Advertisement
MIRROR FOCUS

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

Share

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್ ಈಸ್ಟ್ ಏಷ್ಯಾ ರೀಜನ್ ಎಂಬ ವೆಬಿನರ್ ಜನವರಿ 30 2026 ರಂದು ನಡೆದು ಅದರಲ್ಲಿ ಕ್ಯಾನ್ಸರ್ ಕಾರಕ ಉತ್ಪನ್ನಗಳಾದ ಮದ್ಯ ಪಾನೀಯ, ತಂಬಾಕು ಮುಂತಾದ ಉತ್ಪನ್ನಗಳ ಪಟ್ಟಿಗೆ ಅಡಿಕೆಯನ್ನು ಸೇರಿಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಉತ್ಸುಕವಾಗಿದೆ ಎಂಬುದು ಚಿಂತನ ಮಂಥನದಲ್ಲಿ ಹೊರಹೊಮ್ಮಿದೆ.

Advertisement
Advertisement

“Arecanut Challenge: Turning Policy into Impact in the South East Asia Region” ಎಂಬ ವೆಬಿನಾರ್ ಜನವರಿ 30, 2026 ರಂದು ನಡೆಯಿತು. ಈ ಚರ್ಚೆಯಲ್ಲಿ ಮದ್ಯ, ತಂಬಾಕು ಮುಂತಾದ ಕ್ಯಾನ್ಸರ್‌ಕಾರಕ ಉತ್ಪನ್ನಗಳ ಪಟ್ಟಿಗೆ ಅಡಿಕೆಯನ್ನು ಸೇರಿಸುವ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಆಸಕ್ತಿ ತೋರಿಸುತ್ತಿದೆ ಎಂಬುದು ಚಿಂತನ-ಮಂಥನದಲ್ಲಿ ಹೊರಹೊಮ್ಮಿತು.

ವಿಜ್ಞಾನಿಗಳ ಅಭಿಪ್ರಾಯದಂತೆ, ಅಡಿಕೆ ಅನೇಕ ಪ್ರದೇಶಗಳಲ್ಲಿ ಒಂದು ಸಾಮಾನ್ಯ ಸಾಮಾಜಿಕ ಚಟವಾಗಿ ಬಳಕೆಯಾಗುತ್ತಿರುವುದರಿಂದ ಇದನ್ನು ಸುಲಭವಾಗಿ ನಿಯಂತ್ರಿಸುವುದು ಸಾಧ್ಯವಿಲ್ಲ. ಆದ್ದರಿಂದ WHO ಸೂಚನೆಗಳ ಆಧಾರದಲ್ಲಿ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮಾಜದಲ್ಲಿ ಅಗತ್ಯ ಪ್ರಚಾರ ಮತ್ತು ಅರಿವು ಮೂಡಿಸಬೇಕಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ವೆಬಿನಾರ್‌ನಲ್ಲಿ ಭಾಗವಹಿಸಿದ ಕ್ಯಾಂಪ್ಕೋದ ನಿರ್ದೇಶಕರಾದ ಮುರಳಿ ಕೃಷ್ಣ ಕೆ ಎನ್ ಅವರು,“ಸರಿಯಾದ ಕ್ಲಿನಿಕಲ್ ಪರೀಕ್ಷೆಗಳಿಲ್ಲದೆ ಕೇವಲ ಶೈಕ್ಷಣಿಕ ಅಧ್ಯಯನಗಳ ಆಧಾರದ ಮೇಲೆ ತೀರ್ಮಾನಕ್ಕೆ ಬರಬಾರದು. ದೊಡ್ಡ ಪ್ರಮಾಣದಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಿ, ಸಾರ್ವಜನಿಕವಾಗಿ ಅದರ ಫಲಿತಾಂಶವನ್ನು ಮುಂದಿಡಬೇಕು,” ಎಂದು ಹೇಳಿದರು.

ಅಡಿಕೆ ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಕೆಯಾಗುತ್ತಿರುವ ಹಿನ್ನೆಲೆ ಇರುವುದರಿಂದ, ಅಂತಿಮ ತೀರ್ಮಾನಕ್ಕೆ ಮುನ್ನ ಈ ಅಂಶಕ್ಕೂ ಗಮನ ನೀಡಬೇಕು ಎಂದು ಅವರು ಪ್ರಶ್ನೆಯ ಮೂಲಕ ಸೂಚಿಸಿದರು.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಡಾ. ವಿಘ್ನೇಶ್ವರ ವರ್ಮುಡಿ ಅವರು ಅಡಿಕೆ ಬೆಳೆಯುವವರು, ಬಳಕೆದಾರರು ಹಾಗೂ ಅವಲಂಬಿತ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು.

ಅಡಿಕೆ ಧಾರ್ಮಿಕ ಮೌಲ್ಯ ಹೊಂದಿದ ಉತ್ಪನ್ನವಾಗಿದ್ದು, ದಂತ ವೈದ್ಯರ ಮಾಹಿತಿಯ ಪ್ರಕಾರ ಬಾಯಿ ಕ್ಯಾನ್ಸರ್‌ಗೆ ಮೂಲ ಕಾರಣ ಅಡಿಕೆಯಾಗದೆ, ರಾಸಾಯನಿಕ ಮಿಶ್ರಿತ ಪದಾರ್ಥಗಳು ಆಗಿರಬಹುದು. ಈ ದೃಷ್ಟಿಯಿಂದ ಇನ್ನಷ್ಟು ಅಧ್ಯಯನ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರುವ ಮೊದಲು ಅಡಿಕೆ ಅವಲಂಬಿತರಿಗೆ ಸೂಕ್ತ ಮಾಹಿತಿ ನೀಡಲು ಪ್ರಾದೇಶಿಕ ಮಟ್ಟದಲ್ಲಿ ಕಾರ್ಯಾಗಾರಗಳು ಮತ್ತು ವಿಚಾರಸಂಕಿರಣಗಳು ನಡೆಯಬೇಕು ಎಂದು ಸಲಹೆ ನೀಡಲಾಯಿತು. ಇದಕ್ಕೆ ವೆಬಿನಾರ್ ಆಯೋಜಕರು ಸಹಮತ ವ್ಯಕ್ತಪಡಿಸಿದರು.

WHO ಈ ಸಂಬಂಧ ಒಂದು ಅಲ್ಪಕಾಲೀನ ಮತ್ತು ದೀರ್ಘಕಾಲೀನ ಯೋಜನೆ ರೂಪಿಸಿ, ಅದನ್ನು ಅಡಿಕೆ ಅವಲಂಬಿತರಿಗೆ ತಿಳಿಸಬೇಕು ಎಂದು ಡಾ. ವರ್ಮುಡಿ ಸಲಹೆ ನೀಡಿದರು.

ಮುರಳಿ ಕೃಷ್ಣ ಕೆ ಎನ್‌  ಮತ್ತು ಡಾ. ವಿಘ್ನೇಶ್ವರ ಭಟ್ ವರ್ಮುಡಿ ಒಟ್ಟಾರೆ ಸುಮಾರು 25ಕ್ಕೂ ಹೆಚ್ಚು ಪ್ರಶ್ನೆಗಳು ಕೇಳಿದರು. ಈ ವೆಬಿನಾರ್‌ನಲ್ಲಿ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ 160ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.‌ ಇದರ ಮುಂದುವರಿದ ಭಾಗದ ವೆಬಿನಾರ್ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

1 hour ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

11 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

12 hours ago