Advertisement
Opinion

#Opinion | ನಾನೇಕೆ ಕೃಷಿಕ….? | ಕೃಷಿಕ ರಮೇಶ ದೇಲಂಪಾಡಿ ಹೇಳುತ್ತಾರೆ…. |

Share

ಹುಟ್ಟಿದ್ದು ಕೃಷಿ ಕುಟುಂಬದಲ್ಲಿ.ಕೃಷಿ ಹೊರತಾಗಿ ಇತರ ಆದಾಯ ಇಲ್ಲದ ಮನೆ.1960ರ ಉತ್ತರಾರ್ಧದ ದಶಕದಲ್ಲಿ ನನ್ನ ಜನ್ಮ.ಈ ಕಾಲಘಟ್ಟದಲ್ಲಿ ಮತ್ತು ಮುಂದಕ್ಕೆ 1990ರ ದಶಕದ ತನಕವೂ ಕೃಷಿ ಆದಾಯದ ಮುಂದೆ ಇತರ ಉದ್ಯೋಗಗಳಿಂದ ಸಿಗುವ ಸಾಮಾನ್ಯ ಆದಾಯ ಕಡಿಮೆ ಇದ್ದ ಕಾಲಘಟ್ಟ.

ಹಾಗಾಗಿ ಏನೇ ವಿದ್ಯಾಭ್ಯಾಸ ಇದ್ದರೂ ಕೊನೆಗೆ ಜೀವನ ಕೃಷಿಯಲ್ಲೇ ಅಂತ ಹೆತ್ತವರ ನಿರ್ಧಾರ.ಅದಕ್ಕೆ ಪೂರಕವಾಗಿ ನನ್ನ ಮನಸ್ಥಿತಿಯೂ ಹೊಂದಿಕೊಂಡಿತ್ತು. ನನ್ನ ವಿದ್ಯಾಭ್ಯಾಸ ಒಂದು ಹಂತಕ್ಕೆ ಬಂದದ್ದು 1987ನೇ ಇಸವಿಯಲ್ಲಿ. ಅಂದಿನಿಂದ ಕೃಷಿಯೇ ನನ್ನ ಉದ್ಯೋಗ.

ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ಆದಾಯ ಕೊಡುತ್ತದೆ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಕನಿಷ್ಟ ಶ್ರಮದಾಯಕ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ನೆಮ್ಮದಿ ಕೊಡುವಂತಹದ್ದು ಅಂತ.
ಹೌದು ,ನನ್ನ ಆದಾಯ ಸಂಪೂರ್ಣವಾಗಿ ಕೃಷಿ ಕ್ಷೇತ್ರದಿಂದಲೇ.ನನ್ನ ಎಲ್ಲಾ ಆಸೆ,ಬಯಕೆಗಳನ್ಬೂ ಪೂರೈಸಿಕೊಳ್ಳಲು ಪ್ರಯತ್ನಿಸ ಬೇಕಾದ್ದೂ ಇದೇ ಕೃಷಿ ಕ್ಷೇತ್ರದ ಆದಾಯದಿಂದಲೇ.ಇದಕ್ಕಾಗಿ ಕೃಷಿಯಿಂದ ನನಗೆ ಹಣ ಬೇಕು,ಮತ್ತಷ್ಟು ಬೇಕು.
ನನಗೂ ಆಸೆಗಳಿವೆ.ಸ್ವಂತಕ್ಕೊಂದು ನನ್ನದೇ ಆದ , ನನ್ನ ಸೈಟಿನ ಮನೆ ಇರಬೇಕು.ಕನಿಷ್ಟ ಇನ್ನೋವಾ ಲಕ್ಷುರಿ ಕಾರು ಕೊಂಡು ಕೊಳ್ಳಲು ಸಾಧ್ಯವಾಗಬೇಕು.

ಆಗಿಲ್ಲ ಇನ್ನೂ,ಪೂರೈಸಿಲ್ಲ ಇನ್ನೂ.ಅಷ್ಟೊಂದು ಹಣ ನನಗಿನ್ನೂ ಕೃಷಿಯಿಂದ ದೊರಕಿಲ್ಲ. ಅಷ್ಟು ಸಾಕಾ? ಖಂಡಿತಾ ಸಾಲದು.ಸಾಧ್ಯ ಆದರೆ ಸ್ವಂತಕ್ಕೊಂದು ಹೆಲಿಕಾಪ್ಟರ್ ಖರೀದಿಸ ಬೇಕು.ಖಾಸಾಗಿ ಜೆಟ್ ವಿಮಾನ ಇಟ್ಟುಕೊಳ್ಳ ಬೇಕು.ಆಸೆ ತಪ್ಪಾ?

‌ನನ್ನ ಉತ್ಪನ್ನಗಳನ್ಬು ನಾನು ಮುಕ್ತ ಮಾರುಕಟ್ಟೆ ಬೆಲೆಯಲ್ಲಷ್ಟೇ ಮಾರಬೇಕಾದ ಅನಿವಾರ್ಯತೆ ನನಗಿದೆ.ನನ್ನ ಉತ್ಪನ್ನಗಳನ್ನು ಮಾರುಕಟ್ಟೆ ಬೆಲೆಗಿಂತಲೂ ಹೆಚ್ಚು ದರ ಕೊಟ್ಟು ಖರೀದಿಸುವ ಗಿರಾಕಿಗಳು ನನಗಿಲ್ಲ. ಅದೆಲ್ಲ ಪೂರೈಸಿದ ಬಳಿಕ ಇನ್ನುಳಿದ ವಿಷಯಗಳತ್ತ ಗಮನ ಕೊಡೋಣ.ಅಲ್ಲಿ ತನಕ ನನ್ನ ನೀತಿಗಳಲ್ಲಿ‌ ಯಾವ ಬದಲಾವಣೆಯೂ ಇಲ್ಲ.

ಬರಹ :
ರಮೇಶ್‌ ದೇಲಂಪಾಡಿ
ರಮೇಶ್‌ ದೇಲಂಪಾಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago