ರಾಷ್ಟ್ರೀಯ

ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್‌ |‌ 66 ಮಕ್ಕಳ ಸಾವಿನ ನಂತರ WHO ಎಚ್ಚರಿಕೆ | ತನಿಖೆ ಆರಂಭಿಸಿದ ಭಾರತೀಯ ಔಷಧ ನಿಯಂತ್ರಕ ಸಂಸ್ಥೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿನ ಮಕ್ಕಳ ಸಾವಿಗೆ ಭಾರತೀಯ ಸಂಸ್ಥೆಯೊಂದು ತಯಾರಿಸುವ ಕೆಮ್ಮು ಸಿರಪ್‌ಗಳು ಕಾರಣವಾಗಿತ್ತು. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಔಷಧಿ ನಿಯಂತ್ರಕ ಸಂಸ್ಥೆ (DCGI) ತನಿಖೆ ಆರಂಭಿಸಿದೆ. ಸಂಸ್ಥೆಯು ತಯಾರಿಸಿದ ನಾಲ್ಕು ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗಾಗಿ ಕೋಲ್ಕತ್ತಾದ ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿಗೆ ಕಳುಹಿಸಿದೆ.

Advertisement
Advertisement

ಹರ್ಯಾಣದ ಸೋನೆಪತ್ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಉತ್ಪಾದಿಸಿದ  ನಾಲ್ಕು ಬಗೆಯ ಕೆಮ್ಮಿನ ಸಿರಪ್‌ ಕಾರಣದಿಂದ  ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ  ಬುಧವಾರ ಎಚ್ಚರಿಸಿತ್ತು. ಬಳಿಕ ಭಾರತೀಯ ಮೂಲದ ಆ ಕಂಪನಿಯು ತಯಾರಿಸಿದ ನಾಲ್ಕು ಜ್ವರ, ಶೀತ ಮತ್ತು ಕೆಮ್ಮು ಸಿರಪ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ, ಅವುಗಳನ್ನು ಬಳಸದಂತೆ ಜನರನ್ನು ಹೇಳಿದೆ. ಎಲ್ಲಾ ನಾಲ್ಕು ಸಿರಪ್‌ಗಳು ಹರಿಯಾಣ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್‌ನಿಂದ ತಯಾರಿಸಲ್ಪಟ್ಟಿದೆ. ನಾಲ್ಕು ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯು ಅವುಗಳು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು ಎಥಿಲೀನ್ ಗ್ಲೈಕೋಲ್ಮಾ ಹೊಂದಿದೆ ಎಂದು  ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಡೈಎಥಿಲೀನ್ ಗ್ಲೈಕಾಲ್ ಮತ್ತು ಎಥಿಲೀನ್ ಗ್ಲೈಕಾಲ್ ವಿಷಕಾರಿ ಪರಿಣಾಮಗಳನ್ನು ಉಂಟುಮಾಡಬಹುದು. ಇದರಲ್ಲಿ ಹೊಟ್ಟೆ ನೋವು, ವಾಂತಿ, ಅತಿಸಾರ, ತಲೆನೋವು, ತೀವ್ರವಾದ ಮೂತ್ರಪಿಂಡದ ಸಮಸ್ಯೆ ಸಾವಿಗೆ ಕಾರಣವಾಗಬಹುದು ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಭಾರತದಲ್ಲಿ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ 17 ಮಕ್ಕಳ ಸಾವು ವರದಿಯಾಗಿದೆ. ಇನ್ನೊಂದು ಘಟನೆಯಲ್ಲಿ, ಕಳೆದ ವರ್ಷ ನವದೆಹಲಿಯಲ್ಲಿ ಕನಿಷ್ಠ ಮೂರು ಮಕ್ಕಳು  ಕೆಮ್ಮಿನ ಸಿರಪ್ ಅನ್ನು ಸೇವಿಸಿದ ನಂತರ ಸಾವನ್ನಪ್ಪಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 minutes ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

8 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

8 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

8 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

9 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

9 hours ago