Advertisement
MIRROR FOCUS

WHO ಆಗ್ನೇಯ ಏಷ್ಯಾದ 78 ನೇ ಅಧಿವೇಶನ ಮುಕ್ತಾಯ | ನಿರೀಕ್ಷೆಯಂತೆಯೇ ಅಡಿಕೆಯ ಉತ್ಪನ್ನದ ಮೇಲೆ ಬಿಗುವಿನ ಕ್ರಮದ ನಿರ್ಧಾರ

Share

ಹೊಗೆರಹಿತ ತಂಬಾಕು, ಹೊಸಬಗೆಯ ನಿಕೋಟಿನ್ ಉತ್ಪನ್ನಗಳು ಮತ್ತು ಅಡಿಕೆಗಳ ಬಳಕೆಯನ್ನು ನಿಯಂತ್ರಿಸಲು  ವಿಶ್ವ ಆರೋಗ್ಯ ಸಂಸ್ಥೆ(WHO) ಸದಸ್ಯ ರಾಷ್ಟ್ರಗಳು ಪ್ರಾದೇಶಿಕ ಕಾರ್ಯತಂತ್ರಗಳನ್ನು ಅನುಮೋದಿಸಿದೆ. WHO ಆಗ್ನೇಯ ಏಷ್ಯಾದ ಸದಸ್ಯ ರಾಷ್ಟ್ರಗಳಲ್ಲಿ ಬಾಂಗ್ಲಾದೇಶ, ಭೂತಾನ್, ಭಾರತ, ಇಂಡೋನೇಷ್ಯಾ, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ, ಥೈಲ್ಯಾಂಡ್ ಮತ್ತು ಟಿಮೋರ್ ಸೇರಿದೆ.

ಇದು ರಾಷ್ಟ್ರೀಯ ಶಾಸನ, ನಿಯಂತ್ರಕ ಚೌಕಟ್ಟುಗಳು ಮತ್ತು ಜಾರಿ ಮಾಡುವ ಕಾರ್ಯವಿಧಾನಗಳನ್ನು ಬಲಪಡಿಸುವುದರ ಮೇಲೆ ಕೇಂದ್ರೀಕರಿಸಿದೆ.  ಇದರಲ್ಲಿ ಈ ಉತ್ಪನ್ನಗಳ ತಯಾರಿಕೆ, ಮಾರಾಟ, ಜಾಹೀರಾತು, ಪ್ರಚಾರ ಮತ್ತು ಪ್ರಾಯೋಜಕತ್ವದ ಮೇಲೆ ಸಮಗ್ರ ನಿಷೇಧಗಳು ಕೂಡಾ ಸೇರಿವೆ. ಈ ಉತ್ಪನ್ನಗಳ ಲಭ್ಯತೆಯನ್ನು ನಿರ್ಬಂಧಿಸಲು, ಸ್ಥಗಿತ ಮತ್ತು ಕಣ್ಗಾವಲು ಹೆಚ್ಚಿಸಲು ಸೇರಿದಂತೆ ನೀತಿಗಳನ್ನು ಜಾರಿಗೆ ತರುವುದರ ಮೇಲೆ ಆದ್ಯತೆ ನೀಡಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

WHO ಆಗ್ನೇಯ ಏಷ್ಯಾದ 78 ನೇ ಅಧಿವೇಶನವು ಸೋಮವಾರದಂದು ಆರಂಭವಾಗಿ ಬುಧವಾರ ಮುಕ್ತಾಯವಾಗಿತ್ತು. ಈ ವರ್ಷ ಶ್ರೀಲಂಕಾ ಆಯೋಜಿಸಿದ್ದ ಮೂರು ದಿನಗಳ ಆಡಳಿತ ಮಂಡಳಿಯ ಸಭೆಯನ್ನು ಶ್ರೀಲಂಕಾ ಸಂಸತ್ತಿನ ಸ್ಪೀಕರ್ ಡಾ. ಜಗತ್ ವಿಕ್ರಮರತ್ನೆ ಉದ್ಘಾಟಿಸಿದರು. ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು. ಆರೋಗ್ಯಕರ ವೃದ್ಧಾಪ್ಯ, ಸಾಂಕ್ರಾಮಿಕವಲ್ಲದ ರೋಗಗಳು ಮತ್ತು ದೀರ್ಘಕಾಲದ ಆರೋಗ್ಯ ಪರಿಸ್ಥಿತಿ, ತಂಬಾಕು ಅಥವಾ ಅಡಿಕೆ ಬಳಕೆ ಸೇರಿದಂತೆ ವಿವಿಧ ನೀತಿ ನಿರ್ಣಯಗಳ ಬಗ್ಗೆ ಚರ್ಚೆಯಾದವು.  ಸಭೆಯ ಕೊನೆಯಲ್ಲಿ ಎಲ್ಲರಿಗೂ ಆರೋಗ್ಯವನ್ನು ಸುಧಾರಿಸಲು ಅಗತ್ಯವಾಗಿರುವ ಪ್ರಮುಖ ನಿರ್ಧಾರಗಳು ಮತ್ತು ಸದಸ್ಯ ರಾಷ್ಟ್ರಗಳು ಪ್ರಮುಖ ಸಾರ್ವಜನಿಕ ಆರೋಗ್ಯ ಸವಾಲುಗಳ ಕುರಿತು ನಿರ್ಣಯ ಕೈಗೊಂಡರು. 2050 ರ ವೇಳೆಗೆ ಈ ಪ್ರದೇಶದಲ್ಲಿ ಬದಲಾವಣೆಯ ನಿರೀಕ್ಷೆಯನ್ನು ವ್ಯಕ್ತಪಡಿಸಲಾಯಿತು.

ಪ್ರಮುಖವಾಗಿ ಇಂದು ಜಾಗತಿಕವಾಗಿ ಕಾಡುವ ಆಂಟಿಮೈಕ್ರೊಬಿಯಲ್ ರೆಸಿಸ್ಟೆನ್ಸ್ (AMR)  ಎದುರಿಸಲು, ಹೆಚ್ಚಿನ ಮರಣ ಮತ್ತು ಸಾಮಾಜಿಕ ಆರ್ಥಿಕ ಹೊರೆಯನ್ನು ತಗ್ಗಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಬಲಪಡಿಸಲು ನಿರ್ಣಯವನ್ನು ಅಂಗೀಕರಿಸಿದವು. 2021 ರಲ್ಲಿ ಜಾಗತಿಕವಾಗಿ ಅಂದಾಜು 4.71 ಮಿಲಿಯನ್ AMR ಸಂಬಂಧಿತ ಸಾವುಗಳು ಬ್ಯಾಕ್ಟೀರಿಯಾದ AMR ಗೆ ಸಂಬಂಧಿಸಿವೆ, ಅವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಕಂಡುಬಂದಿವೆ.

ವಿಶ್ವ ಆರೋಗ್ಯ ಸಂಸ್ಥೆ(WHO) ಸದಸ್ಯ ರಾಷ್ಟ್ರಗಳ ಪ್ರದೇಶದಲ್ಲಿ 280 ಮಿಲಿಯನ್‌ಗಿಂತಲೂ ಹೆಚ್ಚು  ಹೊಗೆರಹಿತ ತಂಬಾಕು ಬಳಕೆದಾರರು ಇದ್ದಾರೆ.  ಸುಮಾರು 11 ಮಿಲಿಯನ್ ಹದಿಹರೆಯದ ತಂಬಾಕು ಬಳಕೆದಾರರಿದ್ದಾರೆ. ಸದಸ್ಯ ರಾಷ್ಟ್ರಗಳು ಹೊಗೆರಹಿತ ತಂಬಾಕು, ಎಲೆಕ್ಟ್ರಾನಿಕ್ ಸಿಗರೇಟ್‌ಗಳು, ನಿಕೋಟಿನ್ ಪೌಚ್‌ಗಳು ಮತ್ತು ಅಡಿಕೆಗಳ ಬಳಕೆಯನ್ನು ನಿಯಂತ್ರಿಸಲು ಇದೇ ವೇಳೆ ಚರ್ಚೆ ನಡೆಯಿತು.  ಹೀಗಾಗಿ ಹೊಗೆರಹಿತ ತಂಬಾಕು,  ನಿಕೋಟಿನ್ ಉತ್ಪನ್ನಗಳು ಮತ್ತು ಅಡಿಕೆಗಳ ಬಳಕೆಯನ್ನು ಎದುರಿಸಲು, ಸದಸ್ಯ ರಾಷ್ಟ್ರಗಳು ಪ್ರಾದೇಶಿಕ  ಚೌಕಟ್ಟನ್ನು ಅನುಮೋದಿಸಿವೆ. ಈ ನಿಯಮದಲ್ಲಿ  ಉತ್ಪನ್ನಗಳ ತಯಾರಿಕೆ, ಮಾರಾಟ, ಜಾಹೀರಾತು, ಪ್ರಚಾರ ಮತ್ತು ಪ್ರಾಯೋಜಕತ್ವದ ಮೇಲೆ ಸಮಗ್ರ ನಿಷೇಧಗಳು ಸೇರಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಹವಾಮಾನ ಬಿಕ್ಕಟ್ಟನ್ನು ಕೂಡಾ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಗುರುತಿಸಿ, ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಆರೋಗ್ಯ ಮತ್ತು ಯೋಗಕ್ಷೇಮವನ್ನು ರಕ್ಷಿಸಲು ಎಲ್ಲಾ ಹಂತಗಳಲ್ಲಿ ತುರ್ತು ಮತ್ತು ಸಂಘಟಿತ ಕ್ರಮದ ಅಗತ್ಯವಿದೆ ಎಂದು ಗುರುತಿಸಿದ ಸದಸ್ಯ ರಾಷ್ಟ್ರಗಳು, ಸ್ಥಳೀಯ ಸಂದರ್ಭಗಳಿಗೆ ಅನುಗುಣವಾಗಿ ಸಾಧನಗಳನ್ನು ಬಳಸಿಕೊಂಡು ಎಲ್ಲರಿಗೂ, ವಿಶೇಷವಾಗಿ ಅತ್ಯಂತ ದುರ್ಬಲ ಜನಸಂಖ್ಯೆಗೆ, ಗುಣಮಟ್ಟದ ಆರೋಗ್ಯ ಸೇವೆಯನ್ನು ಖಚಿತಪಡಿಸಿಕೊಳ್ಳಲು ಒಪ್ಪಿಕೊಂಡವು. ಈ ಬಗ್ಗೆ WHO ತನ್ನ ವೆಬ್‌ಸೈಟ್‌ನಲ್ಲಿ ಸಭೆಯ ವರದಿ ಪ್ರಕಟಿಸಿದೆ.

ಈ ಹಿಂದೆ WHO ಸಭೆಯಲ್ಲಿ ಕೂಡಾ ಅಡಿಕೆಯ ಬಗ್ಗೆ ಪ್ರಸ್ತಾಪವಾಗಿತ್ತು. ಅಡಿಕೆ ಹಾನಿಕಾರಕ ಎಂದು ಹೇಳಿದ್ದು. ಹೀಗಾಗಿ ಶ್ರೀಲಂಕಾದಲ್ಲಿ ನಡೆಯುವ  WHO ಆಗ್ನೇಯ ಏಷ್ಯಾದ ಸಭೆಯಲ್ಲಿ ಕೂಡಾ ಈ ಬಗ್ಗೆ ಪ್ರಸ್ತಾಪದ ಬಗ್ಗೆ ನಿರೀಕ್ಷೆ ಇತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

2 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

11 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

12 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

13 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

16 hours ago