Advertisement
MIRROR FOCUS

ವಯನಾಡ್‌ನಲ್ಲಿ ಮುಖವನ್ನು ವಸ್ತ್ರದಿಂದ ಮರೆಮಾಚಿ ಕಾರ್ಯಚರಿಸಿದ ಆ ವ್ಯಕ್ತಿ ಯಾರು..?

Share

ಪ್ರಾಕೃತಿಕ ವಿಕೋಪ ಸಂಭವಿಸಿದ ವಯನಾಡ್‌ನಲ್ಲಿ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆ ನಡೆಸಿ‌  ಮರಳಿದೆ,‌ ದೇಶದ ವಿವಿಧ ಭಾಗಗಳಿಂದ ಬಂದಂತಹ ಹಲವಾರು ಮಂದಿ ಆ ತಂಡದಲ್ಲಿದ್ದರು. ಆದರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ವ್ಯಕ್ತಿಯೋರ್ವರ ಮುಖವು ಮಾಸ್ಕ್‌ನಂತಹ ವಸ್ತ್ರದಿಂದ ಸದಾ ಮರೆಮಾಚಲಾಗಿತ್ತು.. ಆ ಮುಖ ಮರೆಮಾಚಿದ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ.

ಮೂಲತ ಕೇರಳದ ಆಲಪುಳ ನಿವಾಸಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ. ಮಾರ್ಚ್ 4, 2017 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದರು. ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡು 23 ಶಸ್ತ್ರಚಿಕಿತ್ಸೆ‌ಗೆ ಒಳಪಟ್ಟು ಮುಖದ ರೂಪವನ್ನೇ ಕಳೆದುಕೊಂಡ ಕಾರಣ ಸದಾ ಮುಖ ಮರೆಮಾಚಿ ಆಗಿದೆ ಇವರ ಜೀವನ. ಎಂಜಿನಿಯರಿಂಗ್ ಪದವಿ ಪಡೆದಿದ್ದ ಇವರು ತಮ್ಮ ವೃತ್ತಿ ಜೀವನ ಶುರುಮಾಡಿದ್ದು ಕೇರಳ ವಿದ್ಯುತ್ ಇಲಾಖೆಯಲ್ಲಿ, ನಂತರ ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗ ಪಡೆದ ಇವರು ತಮ್ಮ ಸೈನಿಕನಾಗಬೇಕು ಎಂಬ ಕನಸಿನೊಂದಿದೆ ಭಾರತೀಯ ಸೇನೆಗೆ ಪ್ರವೇಶಿಸಿದ್ದರು.

ಋಷಿ ರಾಜಲಕ್ಷ್ಮಿ ಅವರ ಪತ್ನಿ ಕ್ಯಾಪ್ಟನ್ ಅನುಪಮಾ ಆರ್ಮಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದರು, ತಂದೆ ತಾಯಿ ಮತ್ತು ಪತ್ನಿಯ ಅತೀವ ಕಾಳಜಿಯಿಂದ ಚಿಕಿತ್ಸೆ ಪಡೆದ ಋಷಿ ಗಾಯಗಳಿಂದ ಬದುಕುಳಿದಿದ್ದರೂ ಅವರ ಮುಖ ಅವರಿಗೆ ನಷ್ಟವಾಗಿತ್ತು, ಅಂದಿನಿಂದ ಋಷಿ ಸದಾ ಮುಖಕವಚ ಧರಿಸಿ ದೇಶ ಸೇವೆಯಲ್ಲಿ ನಿರತರಾಗಿದ್ದರು. ತನ್ನ ದೇಶದ ನಾಗರಿಕರಿಗೆ  ಭಯೋತ್ಪಾದಕರಿಂದ ಮಾತ್ರವಲ್ಲದೆ ಪ್ರಕೃತಿ ವಿಕೋಪದಂತಹ ದುರಂತದಿಂದಲೂ ರಕ್ಷಣೆ ನೀಡುವುದೂ ಜವಾಬ್ದಾರಿ ಆಗಿದೆ ಎಂಬ ಸೇನೆಗೆ ಜನರ ಮೇಲಿರುವ ಬದ್ಧತೆಯು ಕರ್ನಲ್ ಋಷಿ ರಾಜಲಕ್ಷ್ಮಿ ಅವರನ್ನು ವಯನಾಡ್‌ ದುರಂತ ಭೂಮಿಗೆ ತಲುಪಿಸಿದ್ದು, ಇದು ತನ್ನ ರಾಜ್ಯ ಕಂಡ ದುರಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿ ಜನರ ಪ್ರೀತಿಯನ್ನು ಎದೆಯಲ್ಲಿರಿಸಿ ಋಷಿ ರಾಜಲಕ್ಷ್ಮಿ, ಮತ್ತು ಭಾರತೀಯ ಸೈನಿಕರು ವಯನಾಡಿನಿಂದ ಮರಳಿದ್ದಾರೆ.

Source : keralakaumudi

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

2 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

3 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

9 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

9 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

11 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

12 hours ago