Advertisement
ಸುದ್ದಿಗಳು

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

Share

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ತಂಬಾಕು ನಿಯಂತ್ರಣ ಮಾದರಿಯಲ್ಲೇ ‘MPOWER’ ನಂತಹ ಕಟ್ಟುನಿಟ್ಟಿನ ನೀತಿಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರತಿಪಾದಿಸಿದೆ.

ಶುಕ್ರವಾರ (ಜ. 30, 2026) ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ಕಚೇರಿಯು ‘ಅಡಿಕೆ ಸವಾಲು: ದಕ್ಷಿಣ ಏಷ್ಯಾದಲ್ಲಿ ನೀತಿಯನ್ನು ಪ್ರಭಾವವನ್ನಾಗಿ ಪರಿವರ್ತಿಸುವುದು’ ಎಂಬ ವಿಷಯದ ಮೇಲೆ ಆಯೋಜಿಸಿದ್ದ ಅಂತರಾಷ್ಟ್ರೀಯ ಮಟ್ಟದ ವೆಬಿನಾರ್‌ನಲ್ಲಿ ಈ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಅಡಿಕೆ ನಿಯಂತ್ರಣಕ್ಕೆ ‘MPOWER’ ಸೂತ್ರ:  ತಂಬಾಕು ನಿಯಂತ್ರಣಕ್ಕಾಗಿ 2008ರಲ್ಲಿ ಜಾರಿಗೆ ತಂದ ಯಶಸ್ವಿ ‘MPOWER’ ಮಾದರಿಯನ್ನು ಅಡಿಕೆ ನಿಯಂತ್ರಣಕ್ಕೂ ಅನ್ವಯಿಸಬೇಕು ಎಂದು ತಜ್ಞರು ಕರೆ ನೀಡಿದ್ದಾರೆ. ಅದರ ವಿಸ್ತೃತ ರೂಪ ಹೀಗಿದೆ:
M (Monitoring): ಅಡಿಕೆ ಬಳಕೆ ಮತ್ತು ತಡೆಗಟ್ಟುವಿಕೆ ನೀತಿಗಳ ನಿರಂತರ ಮೇಲ್ವಿಚಾರಣೆ.
P (Protecting): ಸಾರ್ವಜನಿಕರನ್ನು, ವಿಶೇಷವಾಗಿ ಯುವಜನತೆಯನ್ನು ಅಡಿಕೆ ಉತ್ಪನ್ನಗಳಿಂದ ರಕ್ಷಿಸುವುದು.
O (Offering): ಅಡಿಕೆ ವ್ಯಸನಕ್ಕೆ ಒಳಗಾದವರು ಅದನ್ನು ಬಿಡಲು (Cessation) ಅಗತ್ಯವಾದ ವೈದ್ಯಕೀಯ ಸಹಾಯ ಒದಗಿಸುವುದು.
W (Warning): ಅಡಿಕೆ ಅಗಿಯುವುದರಿಂದ ಉಂಟಾಗುವ ಗಂಭೀರ ಆರೋಗ್ಯದ ಅಪಾಯಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡುವುದು.
E (Enforcing): ಅಡಿಕೆ ಉತ್ಪನ್ನಗಳ ಜಾಹೀರಾತು, ಪ್ರಚಾರ ಮತ್ತು ಪ್ರಾಯೋಜಕತ್ವಗಳ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರುವುದು.
R (Raising): ಅಡಿಕೆ ಆಮದು ಮತ್ತು ಉತ್ಪನ್ನಗಳ ಮೇಲೆ ತೆರಿಗೆಯನ್ನು ಹೆಚ್ಚಿಸುವುದು.

ವರದಿಯ ಪ್ರಮುಖ ಅಂಶಗಳು:  ಆಗ್ನೇಯ ಏಷ್ಯಾದಲ್ಲಿ ‘ಗಂಭೀರ ಆತಂಕ’ : WHO ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತ, ಬಾಂಗ್ಲಾದೇಶ, ಭೂತಾನ್, ಮ್ಯಾನ್ಮಾರ್ ಮತ್ತು ಶ್ರೀಲಂಕಾಗಳಲ್ಲಿ ಅಡಿಕೆ ಬಳಕೆಯು ‘ಗಂಭೀರ ಆತಂಕ’ (Significant Concern) ಎಂದು ಗುರುತಿಸಲಾಗಿದೆ. ಈ ರಾಷ್ಟ್ರಗಳಲ್ಲಿ ಅಡಿಕೆ ಮತ್ತು ಹೊಗೆರಹಿತ ತಂಬಾಕು ಬಳಕೆಯಿಂದ ಓರಲ್ ಕ್ಯಾನ್ಸರ್ ಅಪಾಯ ತೀವ್ರವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೇವಲ ನಿಷೇಧ ಸಾಕಾಗದು: ಕಾರ್ಯಕ್ರಮದಲ್ಲಿ ಮಾತನಾಡಿದ ತಜ್ಞರು, ಕೇವಲ ಕಾನೂನುಬದ್ಧ ನಿಷೇಧದಿಂದ ಅಡಿಕೆ ಬಳಕೆಯನ್ನು ತಡೆಯಲು ಸಾಧ್ಯವಿಲ್ಲ. ಬದಲಾಗಿ ಸಾರ್ವಜನಿಕ ಜಾಗೃತಿ ಮತ್ತು ವೈಜ್ಞಾನಿಕ ನಿಯಂತ್ರಣ ನೀತಿಗಳ ಸಮನ್ವಯದ ಅಗತ್ಯವಿದೆ ಎಂದರು.

2025-2030 ರ ಕಾರ್ಯತಂತ್ರ: WHO ಮುಂದಿನ ಐದು ವರ್ಷಗಳ ಕಾಲ ಅಡಿಕೆ ನಿಯಂತ್ರಣಕ್ಕೆ ವಿಶೇಷ ಚೌಕಟ್ಟನ್ನು ರೂಪಿಸಿದೆ. ಇದರ ಅಡಿಯಲ್ಲಿ ಪ್ರತಿ ದೇಶವು ರಾಷ್ಟ್ರೀಯ ಸಮಿತಿಗಳನ್ನು ರಚಿಸಿ, ಸಂಶೋಧನೆ ಮತ್ತು ವ್ಯಸನ ಮುಕ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. 2027 ಮತ್ತು 2030ರಲ್ಲಿ ಈ ನೀತಿಗಳ ಪ್ರಗತಿಯ ಬಗ್ಗೆ ಪ್ರಾದೇಶಿಕ ಸಮಿತಿಗೆ ವರದಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಆಯಾ ದೇಶಗಳ ಆರೋಗ್ಯ ಸಚಿವಾಲಯಗಳು ಇದರ ಮೇಲ್ವಿಚಾರಣೆ ನಡೆಸಲಿವೆ.

ಸಹಭಾಗಿತ್ವ: ಈ ವೆಬಿನಾರ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ಕಚೇರಿ, ಲಂಡನ್‌ನ ಕಿಂಗ್ಸ್ ಕಾಲೇಜ್ ಮತ್ತು ಭಾರತದ ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜಿನ ತಜ್ಞರು ಭಾಗವಹಿಸಿ, ಅಡಿಕೆ ಮುಕ್ತ ಸಮಾಜದತ್ತ ನೀತಿಗಳನ್ನು ರೂಪಿಸಲು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

10 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

14 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

22 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

22 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

24 hours ago