Advertisement
MIRROR FOCUS

ವಯನಾಡ್‌ನಲ್ಲಿ ಮುಖವನ್ನು ವಸ್ತ್ರದಿಂದ ಮರೆಮಾಚಿ ಕಾರ್ಯಚರಿಸಿದ ಆ ವ್ಯಕ್ತಿ ಯಾರು..?

Share

ಪ್ರಾಕೃತಿಕ ವಿಕೋಪ ಸಂಭವಿಸಿದ ವಯನಾಡ್‌ನಲ್ಲಿ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆ ನಡೆಸಿ‌  ಮರಳಿದೆ,‌ ದೇಶದ ವಿವಿಧ ಭಾಗಗಳಿಂದ ಬಂದಂತಹ ಹಲವಾರು ಮಂದಿ ಆ ತಂಡದಲ್ಲಿದ್ದರು. ಆದರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ವ್ಯಕ್ತಿಯೋರ್ವರ ಮುಖವು ಮಾಸ್ಕ್‌ನಂತಹ ವಸ್ತ್ರದಿಂದ ಸದಾ ಮರೆಮಾಚಲಾಗಿತ್ತು.. ಆ ಮುಖ ಮರೆಮಾಚಿದ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ.

ಮೂಲತ ಕೇರಳದ ಆಲಪುಳ ನಿವಾಸಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ. ಮಾರ್ಚ್ 4, 2017 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದರು. ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡು 23 ಶಸ್ತ್ರಚಿಕಿತ್ಸೆ‌ಗೆ ಒಳಪಟ್ಟು ಮುಖದ ರೂಪವನ್ನೇ ಕಳೆದುಕೊಂಡ ಕಾರಣ ಸದಾ ಮುಖ ಮರೆಮಾಚಿ ಆಗಿದೆ ಇವರ ಜೀವನ. ಎಂಜಿನಿಯರಿಂಗ್ ಪದವಿ ಪಡೆದಿದ್ದ ಇವರು ತಮ್ಮ ವೃತ್ತಿ ಜೀವನ ಶುರುಮಾಡಿದ್ದು ಕೇರಳ ವಿದ್ಯುತ್ ಇಲಾಖೆಯಲ್ಲಿ, ನಂತರ ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗ ಪಡೆದ ಇವರು ತಮ್ಮ ಸೈನಿಕನಾಗಬೇಕು ಎಂಬ ಕನಸಿನೊಂದಿದೆ ಭಾರತೀಯ ಸೇನೆಗೆ ಪ್ರವೇಶಿಸಿದ್ದರು.

ಋಷಿ ರಾಜಲಕ್ಷ್ಮಿ ಅವರ ಪತ್ನಿ ಕ್ಯಾಪ್ಟನ್ ಅನುಪಮಾ ಆರ್ಮಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದರು, ತಂದೆ ತಾಯಿ ಮತ್ತು ಪತ್ನಿಯ ಅತೀವ ಕಾಳಜಿಯಿಂದ ಚಿಕಿತ್ಸೆ ಪಡೆದ ಋಷಿ ಗಾಯಗಳಿಂದ ಬದುಕುಳಿದಿದ್ದರೂ ಅವರ ಮುಖ ಅವರಿಗೆ ನಷ್ಟವಾಗಿತ್ತು, ಅಂದಿನಿಂದ ಋಷಿ ಸದಾ ಮುಖಕವಚ ಧರಿಸಿ ದೇಶ ಸೇವೆಯಲ್ಲಿ ನಿರತರಾಗಿದ್ದರು. ತನ್ನ ದೇಶದ ನಾಗರಿಕರಿಗೆ  ಭಯೋತ್ಪಾದಕರಿಂದ ಮಾತ್ರವಲ್ಲದೆ ಪ್ರಕೃತಿ ವಿಕೋಪದಂತಹ ದುರಂತದಿಂದಲೂ ರಕ್ಷಣೆ ನೀಡುವುದೂ ಜವಾಬ್ದಾರಿ ಆಗಿದೆ ಎಂಬ ಸೇನೆಗೆ ಜನರ ಮೇಲಿರುವ ಬದ್ಧತೆಯು ಕರ್ನಲ್ ಋಷಿ ರಾಜಲಕ್ಷ್ಮಿ ಅವರನ್ನು ವಯನಾಡ್‌ ದುರಂತ ಭೂಮಿಗೆ ತಲುಪಿಸಿದ್ದು, ಇದು ತನ್ನ ರಾಜ್ಯ ಕಂಡ ದುರಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿ ಜನರ ಪ್ರೀತಿಯನ್ನು ಎದೆಯಲ್ಲಿರಿಸಿ ಋಷಿ ರಾಜಲಕ್ಷ್ಮಿ, ಮತ್ತು ಭಾರತೀಯ ಸೈನಿಕರು ವಯನಾಡಿನಿಂದ ಮರಳಿದ್ದಾರೆ.

Source : keralakaumudi

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

6 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

7 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

7 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

7 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

22 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

22 hours ago