Advertisement
Opinion

#Agriculture |ಸುಸ್ಥಿರ ಮತ್ತು ಸಮಗ್ರ ಕೃಷಿ ಅಭಿವೃದ್ಧಿ ಏಕೆ ಮತ್ತು ಹೇಗೆ…?

Share

ನಮ್ಮ ಬಹುತೇಕ ರೈತರು ಹೆಚ್ಚು ರಾಸಾಯನಿಕ ಗೊಬ್ಬರ #ChemicalFertilizers ಮತ್ತು ಔಷಧಿಗಳನ್ನು ಬಳಸುತ್ತಿರುದರಿಂದ, ಆಧುನಿಕ ಕಾಲದಲ್ಲಿ ಅಪರಿಮಿತ ಹಣ ಮಾಡುವ ಆಸೆಗೆ ಸಿಲುಕಿ ವಾಣಿಜ್ಯದಾಯಕ ಏಕಬೆಳೆಗಳನ್ನು ನಿರಂತರವಾಗಿ ಬೆಳೆಯುತ್ತಿರುವದರಿಂದ ಮಣ್ಣಿನ ರಚನೆ ಹದಗೆಟ್ಟು, ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿ #micro-organism ಗಳ ಸಂಖ್ಯೆ ಕ್ಷೀಣಗೊಂಡು, ಅವಶ್ಯಕ ಪೋಷಕಾಂಶಗಳ ಕೊರತೆ ಮತ್ತು ಭೂಮಿಯ ಫಲವತ್ತತೆ ಕಡಿಮೆಯಾಗಿ, ಮೇಲ್ಪದರದ ಮಣ್ಣು ಗಡುಸಾಗುತ್ತಿದೆ. ಮಣ್ಣಿನಲ್ಲಿ ನೀರು ಇಂಗದೇ, ಮಣ್ಣು #soil ನೀರನ್ನು ಹಿಡಿದಿಡಲಾಗದ ಸ್ಥಿತಿಯನ್ನು ತಲುಪಿದೆ.

Advertisement

ಇಂತಹ ಮಣ್ಣಿನಲ್ಲಿ ಬೆಳೆ ಮತ್ತು ನಿವ್ವಳ ಆದಾಯ ಅನಿಶ್ಚಿತತೆಯಿಂದ ಕೂಡಿರುವುದರಿಂದ ವ್ಯವಸಾಯದ ಖರ್ಚು ಅಧಿಕವಾಗಿ, ರೈತರು ಸಾಲಭಾಧೆಗೆ ಸಿಲುಕಿಕೊಳ್ಳುತ್ತಿದ್ದಾರೆ. ಇದಕ್ಕಿರುವ ಸುಲಭ ಪರಿಹಾರ ಸಾವಯವ, ಸುಸ್ಥಿರ ಮತ್ತು ಸಮಗ್ರ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳುವುದು.

1. ಮಣ್ಣು ಮತ್ತು ನೀರನ್ನು ಸಂರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವದು. ಬದುಗಳನ್ನು ನಿರ್ಮಿಸುವದು, ಜಮೀನಿನ ಸುತ್ತ ಹಸಿರೆಲೆ ಗೊಬ್ಬರ ಮತ್ತು ಬಹುಪಯೋಗಿ ಮರಗಿಡಗಳನ್ನು ಬೆಳೆಸುವುದು, ಹೊದಿಕೆ ಬೆಳೆಗಳನ್ನು ಬೆಳೆಯುವುದು, ಸಾವಯವ ತ್ಯಾಜ್ಯವನ್ನು ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಮೇಲ್ಪದರದಲ್ಲಿ ಹರಡುವುದು ಇತ್ಯಾದಿ.
ಕಾಡು ಜಾತಿಯ ಮರಗಳಾದ ತೇಗ, ಸಿಲ್ವರ್, ಮಹಾಘನಿ, ಹೆಬ್ಬೇವು, ಮುಂತಾದವುಗಳನ್ನು ಯಾವುದೇ ಕಾರಣಕ್ಕೂ ಬೆಳೆಯಬೇಡಿ.

2. ಮಣ್ಣಿನ ಫಲವತ್ತತೆ ಮತ್ತು ಸಾವಯವ ಇಂಗಾಲದ ಅಂಶವನ್ನು ಹೆಚ್ಚಿಸಲು ಕೊಟ್ಟಿಗೆ ಗೊಬ್ಬರ, ಹಸಿರು ಗೊಬ್ಬರ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರೆಹುಳು ಗೊಬ್ಬರ, ಜೈವಿಕ ಗೊಬ್ಬರ, ಎಣ್ಣೆಕಾಳುಗಳ ಹಿಂಡಿ, ಕುರಿ-ಕೋಳಿ ಗೊಬ್ಬರ ಇತ್ಯಾದಿಗಳನ್ನು ನಿಯಮಿತವಾಗಿ ಕೃಷಿಭೂಮಿಗೆ ಸೇರಿಸಬೇಕು.

3. ಬೆಳೆ ವೈವಿಧ್ಯತೆಯನ್ನು ಅಳವಡಿಸಿಕೊಳ್ಳುವುದು ಏಕಬೆಳೆಯ ಬದಲಿಗೆ ಬಹುಬೆಳೆ ಪದ್ದತಿ (ಅಡಿಕೆ, ತೆಂಗು, ಬಾಳೆ, ಅರಿಶಿನ, ಕೊಕೊ, ಸಾಂಬಾರು ಪದಾರ್ಥಗಳು) ಅಕಡಿ ಬೆಳೆ (ಶೇಂಗಾ, ತೊಗರಿ, ಅಲಸಂದೆ, ಹೆಸರು, ರಾಗಿ, ಸಿರಿಧಾನ್ಯ, ಹರಳು) ಅಂತರಬೆಳೆಗಳು (ಈರುಳ್ಳಿ, ಕೊತ್ತಂಬರಿ, ಬೆಂಡೆ, ತೊಗರಿ ಇತ್ಯಾದಿ) ಬದಲಿ ಬೆಳೆ, ಮೋಹಕ ಬೆಳೆ (ಹರಳು, ಚೆಂಡುಹೂ, ಬೆಂಡೆ), ಪರ್ಯಾಯ ಬೆಳೆ (ಕೊರಲೆ, ಕಡಲೆ, ಜೋಳ) ಇತ್ಯಾದಿ ಬೆಳೆಪದ್ದತಿಗಳ ಬಗ್ಗೆ ತಿಳಿದುಕೊಳ್ಳುವದು ಮತ್ತು ಸೂಕ್ತ ರೀತಿಯಲ್ಲಿ ಅಳವಡಿಸಿಕೊಳ್ಳವುದು.

4. ವ್ಯವಸ್ಥಿತ ಮತ್ತು ಸಮರ್ಪಕ ಬೇಸಾಯ ಪದ್ದತಿಗಳನ್ನು ಅಳವಡಿಸಿಕೊಳ್ಳುವುದು ಉತ್ತಮ ತಳಿ ಮತ್ತು ಬೀಜದ ಆಯ್ಕೆ, ತೇವಾಂಶಕ್ಕನುಗುಣವಾಗಿ ಬಿತ್ತನೆಯ ಸಮಯವನ್ನು ನಿರ್ಧರಿಸುವದು. ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚು ಒತ್ತುಕೊಡುವುದು ಇತ್ಯಾದಿ.  ಬೀಜ ಸ್ವಾವಲಂಬನೆ : ಸಾಧ್ಯವಾದಷ್ಟು ಬಿತ್ತನೆ ಬೀಜಗಳನ್ನು ನೀವೇ ಸಂಗ್ರಹಿಸಿ ಇಟ್ಟುಕೊಳ್ಳುವುದನ್ನು ರೂಢಿಸಿಕೊಳ್ಳಿ.

5. ಕೃಷಿ ಅವಲಂಬಿತ ಜಾನುವಾರಗಳನ್ನು ಸಾಕುವದು.ಹಸು, ಕುರಿ, ಕೋಳಿ ಮುಂತಾದ ಜಾನುವಾರಗಳು ಕೃಷಿಗೆ ಪೂರಕ ಮತ್ತು ಹೆಚ್ಚುವರಿ ಆದಾಯ ತರುತ್ತವೆ.

6. ರಾಸಾಯನಿಕವಿಲ್ಲದೆ ಸಾವಯವ ಪದ್ದತಿಗಳಿಂದ ರೋಗ ಮತ್ತು ಕೀಟಗಳನ್ಬು ಹತೋಟಿ ಮಾಡುವದು

7. ಕೃಷಿಸಂಬಂಧಿತ ಉಪಕಸುಬುಗಳನ್ನು ಅಳವಡಿಸಿಕೊಳ್ಳುವುದು.

8. ರೈತ ಸಂಘಟನೆಗಳನ್ನು ಸೇರುವುದು, ತರಬೇತಿ ಮತ್ತು ಮೇಳಗಳಲ್ಲಿ ಭಾಗವಹಿಸುವುದರಿಂದ ಬಹಳಷ್ಟು ಮಾಹಿತಿ ದೊರೆಯುತ್ತದೆ ಮತ್ತು ಪರಸ್ಪರರ ಸಂಪರ್ಕದಿಂದ ಕೆಲಸಗಳು ಸುಲಲಿತವಾಗಿ ಸಾಗುತ್ತವೆ.

9. ಸಮುದಾಯಿಕವಾಗಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ಮಾರಾಟ ಮುಂತಾದ ತಾವು ಬೆಳೆದ ಪದಾರ್ಥಗಳಿಗೆ ದುಪ್ಪಟ್ಟು ಆದಾಯ ಗಳಿಸುವುದು. ಇದಕ್ಕಾಗಿ ಸರ್ಕಾರದಿಂದ ದೊರೆಯುವ ಪ್ರೋತ್ಸಾಹಧನವನ್ನು ಸಮರ್ಪಕವಾಗಿ ಬಳಸಿ.

(Source)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

2 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

3 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

3 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

3 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

3 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

3 hours ago