Advertisement
Opinion

#Opinion | ನಾನೇಕೆ ಕೃಷಿಕ….? | ಕೃಷಿಕ ರಮೇಶ ದೇಲಂಪಾಡಿ ಹೇಳುತ್ತಾರೆ…. |

Share

ಹುಟ್ಟಿದ್ದು ಕೃಷಿ ಕುಟುಂಬದಲ್ಲಿ.ಕೃಷಿ ಹೊರತಾಗಿ ಇತರ ಆದಾಯ ಇಲ್ಲದ ಮನೆ.1960ರ ಉತ್ತರಾರ್ಧದ ದಶಕದಲ್ಲಿ ನನ್ನ ಜನ್ಮ.ಈ ಕಾಲಘಟ್ಟದಲ್ಲಿ ಮತ್ತು ಮುಂದಕ್ಕೆ 1990ರ ದಶಕದ ತನಕವೂ ಕೃಷಿ ಆದಾಯದ ಮುಂದೆ ಇತರ ಉದ್ಯೋಗಗಳಿಂದ ಸಿಗುವ ಸಾಮಾನ್ಯ ಆದಾಯ ಕಡಿಮೆ ಇದ್ದ ಕಾಲಘಟ್ಟ.

Advertisement
Advertisement

ಹಾಗಾಗಿ ಏನೇ ವಿದ್ಯಾಭ್ಯಾಸ ಇದ್ದರೂ ಕೊನೆಗೆ ಜೀವನ ಕೃಷಿಯಲ್ಲೇ ಅಂತ ಹೆತ್ತವರ ನಿರ್ಧಾರ.ಅದಕ್ಕೆ ಪೂರಕವಾಗಿ ನನ್ನ ಮನಸ್ಥಿತಿಯೂ ಹೊಂದಿಕೊಂಡಿತ್ತು. ನನ್ನ ವಿದ್ಯಾಭ್ಯಾಸ ಒಂದು ಹಂತಕ್ಕೆ ಬಂದದ್ದು 1987ನೇ ಇಸವಿಯಲ್ಲಿ. ಅಂದಿನಿಂದ ಕೃಷಿಯೇ ನನ್ನ ಉದ್ಯೋಗ.

Advertisement

ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ಆದಾಯ ಕೊಡುತ್ತದೆ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಕನಿಷ್ಟ ಶ್ರಮದಾಯಕ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ನೆಮ್ಮದಿ ಕೊಡುವಂತಹದ್ದು ಅಂತ.
ಹೌದು ,ನನ್ನ ಆದಾಯ ಸಂಪೂರ್ಣವಾಗಿ ಕೃಷಿ ಕ್ಷೇತ್ರದಿಂದಲೇ.ನನ್ನ ಎಲ್ಲಾ ಆಸೆ,ಬಯಕೆಗಳನ್ಬೂ ಪೂರೈಸಿಕೊಳ್ಳಲು ಪ್ರಯತ್ನಿಸ ಬೇಕಾದ್ದೂ ಇದೇ ಕೃಷಿ ಕ್ಷೇತ್ರದ ಆದಾಯದಿಂದಲೇ.ಇದಕ್ಕಾಗಿ ಕೃಷಿಯಿಂದ ನನಗೆ ಹಣ ಬೇಕು,ಮತ್ತಷ್ಟು ಬೇಕು.
ನನಗೂ ಆಸೆಗಳಿವೆ.ಸ್ವಂತಕ್ಕೊಂದು ನನ್ನದೇ ಆದ , ನನ್ನ ಸೈಟಿನ ಮನೆ ಇರಬೇಕು.ಕನಿಷ್ಟ ಇನ್ನೋವಾ ಲಕ್ಷುರಿ ಕಾರು ಕೊಂಡು ಕೊಳ್ಳಲು ಸಾಧ್ಯವಾಗಬೇಕು.

ಆಗಿಲ್ಲ ಇನ್ನೂ,ಪೂರೈಸಿಲ್ಲ ಇನ್ನೂ.ಅಷ್ಟೊಂದು ಹಣ ನನಗಿನ್ನೂ ಕೃಷಿಯಿಂದ ದೊರಕಿಲ್ಲ. ಅಷ್ಟು ಸಾಕಾ? ಖಂಡಿತಾ ಸಾಲದು.ಸಾಧ್ಯ ಆದರೆ ಸ್ವಂತಕ್ಕೊಂದು ಹೆಲಿಕಾಪ್ಟರ್ ಖರೀದಿಸ ಬೇಕು.ಖಾಸಾಗಿ ಜೆಟ್ ವಿಮಾನ ಇಟ್ಟುಕೊಳ್ಳ ಬೇಕು.ಆಸೆ ತಪ್ಪಾ?

Advertisement

‌ನನ್ನ ಉತ್ಪನ್ನಗಳನ್ಬು ನಾನು ಮುಕ್ತ ಮಾರುಕಟ್ಟೆ ಬೆಲೆಯಲ್ಲಷ್ಟೇ ಮಾರಬೇಕಾದ ಅನಿವಾರ್ಯತೆ ನನಗಿದೆ.ನನ್ನ ಉತ್ಪನ್ನಗಳನ್ನು ಮಾರುಕಟ್ಟೆ ಬೆಲೆಗಿಂತಲೂ ಹೆಚ್ಚು ದರ ಕೊಟ್ಟು ಖರೀದಿಸುವ ಗಿರಾಕಿಗಳು ನನಗಿಲ್ಲ. ಅದೆಲ್ಲ ಪೂರೈಸಿದ ಬಳಿಕ ಇನ್ನುಳಿದ ವಿಷಯಗಳತ್ತ ಗಮನ ಕೊಡೋಣ.ಅಲ್ಲಿ ತನಕ ನನ್ನ ನೀತಿಗಳಲ್ಲಿ‌ ಯಾವ ಬದಲಾವಣೆಯೂ ಇಲ್ಲ.

ಬರಹ :
ರಮೇಶ್‌ ದೇಲಂಪಾಡಿ
ರಮೇಶ್‌ ದೇಲಂಪಾಡಿ
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

7 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

7 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

8 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

8 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

8 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

8 hours ago