Advertisement
MIRROR FOCUS

ಭಾರತದ ಆಂತರಿಕ ಶತ್ರುಗಳು ಯಾರು ? | ಹಿಂದೂ ಜನಜಾಗೃತಿ ಸಮಿತಿ ಸಂವಾದದಲ್ಲಿ ಕರ್ನಲ್ ಆರ್.ಎಸ್.ಎನ್. ಸಿಂಗ್ ಹೇಳಿದ್ದೇನು?

Share

ಪಾಕಿಸ್ತಾನ ಮತ್ತು ಚೀನಾ ಸೇರಿದಂತೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ ನಾವು ವಿಚಾರ ಮಾಡಬೇಕಾಗಬಹುದು ಎಂದು ರಕ್ಷಣಾ ತಜ್ಞ ಕರ್ನಲ್ ಆರ್.ಎಸ್.ಎನ್. ಸಿಂಗ್ ಎಚ್ಚರಿಸಿದ್ದಾರೆ.

Advertisement
Advertisement
Advertisement
Advertisement

‘ಭಾರತದ ಆಂತರಿಕ ಶತ್ರುಗಳು ಯಾರು ?’ ಎಂಬ ವಿಷಯದ ಕುರಿತು ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ವಿಶೇಷ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.  ಹಿಂದೂ ಜನಜಾಗೃತಿ ಸಮಿತಿಯ ದೆಹಲಿ ವಕ್ತಾರ ನರೇಂದ್ರ ಸುರ್ವೆ ಸಂವಾದ ನಡೆಸಿದ್ದರು.

Advertisement

ಆಂತರಿಕ ಶತ್ರುಗಳಿಂದಾಗಿ ಅನೇಕ ದೇಶಗಳ ಹಾನಿಯಾಗಿದೆ. ವಿವಿಧ ಯುದ್ಧ ಸಾಮಗ್ರಿಗಳನ್ನು ಹೊಂದಿದ್ದರೂ ಆಂತರಿಕ ಶತ್ರುಗಳು ಮತ್ತು ಸಾಂಸ್ಕೃತಿಕ ಭಿನ್ನಾಭಿಪ್ರಾಯಗಳಿಂದಾಗಿ ‘ಸೋವಿಯತ್ ಯುನಿಯನ್’ ಅನೇಕ ದೇಶಗಳಾಗಿ ವಿಭಜಿಸಲ್ಪಟ್ಟಿರುವುದನ್ನು ನಾವು ನೋಡಿದ್ದೇವೆ. ಭಾರತದ ವಿವಿಧ ಶತ್ರುಗಳು ದೇಶದ ಮೇಲೆ ದಾಳಿ ಮಾಡುತ್ತಿದ್ದಾರೆ. ಭಾರತದ ವಿರುದ್ಧ ‘ಪ್ರಾಕ್ಸಿ ವಾರ್’ ನಡೆಯುತ್ತಿದೆ, ಇದರಲ್ಲಿ ಕೆಲವು ದೇಶವಿರೋಧಿ ರಾಜಕೀಯ ಪಕ್ಷಗಳು, ಶಿಕ್ಷಣ ಸಂಸ್ಥೆಗಳು, ವಕೀಲರು, ಪತ್ರಕರ್ತರ ಗುಂಪು ಕೆಲಸ ಮಾಡುತ್ತಿವೆ. ಯಾವುದೇ ದೇಶವು ಬಾಹ್ಯ ಶತ್ರುಗಳಿಂದಲ್ಲ, ಬದಲಾಗಿ ಆಂತರಿಕ ಶತ್ರುಗಳಿಂದ ಕುಸಿಯುತ್ತದೆ. ಆದ್ದರಿಂದ ನಾವು ಪಾಕಿಸ್ತಾನ ಮತ್ತು ಚೀನಾ ಈ ಎರಡು ಶತ್ರುಗಳೊಂದಿಗೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ ಯೋಚಿಸಬೇಕಾಗಿದೆ ಎಂದು ದೆಹಲಿಯ ರಕ್ಷಣಾ ತಜ್ಞ ಮತ್ತು ‘ಭಾರತ್ ಕೆ ಅಂದರೂನಿ ಶತ್ರು’ ಈ ಪುಸ್ತಕದ ಲೇಖಕ ನಿವೃತ್ತ ಕರ್ನಲ್ ಆರ್.ಎಸ್.ಎನ್. ಸಿಂಗ್ ಎಚ್ಚರಿಸಿದರು.

ನಮ್ಮ ಹೋರಾಟ ಕೇವಲ ಪಾಕಿಸ್ತಾನದೊಂದಿಗೆ ಆಗಿರದೇ ಅಲ್ಲಿ ಹುಟ್ಟಿರುವ ‘ಜಿಹಾದ್’ನೊಂದಿಗೆ ಆಗಿದೆ. ಈ ಜಿಹಾದ್ ಅನ್ನು ಬೆಂಬಲಿಸುವ ಮತ್ತು ಸಹಾಯ ಮಾಡುವ ಜನರು, ‘ಕಮ್ಯುನಿಸ್ಟ್ ಪಾರ್ಟಿ ಆಫ್ ಚೈನಾ’, ಅವರ ಮಾವೋವಾದಿಗಳು ಆಗಿದ್ದಾರೆ. ಹಾಗೆಯೇ ಅವರು ಇಲ್ಲಿನ ಚರ್ಚ್‌ನೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದಾರೆ. ಇಂತಹವರೊಂದಿಗೆ ಅನೇಕ ಭಾರತ ವಿರೋಧಿ ಅಂಶಗಳ ವಿರುದ್ಧ ನಾವು ಹೋರಾಡಬೇಕಾಗಿದೆ. ಜಗತ್ತಿನಾದ್ಯಂತದ ಅನೇಕ ದೇಶಗಳು ಅಲ್ಲಿಯ ಪಂಥೀಯ ಅಥವಾ ಧಾರ್ಮಿಕ ಬಹುಸಂಖ್ಯಾತರ ಆಧಾರದ ಮೇಲೆ ರಚಿಸಲ್ಪಟ್ಟಿದೆ. ಭಾರತದಿಂದ ಬೇರ್ಪಟ್ಟ ಪಾಕಿಸ್ತಾನ ದೇಶವನ್ನು ಮುಸಲ್ಮಾನರಿಗೆ ನೀಡಲಾಯಿತು. ಯಾವುದೇ ಯುದ್ಧದಲ್ಲಿ ಪಂಥ ಅಥವಾ ಧರ್ಮದ ದೊಡ್ಡ ಪಾತ್ರವಿರುತ್ತದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಈಗ ನಡೆಯುತ್ತಿರುವ ಯುದ್ಧದಲ್ಲಿಯೂ ಇದು ಕಾಣಿಸುತ್ತಿದೆ.

Advertisement

ದೇಶದ ಬಹುಸಂಖ್ಯಾತ ಸಮಾಜ ಚದುರಿ ಹೋದಾಗ ರಾಷ್ಟ್ರ ನಿರ್ಮಾಣ ಆಗುವುದು ಹೇಗೆ ? ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳ ನರಸಂಹಾರವಾಯಿತು. ಈಗ ಅಲ್ಲಿ ಉಳಿದಿರುವ ಹಿಂದೂಗಳಿಗೆ ಏನು ಪರ್ಯಾಯ ಉಳಿದಿದೆ ? ಒಂದು ಕಾಲದಲ್ಲಿ ಭಾರತದಲ್ಲಿ ‘ಸನಾತನ ಧರ್ಮಿ’ ಮತ್ತು ‘ದೇಶಪ್ರೇಮಿ’ ಯಾಗಿರುವುದು ಎಂದರೆ ಅಭಿಶಾಪವಾಗಿತ್ತು. ಈಗ ಕಾಲ ಬದಲಾಗಿದೆ. ನಿಮ್ಮನ್ನು ರಕ್ಷಿಸುವವರನ್ನು ಗೌರವಿಸಿ. ನೀವು ಅಪಾಯದಲ್ಲಿದ್ದಾಗ, ಹಿಂದೂ ಸಂಘಟನೆಗಳು ನಿಮ್ಮನ್ನು ರಕ್ಷಿಸುತ್ತವೆ. ಯಾವುದೇ ಸರ್ಕಾರಿ ವ್ಯವಸ್ಥೆಯೂ ನಿಮ್ಮ ರಕ್ಷಣೆ ಮಾಡುವುದಿಲ್ಲ. ದೆಹಲಿಯಲ್ಲಿ ಗಲಭೆಗಳಾದಾಗ ಸರ್ಕಾರಿ ವ್ಯವಸ್ಥೆ ಹಿಂದೂಗಳನ್ನು ರಕ್ಷಿಸಿತ್ತೇ ? ಹಿಂದೂಗಳು ತಮ್ಮ ಬಗ್ಗೆ ಅಭಿಮಾನವನ್ನು ಹೊಂದಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು, ಆಗ ವಿಶ್ವದ ಯಾವುದೇ ಶಕ್ತಿಯೂ ನಿಮ್ಮನ್ನು ಕೀಳಾಗಿ ನೋಡುವುದಿಲ್ಲ ಎಂದು ಕರ್ನಲ್ ಆರ್.ಎಸ್.ಎನ್. ಸಿಂಗ್ ಹೇಳಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

12 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

12 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

12 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

12 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

19 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

20 hours ago