ಭಾರತದ ಆಂತರಿಕ ಶತ್ರುಗಳು ಯಾರು ? | ಹಿಂದೂ ಜನಜಾಗೃತಿ ಸಮಿತಿ ಸಂವಾದದಲ್ಲಿ ಕರ್ನಲ್ ಆರ್.ಎಸ್.ಎನ್. ಸಿಂಗ್ ಹೇಳಿದ್ದೇನು?

October 13, 2023
9:56 AM
ಯಾವುದೇ ದೇಶವು ಬಾಹ್ಯ ಶತ್ರುಗಳಿಂದಲ್ಲ, ಬದಲಾಗಿ ಆಂತರಿಕ ಶತ್ರುಗಳಿಂದ ಕುಸಿಯುತ್ತದೆ. ಆದ್ದರಿಂದ ನಾವು ಪಾಕಿಸ್ತಾನ ಮತ್ತು ಚೀನಾ ಈ ಎರಡು ಶತ್ರುಗಳೊಂದಿಗೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ ಯೋಚಿಸಬೇಕಾಗಿದೆ ಎಂದು ದೆಹಲಿಯ ರಕ್ಷಣಾ ತಜ್ಞ ನಿವೃತ್ತ ಕರ್ನಲ್ ಆರ್.ಎಸ್.ಎನ್. ಸಿಂಗ್ ಎಚ್ಚರಿಸಿದರು.

ಪಾಕಿಸ್ತಾನ ಮತ್ತು ಚೀನಾ ಸೇರಿದಂತೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ ನಾವು ವಿಚಾರ ಮಾಡಬೇಕಾಗಬಹುದು ಎಂದು ರಕ್ಷಣಾ ತಜ್ಞ ಕರ್ನಲ್ ಆರ್.ಎಸ್.ಎನ್. ಸಿಂಗ್ ಎಚ್ಚರಿಸಿದ್ದಾರೆ.

‘ಭಾರತದ ಆಂತರಿಕ ಶತ್ರುಗಳು ಯಾರು ?’ ಎಂಬ ವಿಷಯದ ಕುರಿತು ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ವಿಶೇಷ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.  ಹಿಂದೂ ಜನಜಾಗೃತಿ ಸಮಿತಿಯ ದೆಹಲಿ ವಕ್ತಾರ ನರೇಂದ್ರ ಸುರ್ವೆ ಸಂವಾದ ನಡೆಸಿದ್ದರು.

ಆಂತರಿಕ ಶತ್ರುಗಳಿಂದಾಗಿ ಅನೇಕ ದೇಶಗಳ ಹಾನಿಯಾಗಿದೆ. ವಿವಿಧ ಯುದ್ಧ ಸಾಮಗ್ರಿಗಳನ್ನು ಹೊಂದಿದ್ದರೂ ಆಂತರಿಕ ಶತ್ರುಗಳು ಮತ್ತು ಸಾಂಸ್ಕೃತಿಕ ಭಿನ್ನಾಭಿಪ್ರಾಯಗಳಿಂದಾಗಿ ‘ಸೋವಿಯತ್ ಯುನಿಯನ್’ ಅನೇಕ ದೇಶಗಳಾಗಿ ವಿಭಜಿಸಲ್ಪಟ್ಟಿರುವುದನ್ನು ನಾವು ನೋಡಿದ್ದೇವೆ. ಭಾರತದ ವಿವಿಧ ಶತ್ರುಗಳು ದೇಶದ ಮೇಲೆ ದಾಳಿ ಮಾಡುತ್ತಿದ್ದಾರೆ. ಭಾರತದ ವಿರುದ್ಧ ‘ಪ್ರಾಕ್ಸಿ ವಾರ್’ ನಡೆಯುತ್ತಿದೆ, ಇದರಲ್ಲಿ ಕೆಲವು ದೇಶವಿರೋಧಿ ರಾಜಕೀಯ ಪಕ್ಷಗಳು, ಶಿಕ್ಷಣ ಸಂಸ್ಥೆಗಳು, ವಕೀಲರು, ಪತ್ರಕರ್ತರ ಗುಂಪು ಕೆಲಸ ಮಾಡುತ್ತಿವೆ. ಯಾವುದೇ ದೇಶವು ಬಾಹ್ಯ ಶತ್ರುಗಳಿಂದಲ್ಲ, ಬದಲಾಗಿ ಆಂತರಿಕ ಶತ್ರುಗಳಿಂದ ಕುಸಿಯುತ್ತದೆ. ಆದ್ದರಿಂದ ನಾವು ಪಾಕಿಸ್ತಾನ ಮತ್ತು ಚೀನಾ ಈ ಎರಡು ಶತ್ರುಗಳೊಂದಿಗೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ ಯೋಚಿಸಬೇಕಾಗಿದೆ ಎಂದು ದೆಹಲಿಯ ರಕ್ಷಣಾ ತಜ್ಞ ಮತ್ತು ‘ಭಾರತ್ ಕೆ ಅಂದರೂನಿ ಶತ್ರು’ ಈ ಪುಸ್ತಕದ ಲೇಖಕ ನಿವೃತ್ತ ಕರ್ನಲ್ ಆರ್.ಎಸ್.ಎನ್. ಸಿಂಗ್ ಎಚ್ಚರಿಸಿದರು.

ನಮ್ಮ ಹೋರಾಟ ಕೇವಲ ಪಾಕಿಸ್ತಾನದೊಂದಿಗೆ ಆಗಿರದೇ ಅಲ್ಲಿ ಹುಟ್ಟಿರುವ ‘ಜಿಹಾದ್’ನೊಂದಿಗೆ ಆಗಿದೆ. ಈ ಜಿಹಾದ್ ಅನ್ನು ಬೆಂಬಲಿಸುವ ಮತ್ತು ಸಹಾಯ ಮಾಡುವ ಜನರು, ‘ಕಮ್ಯುನಿಸ್ಟ್ ಪಾರ್ಟಿ ಆಫ್ ಚೈನಾ’, ಅವರ ಮಾವೋವಾದಿಗಳು ಆಗಿದ್ದಾರೆ. ಹಾಗೆಯೇ ಅವರು ಇಲ್ಲಿನ ಚರ್ಚ್‌ನೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದಾರೆ. ಇಂತಹವರೊಂದಿಗೆ ಅನೇಕ ಭಾರತ ವಿರೋಧಿ ಅಂಶಗಳ ವಿರುದ್ಧ ನಾವು ಹೋರಾಡಬೇಕಾಗಿದೆ. ಜಗತ್ತಿನಾದ್ಯಂತದ ಅನೇಕ ದೇಶಗಳು ಅಲ್ಲಿಯ ಪಂಥೀಯ ಅಥವಾ ಧಾರ್ಮಿಕ ಬಹುಸಂಖ್ಯಾತರ ಆಧಾರದ ಮೇಲೆ ರಚಿಸಲ್ಪಟ್ಟಿದೆ. ಭಾರತದಿಂದ ಬೇರ್ಪಟ್ಟ ಪಾಕಿಸ್ತಾನ ದೇಶವನ್ನು ಮುಸಲ್ಮಾನರಿಗೆ ನೀಡಲಾಯಿತು. ಯಾವುದೇ ಯುದ್ಧದಲ್ಲಿ ಪಂಥ ಅಥವಾ ಧರ್ಮದ ದೊಡ್ಡ ಪಾತ್ರವಿರುತ್ತದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಈಗ ನಡೆಯುತ್ತಿರುವ ಯುದ್ಧದಲ್ಲಿಯೂ ಇದು ಕಾಣಿಸುತ್ತಿದೆ.

ದೇಶದ ಬಹುಸಂಖ್ಯಾತ ಸಮಾಜ ಚದುರಿ ಹೋದಾಗ ರಾಷ್ಟ್ರ ನಿರ್ಮಾಣ ಆಗುವುದು ಹೇಗೆ ? ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳ ನರಸಂಹಾರವಾಯಿತು. ಈಗ ಅಲ್ಲಿ ಉಳಿದಿರುವ ಹಿಂದೂಗಳಿಗೆ ಏನು ಪರ್ಯಾಯ ಉಳಿದಿದೆ ? ಒಂದು ಕಾಲದಲ್ಲಿ ಭಾರತದಲ್ಲಿ ‘ಸನಾತನ ಧರ್ಮಿ’ ಮತ್ತು ‘ದೇಶಪ್ರೇಮಿ’ ಯಾಗಿರುವುದು ಎಂದರೆ ಅಭಿಶಾಪವಾಗಿತ್ತು. ಈಗ ಕಾಲ ಬದಲಾಗಿದೆ. ನಿಮ್ಮನ್ನು ರಕ್ಷಿಸುವವರನ್ನು ಗೌರವಿಸಿ. ನೀವು ಅಪಾಯದಲ್ಲಿದ್ದಾಗ, ಹಿಂದೂ ಸಂಘಟನೆಗಳು ನಿಮ್ಮನ್ನು ರಕ್ಷಿಸುತ್ತವೆ. ಯಾವುದೇ ಸರ್ಕಾರಿ ವ್ಯವಸ್ಥೆಯೂ ನಿಮ್ಮ ರಕ್ಷಣೆ ಮಾಡುವುದಿಲ್ಲ. ದೆಹಲಿಯಲ್ಲಿ ಗಲಭೆಗಳಾದಾಗ ಸರ್ಕಾರಿ ವ್ಯವಸ್ಥೆ ಹಿಂದೂಗಳನ್ನು ರಕ್ಷಿಸಿತ್ತೇ ? ಹಿಂದೂಗಳು ತಮ್ಮ ಬಗ್ಗೆ ಅಭಿಮಾನವನ್ನು ಹೊಂದಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು, ಆಗ ವಿಶ್ವದ ಯಾವುದೇ ಶಕ್ತಿಯೂ ನಿಮ್ಮನ್ನು ಕೀಳಾಗಿ ನೋಡುವುದಿಲ್ಲ ಎಂದು ಕರ್ನಲ್ ಆರ್.ಎಸ್.ಎನ್. ಸಿಂಗ್ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror