MIRROR FOCUS

ವಯನಾಡ್‌ನಲ್ಲಿ ಮುಖವನ್ನು ವಸ್ತ್ರದಿಂದ ಮರೆಮಾಚಿ ಕಾರ್ಯಚರಿಸಿದ ಆ ವ್ಯಕ್ತಿ ಯಾರು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಾಕೃತಿಕ ವಿಕೋಪ ಸಂಭವಿಸಿದ ವಯನಾಡ್‌ನಲ್ಲಿ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆ ನಡೆಸಿ‌  ಮರಳಿದೆ,‌ ದೇಶದ ವಿವಿಧ ಭಾಗಗಳಿಂದ ಬಂದಂತಹ ಹಲವಾರು ಮಂದಿ ಆ ತಂಡದಲ್ಲಿದ್ದರು. ಆದರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ವ್ಯಕ್ತಿಯೋರ್ವರ ಮುಖವು ಮಾಸ್ಕ್‌ನಂತಹ ವಸ್ತ್ರದಿಂದ ಸದಾ ಮರೆಮಾಚಲಾಗಿತ್ತು.. ಆ ಮುಖ ಮರೆಮಾಚಿದ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ.

Advertisement

ಮೂಲತ ಕೇರಳದ ಆಲಪುಳ ನಿವಾಸಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ. ಮಾರ್ಚ್ 4, 2017 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದರು. ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡು 23 ಶಸ್ತ್ರಚಿಕಿತ್ಸೆ‌ಗೆ ಒಳಪಟ್ಟು ಮುಖದ ರೂಪವನ್ನೇ ಕಳೆದುಕೊಂಡ ಕಾರಣ ಸದಾ ಮುಖ ಮರೆಮಾಚಿ ಆಗಿದೆ ಇವರ ಜೀವನ. ಎಂಜಿನಿಯರಿಂಗ್ ಪದವಿ ಪಡೆದಿದ್ದ ಇವರು ತಮ್ಮ ವೃತ್ತಿ ಜೀವನ ಶುರುಮಾಡಿದ್ದು ಕೇರಳ ವಿದ್ಯುತ್ ಇಲಾಖೆಯಲ್ಲಿ, ನಂತರ ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗ ಪಡೆದ ಇವರು ತಮ್ಮ ಸೈನಿಕನಾಗಬೇಕು ಎಂಬ ಕನಸಿನೊಂದಿದೆ ಭಾರತೀಯ ಸೇನೆಗೆ ಪ್ರವೇಶಿಸಿದ್ದರು.

ಋಷಿ ರಾಜಲಕ್ಷ್ಮಿ ಅವರ ಪತ್ನಿ ಕ್ಯಾಪ್ಟನ್ ಅನುಪಮಾ ಆರ್ಮಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದರು, ತಂದೆ ತಾಯಿ ಮತ್ತು ಪತ್ನಿಯ ಅತೀವ ಕಾಳಜಿಯಿಂದ ಚಿಕಿತ್ಸೆ ಪಡೆದ ಋಷಿ ಗಾಯಗಳಿಂದ ಬದುಕುಳಿದಿದ್ದರೂ ಅವರ ಮುಖ ಅವರಿಗೆ ನಷ್ಟವಾಗಿತ್ತು, ಅಂದಿನಿಂದ ಋಷಿ ಸದಾ ಮುಖಕವಚ ಧರಿಸಿ ದೇಶ ಸೇವೆಯಲ್ಲಿ ನಿರತರಾಗಿದ್ದರು. ತನ್ನ ದೇಶದ ನಾಗರಿಕರಿಗೆ  ಭಯೋತ್ಪಾದಕರಿಂದ ಮಾತ್ರವಲ್ಲದೆ ಪ್ರಕೃತಿ ವಿಕೋಪದಂತಹ ದುರಂತದಿಂದಲೂ ರಕ್ಷಣೆ ನೀಡುವುದೂ ಜವಾಬ್ದಾರಿ ಆಗಿದೆ ಎಂಬ ಸೇನೆಗೆ ಜನರ ಮೇಲಿರುವ ಬದ್ಧತೆಯು ಕರ್ನಲ್ ಋಷಿ ರಾಜಲಕ್ಷ್ಮಿ ಅವರನ್ನು ವಯನಾಡ್‌ ದುರಂತ ಭೂಮಿಗೆ ತಲುಪಿಸಿದ್ದು, ಇದು ತನ್ನ ರಾಜ್ಯ ಕಂಡ ದುರಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿ ಜನರ ಪ್ರೀತಿಯನ್ನು ಎದೆಯಲ್ಲಿರಿಸಿ ಋಷಿ ರಾಜಲಕ್ಷ್ಮಿ, ಮತ್ತು ಭಾರತೀಯ ಸೈನಿಕರು ವಯನಾಡಿನಿಂದ ಮರಳಿದ್ದಾರೆ.

Source : keralakaumudi

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

11 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

12 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

21 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago