ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧ ಎಂದ ಮೋದಿ

April 14, 2022
10:33 PM

ಜಾಗತಿಕ ಆಹಾರ ಕೊರತೆಯ ಸಮಸ್ಯೆ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಚರ್ಚಿಸಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧವಿರುವುದಾಗಿ ಹೇಳಿದ್ದಾರೆ.

ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ಭಾರತ ವಿಶ್ವಕ್ಕೆ ಆಹಾರ ಸರಬರಾಜು ಮಾಡಲು ಸಿದ್ಧ ಎಂದು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಸ್ಟೆಲ್ ಮತ್ತು ಶ್ರೀ ಅನ್ನಪೂರ್ಣ ಧಾಮ್ ಶಿಕ್ಷಣ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಚಾರ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ. ಇದೀಗ ಜಗತ್ತು ಹೊಸ ಸಮಸ್ಯೆಯನ್ನು ಎದುರಿಸುವಂತಾಗಿದೆ. ಜಾಗತಿಕವಾಗಿ ಆಹಾರ ದಾಸ್ತಾನು ಖಾಲಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಾ ಈ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿ) ಅನುಮತಿ ನೀಡಿದರೆ ಭಾರತ ನಾಳೆಯಿಂದಲೇ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧವಿರುವುದಾಗಿ ಸಲಹೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror