Advertisement
ರಾಷ್ಟ್ರೀಯ

ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್‌ |‌ 66 ಮಕ್ಕಳ ಸಾವಿನ ನಂತರ WHO ಎಚ್ಚರಿಕೆ | ತನಿಖೆ ಆರಂಭಿಸಿದ ಭಾರತೀಯ ಔಷಧ ನಿಯಂತ್ರಕ ಸಂಸ್ಥೆ |

Share

ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿನ ಮಕ್ಕಳ ಸಾವಿಗೆ ಭಾರತೀಯ ಸಂಸ್ಥೆಯೊಂದು ತಯಾರಿಸುವ ಕೆಮ್ಮು ಸಿರಪ್‌ಗಳು ಕಾರಣವಾಗಿತ್ತು. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಔಷಧಿ ನಿಯಂತ್ರಕ ಸಂಸ್ಥೆ (DCGI) ತನಿಖೆ ಆರಂಭಿಸಿದೆ. ಸಂಸ್ಥೆಯು ತಯಾರಿಸಿದ ನಾಲ್ಕು ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗಾಗಿ ಕೋಲ್ಕತ್ತಾದ ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿಗೆ ಕಳುಹಿಸಿದೆ.

ಹರ್ಯಾಣದ ಸೋನೆಪತ್ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಉತ್ಪಾದಿಸಿದ  ನಾಲ್ಕು ಬಗೆಯ ಕೆಮ್ಮಿನ ಸಿರಪ್‌ ಕಾರಣದಿಂದ  ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ  ಬುಧವಾರ ಎಚ್ಚರಿಸಿತ್ತು. ಬಳಿಕ ಭಾರತೀಯ ಮೂಲದ ಆ ಕಂಪನಿಯು ತಯಾರಿಸಿದ ನಾಲ್ಕು ಜ್ವರ, ಶೀತ ಮತ್ತು ಕೆಮ್ಮು ಸಿರಪ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ, ಅವುಗಳನ್ನು ಬಳಸದಂತೆ ಜನರನ್ನು ಹೇಳಿದೆ. ಎಲ್ಲಾ ನಾಲ್ಕು ಸಿರಪ್‌ಗಳು ಹರಿಯಾಣ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್‌ನಿಂದ ತಯಾರಿಸಲ್ಪಟ್ಟಿದೆ. ನಾಲ್ಕು ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯು ಅವುಗಳು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು ಎಥಿಲೀನ್ ಗ್ಲೈಕೋಲ್ಮಾ ಹೊಂದಿದೆ ಎಂದು  ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಡೈಎಥಿಲೀನ್ ಗ್ಲೈಕಾಲ್ ಮತ್ತು ಎಥಿಲೀನ್ ಗ್ಲೈಕಾಲ್ ವಿಷಕಾರಿ ಪರಿಣಾಮಗಳನ್ನು ಉಂಟುಮಾಡಬಹುದು. ಇದರಲ್ಲಿ ಹೊಟ್ಟೆ ನೋವು, ವಾಂತಿ, ಅತಿಸಾರ, ತಲೆನೋವು, ತೀವ್ರವಾದ ಮೂತ್ರಪಿಂಡದ ಸಮಸ್ಯೆ ಸಾವಿಗೆ ಕಾರಣವಾಗಬಹುದು ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಭಾರತದಲ್ಲಿ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ 17 ಮಕ್ಕಳ ಸಾವು ವರದಿಯಾಗಿದೆ. ಇನ್ನೊಂದು ಘಟನೆಯಲ್ಲಿ, ಕಳೆದ ವರ್ಷ ನವದೆಹಲಿಯಲ್ಲಿ ಕನಿಷ್ಠ ಮೂರು ಮಕ್ಕಳು  ಕೆಮ್ಮಿನ ಸಿರಪ್ ಅನ್ನು ಸೇವಿಸಿದ ನಂತರ ಸಾವನ್ನಪ್ಪಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

9 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

20 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

21 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago