Advertisement
Opinion

#Opinion | ನಾನೇಕೆ ಕೃಷಿಕ….? | ಕೃಷಿಕ ರಮೇಶ ದೇಲಂಪಾಡಿ ಹೇಳುತ್ತಾರೆ…. |

Share

ಹುಟ್ಟಿದ್ದು ಕೃಷಿ ಕುಟುಂಬದಲ್ಲಿ.ಕೃಷಿ ಹೊರತಾಗಿ ಇತರ ಆದಾಯ ಇಲ್ಲದ ಮನೆ.1960ರ ಉತ್ತರಾರ್ಧದ ದಶಕದಲ್ಲಿ ನನ್ನ ಜನ್ಮ.ಈ ಕಾಲಘಟ್ಟದಲ್ಲಿ ಮತ್ತು ಮುಂದಕ್ಕೆ 1990ರ ದಶಕದ ತನಕವೂ ಕೃಷಿ ಆದಾಯದ ಮುಂದೆ ಇತರ ಉದ್ಯೋಗಗಳಿಂದ ಸಿಗುವ ಸಾಮಾನ್ಯ ಆದಾಯ ಕಡಿಮೆ ಇದ್ದ ಕಾಲಘಟ್ಟ.

ಹಾಗಾಗಿ ಏನೇ ವಿದ್ಯಾಭ್ಯಾಸ ಇದ್ದರೂ ಕೊನೆಗೆ ಜೀವನ ಕೃಷಿಯಲ್ಲೇ ಅಂತ ಹೆತ್ತವರ ನಿರ್ಧಾರ.ಅದಕ್ಕೆ ಪೂರಕವಾಗಿ ನನ್ನ ಮನಸ್ಥಿತಿಯೂ ಹೊಂದಿಕೊಂಡಿತ್ತು. ನನ್ನ ವಿದ್ಯಾಭ್ಯಾಸ ಒಂದು ಹಂತಕ್ಕೆ ಬಂದದ್ದು 1987ನೇ ಇಸವಿಯಲ್ಲಿ. ಅಂದಿನಿಂದ ಕೃಷಿಯೇ ನನ್ನ ಉದ್ಯೋಗ.

ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ಆದಾಯ ಕೊಡುತ್ತದೆ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಕನಿಷ್ಟ ಶ್ರಮದಾಯಕ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ನೆಮ್ಮದಿ ಕೊಡುವಂತಹದ್ದು ಅಂತ.
ಹೌದು ,ನನ್ನ ಆದಾಯ ಸಂಪೂರ್ಣವಾಗಿ ಕೃಷಿ ಕ್ಷೇತ್ರದಿಂದಲೇ.ನನ್ನ ಎಲ್ಲಾ ಆಸೆ,ಬಯಕೆಗಳನ್ಬೂ ಪೂರೈಸಿಕೊಳ್ಳಲು ಪ್ರಯತ್ನಿಸ ಬೇಕಾದ್ದೂ ಇದೇ ಕೃಷಿ ಕ್ಷೇತ್ರದ ಆದಾಯದಿಂದಲೇ.ಇದಕ್ಕಾಗಿ ಕೃಷಿಯಿಂದ ನನಗೆ ಹಣ ಬೇಕು,ಮತ್ತಷ್ಟು ಬೇಕು.
ನನಗೂ ಆಸೆಗಳಿವೆ.ಸ್ವಂತಕ್ಕೊಂದು ನನ್ನದೇ ಆದ , ನನ್ನ ಸೈಟಿನ ಮನೆ ಇರಬೇಕು.ಕನಿಷ್ಟ ಇನ್ನೋವಾ ಲಕ್ಷುರಿ ಕಾರು ಕೊಂಡು ಕೊಳ್ಳಲು ಸಾಧ್ಯವಾಗಬೇಕು.

ಆಗಿಲ್ಲ ಇನ್ನೂ,ಪೂರೈಸಿಲ್ಲ ಇನ್ನೂ.ಅಷ್ಟೊಂದು ಹಣ ನನಗಿನ್ನೂ ಕೃಷಿಯಿಂದ ದೊರಕಿಲ್ಲ. ಅಷ್ಟು ಸಾಕಾ? ಖಂಡಿತಾ ಸಾಲದು.ಸಾಧ್ಯ ಆದರೆ ಸ್ವಂತಕ್ಕೊಂದು ಹೆಲಿಕಾಪ್ಟರ್ ಖರೀದಿಸ ಬೇಕು.ಖಾಸಾಗಿ ಜೆಟ್ ವಿಮಾನ ಇಟ್ಟುಕೊಳ್ಳ ಬೇಕು.ಆಸೆ ತಪ್ಪಾ?

‌ನನ್ನ ಉತ್ಪನ್ನಗಳನ್ಬು ನಾನು ಮುಕ್ತ ಮಾರುಕಟ್ಟೆ ಬೆಲೆಯಲ್ಲಷ್ಟೇ ಮಾರಬೇಕಾದ ಅನಿವಾರ್ಯತೆ ನನಗಿದೆ.ನನ್ನ ಉತ್ಪನ್ನಗಳನ್ನು ಮಾರುಕಟ್ಟೆ ಬೆಲೆಗಿಂತಲೂ ಹೆಚ್ಚು ದರ ಕೊಟ್ಟು ಖರೀದಿಸುವ ಗಿರಾಕಿಗಳು ನನಗಿಲ್ಲ. ಅದೆಲ್ಲ ಪೂರೈಸಿದ ಬಳಿಕ ಇನ್ನುಳಿದ ವಿಷಯಗಳತ್ತ ಗಮನ ಕೊಡೋಣ.ಅಲ್ಲಿ ತನಕ ನನ್ನ ನೀತಿಗಳಲ್ಲಿ‌ ಯಾವ ಬದಲಾವಣೆಯೂ ಇಲ್ಲ.

ಬರಹ :
ರಮೇಶ್‌ ದೇಲಂಪಾಡಿ
ರಮೇಶ್‌ ದೇಲಂಪಾಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

3 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

5 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

12 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

15 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

20 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago