ಜಾಗತಿಕ ಆಹಾರ ಕೊರತೆಯ ಸಮಸ್ಯೆ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಚರ್ಚಿಸಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧವಿರುವುದಾಗಿ ಹೇಳಿದ್ದಾರೆ.
ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ಭಾರತ ವಿಶ್ವಕ್ಕೆ ಆಹಾರ ಸರಬರಾಜು ಮಾಡಲು ಸಿದ್ಧ ಎಂದು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಸ್ಟೆಲ್ ಮತ್ತು ಶ್ರೀ ಅನ್ನಪೂರ್ಣ ಧಾಮ್ ಶಿಕ್ಷಣ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಚಾರ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ. ಇದೀಗ ಜಗತ್ತು ಹೊಸ ಸಮಸ್ಯೆಯನ್ನು ಎದುರಿಸುವಂತಾಗಿದೆ. ಜಾಗತಿಕವಾಗಿ ಆಹಾರ ದಾಸ್ತಾನು ಖಾಲಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಾ ಈ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿ) ಅನುಮತಿ ನೀಡಿದರೆ ಭಾರತ ನಾಳೆಯಿಂದಲೇ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧವಿರುವುದಾಗಿ ಸಲಹೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…