#Temple | ರಾಜ್ಯದ ಶ್ರೀಮಂತ ದೇವರು ಯಾರು..? | ಮುಜರಾಯಿ ಇಲಾಖೆಯಿಂದ ಪಟ್ಟಿ ಬಿಡುಗಡೆ

June 29, 2023
8:09 PM

ರಾಜ್ಯ, ದೇಶ, ಪ್ರಪಂಚದ ಶ್ರೀಮಂತರ ಪಟ್ಟಿ ಬಿಡುಗಡೆ ಮಾಡಿದಂತೆ ನಮ್ಮ ರಾಜ್ಯದ ಶ್ರೀಮಂತ ದೇವರ ಅಂದರೆ ದೇವಸ್ಥಾನಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ  ಮೊದಲ ಸ್ಥಾನ ಪಡೆದಿದೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದೆ.

ಯಾವ ದೇವಸ್ಥಾನದ ಆದಾಯ ಎಷ್ಟು?
1. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
ಆದಾಯ : 123.64 ಕೋಟಿ ರೂ.
ವೆಚ್ಚ : 63.77 ಕೋಟಿ ರೂ.

 

2. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು
ಆದಾಯ : 59.47 ಲಕ್ಷ ರೂ.
ವೆಚ್ಚ: 33.32 ಲಕ್ಷ ರೂ.

3. ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು
ಆದಾಯ: 52.40 ಲಕ್ಷ ರೂ.
ವೆಚ್ಚ: 52.40 ಲಕ್ಷ ರೂ.

4. ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನ, ಎಡೆಯೂರು
ಆದಾಯ: 36.48 ಲಕ್ಷ ರೂ.
ವೆಚ್ಚ: 35.68 ಲಕ್ಷ ರೂ.

5. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಟೀಲು
ಆದಾಯ: 32.10 ಕೋಟಿ ರೂ.
ವೆಚ್ಚ: 25.97 ಕೋಟಿ ರೂ.

6. ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ, ನಂಜನಗೂಡು
ಆದಾಯ: 26.71 ಕೋಟಿ ರೂ.
ವೆಚ್ಚ: 18. 74 ಕೋಟಿ ರೂ.

7. ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ, ಸವದತ್ತಿ
ಆದಾಯ: 22.52 ಕೋಟಿ ರೂ.
ವೆಚ್ಚ: 11.51 ಕೋಟಿ ರೂ.

 

8. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮಂದಾರ್ತಿ
ಆದಾಯ: 14 .55 ಕೋಟಿ ರೂ.
ವೆಚ್ಚ: 13.02ಕೋಟಿ ರೂ.

9 . ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ದೊಡ್ಡಬಳ್ಳಾಪುರ
ಆದಾಯ : 12.25 ಕೋಟಿ ರೂ.
ವೆಚ್ಚ: 7.40 ಕೋಟಿ ರೂ.

10. ಶ್ರೀ ಬನಶಂಕರಿ ದೇವಸ್ಥಾನ, ಬೆಂಗಳೂರು
ಆದಾಯ: 10.58 ಕೋಟಿ ರೂ.
ವೆಚ್ಚ: 19.41 ಕೋಟಿ ರೂ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror