ಪ್ರಾಕೃತಿಕ ವಿಕೋಪ ಸಂಭವಿಸಿದ ವಯನಾಡ್ನಲ್ಲಿ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆ ನಡೆಸಿ ಮರಳಿದೆ, ದೇಶದ ವಿವಿಧ ಭಾಗಗಳಿಂದ ಬಂದಂತಹ ಹಲವಾರು ಮಂದಿ ಆ ತಂಡದಲ್ಲಿದ್ದರು. ಆದರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ವ್ಯಕ್ತಿಯೋರ್ವರ ಮುಖವು ಮಾಸ್ಕ್ನಂತಹ ವಸ್ತ್ರದಿಂದ ಸದಾ ಮರೆಮಾಚಲಾಗಿತ್ತು.. ಆ ಮುಖ ಮರೆಮಾಚಿದ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ.
ಮೂಲತ ಕೇರಳದ ಆಲಪುಳ ನಿವಾಸಿ ಲೆಫ್ಟಿನೆಂಟ್ ಕರ್ನಲ್ ಋಷಿ ರಾಜಲಕ್ಷ್ಮಿ. ಮಾರ್ಚ್ 4, 2017 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದರು. ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡು 23 ಶಸ್ತ್ರಚಿಕಿತ್ಸೆಗೆ ಒಳಪಟ್ಟು ಮುಖದ ರೂಪವನ್ನೇ ಕಳೆದುಕೊಂಡ ಕಾರಣ ಸದಾ ಮುಖ ಮರೆಮಾಚಿ ಆಗಿದೆ ಇವರ ಜೀವನ. ಎಂಜಿನಿಯರಿಂಗ್ ಪದವಿ ಪಡೆದಿದ್ದ ಇವರು ತಮ್ಮ ವೃತ್ತಿ ಜೀವನ ಶುರುಮಾಡಿದ್ದು ಕೇರಳ ವಿದ್ಯುತ್ ಇಲಾಖೆಯಲ್ಲಿ, ನಂತರ ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗ ಪಡೆದ ಇವರು ತಮ್ಮ ಸೈನಿಕನಾಗಬೇಕು ಎಂಬ ಕನಸಿನೊಂದಿದೆ ಭಾರತೀಯ ಸೇನೆಗೆ ಪ್ರವೇಶಿಸಿದ್ದರು.
ಋಷಿ ರಾಜಲಕ್ಷ್ಮಿ ಅವರ ಪತ್ನಿ ಕ್ಯಾಪ್ಟನ್ ಅನುಪಮಾ ಆರ್ಮಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದರು, ತಂದೆ ತಾಯಿ ಮತ್ತು ಪತ್ನಿಯ ಅತೀವ ಕಾಳಜಿಯಿಂದ ಚಿಕಿತ್ಸೆ ಪಡೆದ ಋಷಿ ಗಾಯಗಳಿಂದ ಬದುಕುಳಿದಿದ್ದರೂ ಅವರ ಮುಖ ಅವರಿಗೆ ನಷ್ಟವಾಗಿತ್ತು, ಅಂದಿನಿಂದ ಋಷಿ ಸದಾ ಮುಖಕವಚ ಧರಿಸಿ ದೇಶ ಸೇವೆಯಲ್ಲಿ ನಿರತರಾಗಿದ್ದರು. ತನ್ನ ದೇಶದ ನಾಗರಿಕರಿಗೆ ಭಯೋತ್ಪಾದಕರಿಂದ ಮಾತ್ರವಲ್ಲದೆ ಪ್ರಕೃತಿ ವಿಕೋಪದಂತಹ ದುರಂತದಿಂದಲೂ ರಕ್ಷಣೆ ನೀಡುವುದೂ ಜವಾಬ್ದಾರಿ ಆಗಿದೆ ಎಂಬ ಸೇನೆಗೆ ಜನರ ಮೇಲಿರುವ ಬದ್ಧತೆಯು ಕರ್ನಲ್ ಋಷಿ ರಾಜಲಕ್ಷ್ಮಿ ಅವರನ್ನು ವಯನಾಡ್ ದುರಂತ ಭೂಮಿಗೆ ತಲುಪಿಸಿದ್ದು, ಇದು ತನ್ನ ರಾಜ್ಯ ಕಂಡ ದುರಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿ ಜನರ ಪ್ರೀತಿಯನ್ನು ಎದೆಯಲ್ಲಿರಿಸಿ ಋಷಿ ರಾಜಲಕ್ಷ್ಮಿ, ಮತ್ತು ಭಾರತೀಯ ಸೈನಿಕರು ವಯನಾಡಿನಿಂದ ಮರಳಿದ್ದಾರೆ.
Source : keralakaumudi
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…