Advertisement
MIRROR FOCUS

ವಯನಾಡ್‌ನಲ್ಲಿ ಮುಖವನ್ನು ವಸ್ತ್ರದಿಂದ ಮರೆಮಾಚಿ ಕಾರ್ಯಚರಿಸಿದ ಆ ವ್ಯಕ್ತಿ ಯಾರು..?

Share

ಪ್ರಾಕೃತಿಕ ವಿಕೋಪ ಸಂಭವಿಸಿದ ವಯನಾಡ್‌ನಲ್ಲಿ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆ ನಡೆಸಿ‌  ಮರಳಿದೆ,‌ ದೇಶದ ವಿವಿಧ ಭಾಗಗಳಿಂದ ಬಂದಂತಹ ಹಲವಾರು ಮಂದಿ ಆ ತಂಡದಲ್ಲಿದ್ದರು. ಆದರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ವ್ಯಕ್ತಿಯೋರ್ವರ ಮುಖವು ಮಾಸ್ಕ್‌ನಂತಹ ವಸ್ತ್ರದಿಂದ ಸದಾ ಮರೆಮಾಚಲಾಗಿತ್ತು.. ಆ ಮುಖ ಮರೆಮಾಚಿದ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ.

ಮೂಲತ ಕೇರಳದ ಆಲಪುಳ ನಿವಾಸಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ. ಮಾರ್ಚ್ 4, 2017 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದರು. ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡು 23 ಶಸ್ತ್ರಚಿಕಿತ್ಸೆ‌ಗೆ ಒಳಪಟ್ಟು ಮುಖದ ರೂಪವನ್ನೇ ಕಳೆದುಕೊಂಡ ಕಾರಣ ಸದಾ ಮುಖ ಮರೆಮಾಚಿ ಆಗಿದೆ ಇವರ ಜೀವನ. ಎಂಜಿನಿಯರಿಂಗ್ ಪದವಿ ಪಡೆದಿದ್ದ ಇವರು ತಮ್ಮ ವೃತ್ತಿ ಜೀವನ ಶುರುಮಾಡಿದ್ದು ಕೇರಳ ವಿದ್ಯುತ್ ಇಲಾಖೆಯಲ್ಲಿ, ನಂತರ ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗ ಪಡೆದ ಇವರು ತಮ್ಮ ಸೈನಿಕನಾಗಬೇಕು ಎಂಬ ಕನಸಿನೊಂದಿದೆ ಭಾರತೀಯ ಸೇನೆಗೆ ಪ್ರವೇಶಿಸಿದ್ದರು.

ಋಷಿ ರಾಜಲಕ್ಷ್ಮಿ ಅವರ ಪತ್ನಿ ಕ್ಯಾಪ್ಟನ್ ಅನುಪಮಾ ಆರ್ಮಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದರು, ತಂದೆ ತಾಯಿ ಮತ್ತು ಪತ್ನಿಯ ಅತೀವ ಕಾಳಜಿಯಿಂದ ಚಿಕಿತ್ಸೆ ಪಡೆದ ಋಷಿ ಗಾಯಗಳಿಂದ ಬದುಕುಳಿದಿದ್ದರೂ ಅವರ ಮುಖ ಅವರಿಗೆ ನಷ್ಟವಾಗಿತ್ತು, ಅಂದಿನಿಂದ ಋಷಿ ಸದಾ ಮುಖಕವಚ ಧರಿಸಿ ದೇಶ ಸೇವೆಯಲ್ಲಿ ನಿರತರಾಗಿದ್ದರು. ತನ್ನ ದೇಶದ ನಾಗರಿಕರಿಗೆ  ಭಯೋತ್ಪಾದಕರಿಂದ ಮಾತ್ರವಲ್ಲದೆ ಪ್ರಕೃತಿ ವಿಕೋಪದಂತಹ ದುರಂತದಿಂದಲೂ ರಕ್ಷಣೆ ನೀಡುವುದೂ ಜವಾಬ್ದಾರಿ ಆಗಿದೆ ಎಂಬ ಸೇನೆಗೆ ಜನರ ಮೇಲಿರುವ ಬದ್ಧತೆಯು ಕರ್ನಲ್ ಋಷಿ ರಾಜಲಕ್ಷ್ಮಿ ಅವರನ್ನು ವಯನಾಡ್‌ ದುರಂತ ಭೂಮಿಗೆ ತಲುಪಿಸಿದ್ದು, ಇದು ತನ್ನ ರಾಜ್ಯ ಕಂಡ ದುರಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿ ಜನರ ಪ್ರೀತಿಯನ್ನು ಎದೆಯಲ್ಲಿರಿಸಿ ಋಷಿ ರಾಜಲಕ್ಷ್ಮಿ, ಮತ್ತು ಭಾರತೀಯ ಸೈನಿಕರು ವಯನಾಡಿನಿಂದ ಮರಳಿದ್ದಾರೆ.

Source : keralakaumudi

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

4 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

21 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago