ಜಾಗತಿಕ ಆಹಾರ ಕೊರತೆಯ ಸಮಸ್ಯೆ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಚರ್ಚಿಸಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧವಿರುವುದಾಗಿ ಹೇಳಿದ್ದಾರೆ.
ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ಭಾರತ ವಿಶ್ವಕ್ಕೆ ಆಹಾರ ಸರಬರಾಜು ಮಾಡಲು ಸಿದ್ಧ ಎಂದು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಸ್ಟೆಲ್ ಮತ್ತು ಶ್ರೀ ಅನ್ನಪೂರ್ಣ ಧಾಮ್ ಶಿಕ್ಷಣ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಚಾರ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ. ಇದೀಗ ಜಗತ್ತು ಹೊಸ ಸಮಸ್ಯೆಯನ್ನು ಎದುರಿಸುವಂತಾಗಿದೆ. ಜಾಗತಿಕವಾಗಿ ಆಹಾರ ದಾಸ್ತಾನು ಖಾಲಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಾ ಈ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿ) ಅನುಮತಿ ನೀಡಿದರೆ ಭಾರತ ನಾಳೆಯಿಂದಲೇ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧವಿರುವುದಾಗಿ ಸಲಹೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…