Advertisement
ಸುದ್ದಿಗಳು

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

Share

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ತಂಬಾಕು ನಿಯಂತ್ರಣ ಮಾದರಿಯಲ್ಲೇ ‘MPOWER’ ನಂತಹ ಕಟ್ಟುನಿಟ್ಟಿನ ನೀತಿಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರತಿಪಾದಿಸಿದೆ.

ಶುಕ್ರವಾರ (ಜ. 30, 2026) ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ಕಚೇರಿಯು ‘ಅಡಿಕೆ ಸವಾಲು: ದಕ್ಷಿಣ ಏಷ್ಯಾದಲ್ಲಿ ನೀತಿಯನ್ನು ಪ್ರಭಾವವನ್ನಾಗಿ ಪರಿವರ್ತಿಸುವುದು’ ಎಂಬ ವಿಷಯದ ಮೇಲೆ ಆಯೋಜಿಸಿದ್ದ ಅಂತರಾಷ್ಟ್ರೀಯ ಮಟ್ಟದ ವೆಬಿನಾರ್‌ನಲ್ಲಿ ಈ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಅಡಿಕೆ ನಿಯಂತ್ರಣಕ್ಕೆ ‘MPOWER’ ಸೂತ್ರ:  ತಂಬಾಕು ನಿಯಂತ್ರಣಕ್ಕಾಗಿ 2008ರಲ್ಲಿ ಜಾರಿಗೆ ತಂದ ಯಶಸ್ವಿ ‘MPOWER’ ಮಾದರಿಯನ್ನು ಅಡಿಕೆ ನಿಯಂತ್ರಣಕ್ಕೂ ಅನ್ವಯಿಸಬೇಕು ಎಂದು ತಜ್ಞರು ಕರೆ ನೀಡಿದ್ದಾರೆ. ಅದರ ವಿಸ್ತೃತ ರೂಪ ಹೀಗಿದೆ:
M (Monitoring): ಅಡಿಕೆ ಬಳಕೆ ಮತ್ತು ತಡೆಗಟ್ಟುವಿಕೆ ನೀತಿಗಳ ನಿರಂತರ ಮೇಲ್ವಿಚಾರಣೆ.
P (Protecting): ಸಾರ್ವಜನಿಕರನ್ನು, ವಿಶೇಷವಾಗಿ ಯುವಜನತೆಯನ್ನು ಅಡಿಕೆ ಉತ್ಪನ್ನಗಳಿಂದ ರಕ್ಷಿಸುವುದು.
O (Offering): ಅಡಿಕೆ ವ್ಯಸನಕ್ಕೆ ಒಳಗಾದವರು ಅದನ್ನು ಬಿಡಲು (Cessation) ಅಗತ್ಯವಾದ ವೈದ್ಯಕೀಯ ಸಹಾಯ ಒದಗಿಸುವುದು.
W (Warning): ಅಡಿಕೆ ಅಗಿಯುವುದರಿಂದ ಉಂಟಾಗುವ ಗಂಭೀರ ಆರೋಗ್ಯದ ಅಪಾಯಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡುವುದು.
E (Enforcing): ಅಡಿಕೆ ಉತ್ಪನ್ನಗಳ ಜಾಹೀರಾತು, ಪ್ರಚಾರ ಮತ್ತು ಪ್ರಾಯೋಜಕತ್ವಗಳ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರುವುದು.
R (Raising): ಅಡಿಕೆ ಆಮದು ಮತ್ತು ಉತ್ಪನ್ನಗಳ ಮೇಲೆ ತೆರಿಗೆಯನ್ನು ಹೆಚ್ಚಿಸುವುದು.

ವರದಿಯ ಪ್ರಮುಖ ಅಂಶಗಳು:  ಆಗ್ನೇಯ ಏಷ್ಯಾದಲ್ಲಿ ‘ಗಂಭೀರ ಆತಂಕ’ : WHO ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತ, ಬಾಂಗ್ಲಾದೇಶ, ಭೂತಾನ್, ಮ್ಯಾನ್ಮಾರ್ ಮತ್ತು ಶ್ರೀಲಂಕಾಗಳಲ್ಲಿ ಅಡಿಕೆ ಬಳಕೆಯು ‘ಗಂಭೀರ ಆತಂಕ’ (Significant Concern) ಎಂದು ಗುರುತಿಸಲಾಗಿದೆ. ಈ ರಾಷ್ಟ್ರಗಳಲ್ಲಿ ಅಡಿಕೆ ಮತ್ತು ಹೊಗೆರಹಿತ ತಂಬಾಕು ಬಳಕೆಯಿಂದ ಓರಲ್ ಕ್ಯಾನ್ಸರ್ ಅಪಾಯ ತೀವ್ರವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೇವಲ ನಿಷೇಧ ಸಾಕಾಗದು: ಕಾರ್ಯಕ್ರಮದಲ್ಲಿ ಮಾತನಾಡಿದ ತಜ್ಞರು, ಕೇವಲ ಕಾನೂನುಬದ್ಧ ನಿಷೇಧದಿಂದ ಅಡಿಕೆ ಬಳಕೆಯನ್ನು ತಡೆಯಲು ಸಾಧ್ಯವಿಲ್ಲ. ಬದಲಾಗಿ ಸಾರ್ವಜನಿಕ ಜಾಗೃತಿ ಮತ್ತು ವೈಜ್ಞಾನಿಕ ನಿಯಂತ್ರಣ ನೀತಿಗಳ ಸಮನ್ವಯದ ಅಗತ್ಯವಿದೆ ಎಂದರು.

2025-2030 ರ ಕಾರ್ಯತಂತ್ರ: WHO ಮುಂದಿನ ಐದು ವರ್ಷಗಳ ಕಾಲ ಅಡಿಕೆ ನಿಯಂತ್ರಣಕ್ಕೆ ವಿಶೇಷ ಚೌಕಟ್ಟನ್ನು ರೂಪಿಸಿದೆ. ಇದರ ಅಡಿಯಲ್ಲಿ ಪ್ರತಿ ದೇಶವು ರಾಷ್ಟ್ರೀಯ ಸಮಿತಿಗಳನ್ನು ರಚಿಸಿ, ಸಂಶೋಧನೆ ಮತ್ತು ವ್ಯಸನ ಮುಕ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. 2027 ಮತ್ತು 2030ರಲ್ಲಿ ಈ ನೀತಿಗಳ ಪ್ರಗತಿಯ ಬಗ್ಗೆ ಪ್ರಾದೇಶಿಕ ಸಮಿತಿಗೆ ವರದಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಆಯಾ ದೇಶಗಳ ಆರೋಗ್ಯ ಸಚಿವಾಲಯಗಳು ಇದರ ಮೇಲ್ವಿಚಾರಣೆ ನಡೆಸಲಿವೆ.

ಸಹಭಾಗಿತ್ವ: ಈ ವೆಬಿನಾರ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ಕಚೇರಿ, ಲಂಡನ್‌ನ ಕಿಂಗ್ಸ್ ಕಾಲೇಜ್ ಮತ್ತು ಭಾರತದ ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜಿನ ತಜ್ಞರು ಭಾಗವಹಿಸಿ, ಅಡಿಕೆ ಮುಕ್ತ ಸಮಾಜದತ್ತ ನೀತಿಗಳನ್ನು ರೂಪಿಸಲು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

3 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

4 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

14 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago