Advertisement
ರಾಷ್ಟ್ರೀಯ

ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್‌ |‌ 66 ಮಕ್ಕಳ ಸಾವಿನ ನಂತರ WHO ಎಚ್ಚರಿಕೆ | ತನಿಖೆ ಆರಂಭಿಸಿದ ಭಾರತೀಯ ಔಷಧ ನಿಯಂತ್ರಕ ಸಂಸ್ಥೆ |

Share

ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿನ ಮಕ್ಕಳ ಸಾವಿಗೆ ಭಾರತೀಯ ಸಂಸ್ಥೆಯೊಂದು ತಯಾರಿಸುವ ಕೆಮ್ಮು ಸಿರಪ್‌ಗಳು ಕಾರಣವಾಗಿತ್ತು. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಔಷಧಿ ನಿಯಂತ್ರಕ ಸಂಸ್ಥೆ (DCGI) ತನಿಖೆ ಆರಂಭಿಸಿದೆ. ಸಂಸ್ಥೆಯು ತಯಾರಿಸಿದ ನಾಲ್ಕು ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗಾಗಿ ಕೋಲ್ಕತ್ತಾದ ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿಗೆ ಕಳುಹಿಸಿದೆ.

ಹರ್ಯಾಣದ ಸೋನೆಪತ್ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಉತ್ಪಾದಿಸಿದ  ನಾಲ್ಕು ಬಗೆಯ ಕೆಮ್ಮಿನ ಸಿರಪ್‌ ಕಾರಣದಿಂದ  ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ  ಬುಧವಾರ ಎಚ್ಚರಿಸಿತ್ತು. ಬಳಿಕ ಭಾರತೀಯ ಮೂಲದ ಆ ಕಂಪನಿಯು ತಯಾರಿಸಿದ ನಾಲ್ಕು ಜ್ವರ, ಶೀತ ಮತ್ತು ಕೆಮ್ಮು ಸಿರಪ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ, ಅವುಗಳನ್ನು ಬಳಸದಂತೆ ಜನರನ್ನು ಹೇಳಿದೆ. ಎಲ್ಲಾ ನಾಲ್ಕು ಸಿರಪ್‌ಗಳು ಹರಿಯಾಣ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್‌ನಿಂದ ತಯಾರಿಸಲ್ಪಟ್ಟಿದೆ. ನಾಲ್ಕು ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯು ಅವುಗಳು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು ಎಥಿಲೀನ್ ಗ್ಲೈಕೋಲ್ಮಾ ಹೊಂದಿದೆ ಎಂದು  ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಡೈಎಥಿಲೀನ್ ಗ್ಲೈಕಾಲ್ ಮತ್ತು ಎಥಿಲೀನ್ ಗ್ಲೈಕಾಲ್ ವಿಷಕಾರಿ ಪರಿಣಾಮಗಳನ್ನು ಉಂಟುಮಾಡಬಹುದು. ಇದರಲ್ಲಿ ಹೊಟ್ಟೆ ನೋವು, ವಾಂತಿ, ಅತಿಸಾರ, ತಲೆನೋವು, ತೀವ್ರವಾದ ಮೂತ್ರಪಿಂಡದ ಸಮಸ್ಯೆ ಸಾವಿಗೆ ಕಾರಣವಾಗಬಹುದು ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಭಾರತದಲ್ಲಿ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ 17 ಮಕ್ಕಳ ಸಾವು ವರದಿಯಾಗಿದೆ. ಇನ್ನೊಂದು ಘಟನೆಯಲ್ಲಿ, ಕಳೆದ ವರ್ಷ ನವದೆಹಲಿಯಲ್ಲಿ ಕನಿಷ್ಠ ಮೂರು ಮಕ್ಕಳು  ಕೆಮ್ಮಿನ ಸಿರಪ್ ಅನ್ನು ಸೇವಿಸಿದ ನಂತರ ಸಾವನ್ನಪ್ಪಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

8 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

9 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

14 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

21 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago