ಜಾಗತಿಕ ಆಹಾರ ಕೊರತೆಯ ಸಮಸ್ಯೆ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಚರ್ಚಿಸಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧವಿರುವುದಾಗಿ ಹೇಳಿದ್ದಾರೆ.
ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ಭಾರತ ವಿಶ್ವಕ್ಕೆ ಆಹಾರ ಸರಬರಾಜು ಮಾಡಲು ಸಿದ್ಧ ಎಂದು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಸ್ಟೆಲ್ ಮತ್ತು ಶ್ರೀ ಅನ್ನಪೂರ್ಣ ಧಾಮ್ ಶಿಕ್ಷಣ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಚಾರ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ. ಇದೀಗ ಜಗತ್ತು ಹೊಸ ಸಮಸ್ಯೆಯನ್ನು ಎದುರಿಸುವಂತಾಗಿದೆ. ಜಾಗತಿಕವಾಗಿ ಆಹಾರ ದಾಸ್ತಾನು ಖಾಲಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಾ ಈ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿ) ಅನುಮತಿ ನೀಡಿದರೆ ಭಾರತ ನಾಳೆಯಿಂದಲೇ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧವಿರುವುದಾಗಿ ಸಲಹೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…