ಅಡಿಕೆ ಬೆಳೆಗಾರರ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವಂತೆ WHO ಪ್ರಾಯೋಜಿತ ವೆಬಿನಾರ್ನಲ್ಲಿ ನಡೆಯುತ್ತಿರುವ ಚರ್ಚೆ ಆತಂಕ ಮೂಡಿಸಿದೆ. ಅಲ್ಲಿ ಮುಖ್ಯ ವಿಷಯವೇ ಅಡಿಕೆಯನ್ನು ಯಾವ ವಿಧಾನದ ಮೂಲಕ ನಿಯಂತ್ರಿಸಬಹುದು ಎಂಬುದಾಗಿದ್ದು, ಅಡಿಕೆಯನ್ನು “ಕ್ಯಾನ್ಸರ್ ಕಾರಕ” ಎಂದು ನಿರ್ಧರಿಸಲಾಗಿದೆ ಎಂಬ ಹಿನ್ನೆಲೆ ಈಗಾಗಲೇ ರೂಪುಗೊಂಡಿದೆ.
ಈ ಕಾರಣದಿಂದ ಆ ವೇದಿಕೆಯಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಸಮರ್ಥವಾಗಿ ವಾದಿಸುವ ಅವಕಾಶ ಬಹುತೇಕ ಇಲ್ಲದಂತಾಗಿದೆ. WHO ಜೊತೆಗೆ ಅಂತಹ ವಿಚಾರ ಚರ್ಚೆ ಮಾಡುವ ಅವಕಾಶವನ್ನು ನಾವು ಈಗಾಗಲೇ ಕಳೆದುಕೊಂಡಿದ್ದೇವೆ. ಮುಂದೆ ಅದು ದೊರಕುವುದು ಸಂದೇಹಾಸ್ಪದ.
ಭಾರತದೊಳಗೂ ಅವಕಾಶ ಕಡಿಮೆ: ಇದರಿಂದ ಭಾರತದೊಳಗೂ ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬುದನ್ನು ವೈಜ್ಞಾನಿಕವಾಗಿ ಸಾಧಿಸಿ ತೋರಿಸುವ ಅವಕಾಶ ಕುಗ್ಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್ ಮುಂದೆ ಮಂಡಿಸಿರುವ ಅಫಿಡವಿಟ್ ಬದಲಾಯಿಸುವ ಸಾಧ್ಯತೆಯೂ ಬಹಳ ಕಡಿಮೆ. ಈ ಹಂತದಲ್ಲಿ ಬೆಳೆಗಾರರು ಮತ್ತು ಸಂಸ್ಥೆಗಳ ಮುಂದೆ ಉಳಿಯುವ ಅವಕಾಶ ಎಂದರೆ – “ಯಾವ ಮಾದರಿಯ ನಿಯಂತ್ರಣಗಳು ಬರಬಹುದು?” ಎಂಬುದನ್ನು ಗಮನಿಸಿ, ಅದಕ್ಕೆ ಪ್ರತಿತಂತ್ರ ರೂಪಿಸುವುದು ಮಾತ್ರ.
ವೆಬಿನಾರ್ನಲ್ಲಿ ಭಾಗವಹಿಸುವುದು ಅಗತ್ಯ : ನಮ್ಮ ಕಡೆಯಿಂದ ಯಾರಾದರೂ ಆ ವೆಬಿನಾರ್ನಲ್ಲಿ ಭಾಗವಹಿಸಿದರೆ, WHO ಯಾವ ಮಾದರಿಯ ನಿಯಂತ್ರಣ ಹೇರಲು ತಯಾರಿ ನಡೆಸುತ್ತಿದೆ ಎಂಬುದು ಸ್ಪಷ್ಟವಾಗಬಹುದು. ಆದರೆ ಚರ್ಚಿಸಲು ಬೇಕಾದ ಮಾಹಿತಿ ಮತ್ತು ಸಾಮರ್ಥ್ಯ ನಮ್ಮಲ್ಲಿ ಇಲ್ಲ ಎಂಬುದು ಕಟು ವಾಸ್ತವ.
ನಾವು ಈಗ ಮಾಡಬಹುದಾದ ಏನು? – ಡೇಟಾ ಆಧಾರಿತ ಪ್ರತಿತಂತ್ರ:
Safe Limit ನಿರ್ಧಾರ ಅತ್ಯಂತ ಮುಖ್ಯ : WHOಗೆ ವರದಿ ನೀಡಿದ ತಜ್ಞರು ಬಳಸಿದ arecoline ಪ್ರಮಾಣವನ್ನು ಪರಿಶೀಲಿಸಬೇಕು. ಅವರ ಪ್ರಯೋಗವನ್ನು ಭಾರತದಲ್ಲೇ ಪುನರಾವರ್ತಿಸಿ, ಕಡಿಮೆ ಪ್ರಮಾಣದಲ್ಲಿ ಪರೀಕ್ಷಿಸಿದರೆ ಒಂದು ಹಂತದಲ್ಲಿ ಕ್ಯಾನ್ಸರ್ trigger ನಿಲ್ಲುತ್ತದೆ. ಆ ಪ್ರಮಾಣವೇ safe limit ಆಗಿ ಸ್ಥಾಪಿತವಾದರೆ, “ನಿಯಂತ್ರಿತ ಪ್ರಮಾಣದ ಅಡಿಕೆ ಬಳಕೆ ಕ್ಯಾನ್ಸರ್ ಕಾರಕ ಅಲ್ಲ” ಎಂಬ ವೈಜ್ಞಾನಿಕ ಆಧಾರ ನಿರ್ಮಾಣವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Clinical Trial – ದುಬಾರಿ ಆದರೆ ಅತ್ಯಂತ ಪರಿಣಾಮಕಾರಿ. Clinical trial ಮಾಡುವುದು ಬಹು ವೆಚ್ಚದ ಕೆಲಸ. ಆದರೂ ಇದು ಮಾನವರ ಮೇಲೆ ನೇರವಾಗಿ ನಡೆಯುವ ಪ್ರಯೋಗವಾಗಿರುವುದರಿಂದ ಅತ್ಯಂತ ವಿಶ್ವಾಸಾರ್ಹ ವರದಿ ನೀಡಬಲ್ಲದು. ಗುಣಾತ್ಮಕ ವರದಿ ದೊರೆತರೆ ಅಡಿಕೆ ಕುರಿತ ಜಾಗತಿಕ ಚರ್ಚೆಯ ದಿಕ್ಕನ್ನೇ ಬದಲಾಯಿಸಬಹುದಾದ ಸಾಧ್ಯತೆ ಇದೆ.
ನಾವು ಕಳೆದುಕೊಂಡ golden opportunity time ಅನ್ನು ಮತ್ತೆ ಹಿಂದಕ್ಕೆ ತರಲು ಸಾಧ್ಯವಿಲ್ಲ. ಆದರೆ ಇನ್ನು ಮುಂದೆ ವೈಜ್ಞಾನಿಕ ಡೇಟಾ, ಸಂಶೋಧನೆ ಮತ್ತು ತಂತ್ರ ರೂಪಿಸುವ ಮೂಲಕ ಅಡಿಕೆ ಬೆಳೆಗಾರರ ಹಿತ ರಕ್ಷಿಸಬೇಕಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…