Advertisement
MIRROR FOCUS

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

Share

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್ ಈಸ್ಟ್ ಏಷ್ಯಾ ರೀಜನ್ ಎಂಬ ವೆಬಿನರ್ ಜನವರಿ 30 2026 ರಂದು ನಡೆದು ಅದರಲ್ಲಿ ಕ್ಯಾನ್ಸರ್ ಕಾರಕ ಉತ್ಪನ್ನಗಳಾದ ಮದ್ಯ ಪಾನೀಯ, ತಂಬಾಕು ಮುಂತಾದ ಉತ್ಪನ್ನಗಳ ಪಟ್ಟಿಗೆ ಅಡಿಕೆಯನ್ನು ಸೇರಿಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಉತ್ಸುಕವಾಗಿದೆ ಎಂಬುದು ಚಿಂತನ ಮಂಥನದಲ್ಲಿ ಹೊರಹೊಮ್ಮಿದೆ.

“Arecanut Challenge: Turning Policy into Impact in the South East Asia Region” ಎಂಬ ವೆಬಿನಾರ್ ಜನವರಿ 30, 2026 ರಂದು ನಡೆಯಿತು. ಈ ಚರ್ಚೆಯಲ್ಲಿ ಮದ್ಯ, ತಂಬಾಕು ಮುಂತಾದ ಕ್ಯಾನ್ಸರ್‌ಕಾರಕ ಉತ್ಪನ್ನಗಳ ಪಟ್ಟಿಗೆ ಅಡಿಕೆಯನ್ನು ಸೇರಿಸುವ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಆಸಕ್ತಿ ತೋರಿಸುತ್ತಿದೆ ಎಂಬುದು ಚಿಂತನ-ಮಂಥನದಲ್ಲಿ ಹೊರಹೊಮ್ಮಿತು.

ವಿಜ್ಞಾನಿಗಳ ಅಭಿಪ್ರಾಯದಂತೆ, ಅಡಿಕೆ ಅನೇಕ ಪ್ರದೇಶಗಳಲ್ಲಿ ಒಂದು ಸಾಮಾನ್ಯ ಸಾಮಾಜಿಕ ಚಟವಾಗಿ ಬಳಕೆಯಾಗುತ್ತಿರುವುದರಿಂದ ಇದನ್ನು ಸುಲಭವಾಗಿ ನಿಯಂತ್ರಿಸುವುದು ಸಾಧ್ಯವಿಲ್ಲ. ಆದ್ದರಿಂದ WHO ಸೂಚನೆಗಳ ಆಧಾರದಲ್ಲಿ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮಾಜದಲ್ಲಿ ಅಗತ್ಯ ಪ್ರಚಾರ ಮತ್ತು ಅರಿವು ಮೂಡಿಸಬೇಕಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ವೆಬಿನಾರ್‌ನಲ್ಲಿ ಭಾಗವಹಿಸಿದ ಕ್ಯಾಂಪ್ಕೋದ ನಿರ್ದೇಶಕರಾದ ಮುರಳಿ ಕೃಷ್ಣ ಕೆ ಎನ್ ಅವರು,“ಸರಿಯಾದ ಕ್ಲಿನಿಕಲ್ ಪರೀಕ್ಷೆಗಳಿಲ್ಲದೆ ಕೇವಲ ಶೈಕ್ಷಣಿಕ ಅಧ್ಯಯನಗಳ ಆಧಾರದ ಮೇಲೆ ತೀರ್ಮಾನಕ್ಕೆ ಬರಬಾರದು. ದೊಡ್ಡ ಪ್ರಮಾಣದಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಿ, ಸಾರ್ವಜನಿಕವಾಗಿ ಅದರ ಫಲಿತಾಂಶವನ್ನು ಮುಂದಿಡಬೇಕು,” ಎಂದು ಹೇಳಿದರು.

ಅಡಿಕೆ ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಕೆಯಾಗುತ್ತಿರುವ ಹಿನ್ನೆಲೆ ಇರುವುದರಿಂದ, ಅಂತಿಮ ತೀರ್ಮಾನಕ್ಕೆ ಮುನ್ನ ಈ ಅಂಶಕ್ಕೂ ಗಮನ ನೀಡಬೇಕು ಎಂದು ಅವರು ಪ್ರಶ್ನೆಯ ಮೂಲಕ ಸೂಚಿಸಿದರು.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಡಾ. ವಿಘ್ನೇಶ್ವರ ವರ್ಮುಡಿ ಅವರು ಅಡಿಕೆ ಬೆಳೆಯುವವರು, ಬಳಕೆದಾರರು ಹಾಗೂ ಅವಲಂಬಿತ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು.

ಅಡಿಕೆ ಧಾರ್ಮಿಕ ಮೌಲ್ಯ ಹೊಂದಿದ ಉತ್ಪನ್ನವಾಗಿದ್ದು, ದಂತ ವೈದ್ಯರ ಮಾಹಿತಿಯ ಪ್ರಕಾರ ಬಾಯಿ ಕ್ಯಾನ್ಸರ್‌ಗೆ ಮೂಲ ಕಾರಣ ಅಡಿಕೆಯಾಗದೆ, ರಾಸಾಯನಿಕ ಮಿಶ್ರಿತ ಪದಾರ್ಥಗಳು ಆಗಿರಬಹುದು. ಈ ದೃಷ್ಟಿಯಿಂದ ಇನ್ನಷ್ಟು ಅಧ್ಯಯನ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರುವ ಮೊದಲು ಅಡಿಕೆ ಅವಲಂಬಿತರಿಗೆ ಸೂಕ್ತ ಮಾಹಿತಿ ನೀಡಲು ಪ್ರಾದೇಶಿಕ ಮಟ್ಟದಲ್ಲಿ ಕಾರ್ಯಾಗಾರಗಳು ಮತ್ತು ವಿಚಾರಸಂಕಿರಣಗಳು ನಡೆಯಬೇಕು ಎಂದು ಸಲಹೆ ನೀಡಲಾಯಿತು. ಇದಕ್ಕೆ ವೆಬಿನಾರ್ ಆಯೋಜಕರು ಸಹಮತ ವ್ಯಕ್ತಪಡಿಸಿದರು.

WHO ಈ ಸಂಬಂಧ ಒಂದು ಅಲ್ಪಕಾಲೀನ ಮತ್ತು ದೀರ್ಘಕಾಲೀನ ಯೋಜನೆ ರೂಪಿಸಿ, ಅದನ್ನು ಅಡಿಕೆ ಅವಲಂಬಿತರಿಗೆ ತಿಳಿಸಬೇಕು ಎಂದು ಡಾ. ವರ್ಮುಡಿ ಸಲಹೆ ನೀಡಿದರು.

ಮುರಳಿ ಕೃಷ್ಣ ಕೆ ಎನ್‌  ಮತ್ತು ಡಾ. ವಿಘ್ನೇಶ್ವರ ಭಟ್ ವರ್ಮುಡಿ ಒಟ್ಟಾರೆ ಸುಮಾರು 25ಕ್ಕೂ ಹೆಚ್ಚು ಪ್ರಶ್ನೆಗಳು ಕೇಳಿದರು. ಈ ವೆಬಿನಾರ್‌ನಲ್ಲಿ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ 160ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.‌ ಇದರ ಮುಂದುವರಿದ ಭಾಗದ ವೆಬಿನಾರ್ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

3 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

4 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

14 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago