀಡುತ್ತಿಲ್ಲ ಎಂಬುದು ರೈತರ ಅಳಲು. ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಕಾರ್ಮಿಕ ಕೊರತೆ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚಗಳು ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸುತ್ತಿವೆ. ತಜ್ಞರ ಪ್ರಕಾರ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು, ವಿಜ್ಞಾನ ಆಧಾರಿತ ಸಂಶೋಧನೆ ಮತ್ತು ಸರ್ಕಾರದ ನೆರವು ಇಲ್ಲದೆ ಈ ಸಮಸ್ಯೆಯನ್ನು ತಡೆಯುವುದು ಕಷ್ಟಸಾಧ್ಯವಾಗಿದೆ.

ವೈಟ್‌ಫ್ಲೈ ಸಮಸ್ಯೆ ಪರಿಹಾರವಾಗದಿದ್ದರೆ, ಭಾರತದ ತೆಂಗಿನ ಕೃಷಿ ಮಾತ್ರವಲ್ಲದೆ, ಗ್ರಾಮೀಣ ಆರ್ಥಿಕತೆಯ ಮೇಲೆಯೂ ದೀರ್ಘಕಾಲದ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ವರದಿ ನೀಡಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

40 minutes ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

5 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

6 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

8 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

9 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

22 hours ago