ಜಾಗತಿಕ ಆಹಾರ ಕೊರತೆಯ ಸಮಸ್ಯೆ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಚರ್ಚಿಸಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧವಿರುವುದಾಗಿ ಹೇಳಿದ್ದಾರೆ.
ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ಭಾರತ ವಿಶ್ವಕ್ಕೆ ಆಹಾರ ಸರಬರಾಜು ಮಾಡಲು ಸಿದ್ಧ ಎಂದು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಸ್ಟೆಲ್ ಮತ್ತು ಶ್ರೀ ಅನ್ನಪೂರ್ಣ ಧಾಮ್ ಶಿಕ್ಷಣ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಚಾರ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ. ಇದೀಗ ಜಗತ್ತು ಹೊಸ ಸಮಸ್ಯೆಯನ್ನು ಎದುರಿಸುವಂತಾಗಿದೆ. ಜಾಗತಿಕವಾಗಿ ಆಹಾರ ದಾಸ್ತಾನು ಖಾಲಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಾ ಈ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿ) ಅನುಮತಿ ನೀಡಿದರೆ ಭಾರತ ನಾಳೆಯಿಂದಲೇ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧವಿರುವುದಾಗಿ ಸಲಹೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…