Advertisement
ಧಾರ್ಮಿಕ

#Culture | ಮನೆಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಏಕೆ..? | ಪೈಂಟಿನಿಂದ ಶಾಶ್ವತ ರಂಗೋಲಿ ಹಚ್ಚಿದಿರಿ ಜೋಕೆ…!

Share

ಸೂರ್ಯೋದಯಕ್ಕೂ ಮುನ್ನ ಎದ್ದು ಗೃಹಿಣಿಯರು ಮನೆ ಅಂಗಳದ ಕಸ ಗುಡಿಸಿ, ಹೊಸ್ತಿಲನ್ನು ನೀರಿನಿಂದ ಸ್ವಚ್ಛಗೊಳಿಸಿ ಅರಿಶಿನ, ಕುಂಕುಮ ಹಚ್ಚಿ ಹೂಗಳನ್ನು ಇಡುವುದು  ಹಿಂದೂ ಧರ್ಮದಲ್ಲಿ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಯಾರು ಅಷ್ಟು ಬೇಗ ಎದ್ದು ಇದೆಲ್ಲಾ ಮಾಡ್ತಾರೆ ಅಂತಾ ಶಾಶ್ವತವಾಗಿ ಹೊಸ್ತಿಲಿಗೆ ಹಳದಿ ಪೇಂಟ್ ಬಳಸ್ತಾರೆ. ಅದರ ಮೇಲೆ ಬಿಳಿ ಪೇಂಟ್‌ನಿಂದ ರಂಗೋಲಿ ಗೆರೆಗಳನ್ನು ಹಾಕಿಸ್ತಾರೆ.

ಕೆಂಪು, ಹಳದಿ ಪೇಂಟ್‌ನಿಂದ ಅರಿಶಿನ, ಕುಂಕುಮ ಇಡುವಂತೆ ವೃತ್ತಾಕಾರದ ಚುಕ್ಕೆಗಳನ್ನು ಇಡಲಾಗಿರುತ್ತೆ. ಹೀಗೆ ಮಾಡೋದು ಶುದ್ಧ ತಪ್ಪು. ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾದ್ರೆ ಪ್ರತಿನಿತ್ಯ ನೀವೂ ಈ ಆಚರಣೆಯನ್ನು ಪಾಲಿಸೋಕೆ ಆರಂಭಿಸ್ತೀರಾ. ನಿಮಗೆ ಗೊತ್ತಾ? ಮನೆಯ ಬಾಗಿಲು ಆಕರ್ಷಕವಾಗಿದ್ರೆ ಪಾಸಿಟಿವ್ ಎನರ್ಜಿಯು ಹೆಚ್ಚು ಅನುಭವವಾಗುತ್ತೆ. ಮನೆಯ ಮುಂಬಾಗಿಲು ಆಕರ್ಷಕವಾಗಿದ್ರೆ ಮನೆಗೆ ಶುಭವಾಗುತ್ತೆ ಅಂತಾ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆಯ ಮುಂಬಾಗಿಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ. ಹೀಗಾಗೇ ಮನೆಯ ಮುಂದೆ ಹಾಗೂ ಹೊಸ್ತಿಲ ಮೇಲೆ ರಂಗೋಲಿ ಬಿಡೋದು. ಅರಿಶಿನ, ಕುಂಕುಮ ಹಾಕೊದು ಶುಭದ ಸಂಕೇತ. ಹೊಸ್ತಿಲು ಬರಿದಾಗಿದ್ರೆ ಅದು ಅಶುಭ ಎಂಬ ನಂಬಿಕೆ ಇದೆ. ಮನೆಯ ಹೊಸ್ತಿಲು ಸಾಕ್ಷಾತ್ ಮಹಾಲಕ್ಷ್ಮೀ ಸ್ವರೂಪ ಎನ್ನಲಾಗುತ್ತೆ. ಮನೆಯ ಮುಖ್ಯದ್ವಾರದ ಹೊಸ್ತಿಲಲ್ಲಿ ಸಾಕ್ಷಾತ್ ಲಕ್ಷ್ಮೀ ಇರ್ತಾಳೆ. ಇನ್ನು ಹೊಸ್ತಿಲ ಮೇಲ್ಬಾಗದಲ್ಲಿ ಗೌರಿ ನೆಲೆಸಿರ್ತಾಳೆ. ರಂಗೋಲಿ, ಅರಿಶಿನ-ಕುಂಕುಮ ಇಲ್ಲದ ಮನೆಗೆ ದೇವತೆಗಳ ಪ್ರವೇಶಿಸೋದಿಲ್ಲ ಅಂತಾ ನಮ್ಮ ಧರ್ಮಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆ ಬಾಗಿಲಿಗೆ ಏಕೆ ಮಂಗಳದ್ರವ್ಯಗಳನ್ನು ಹಚ್ಚಬೇಕು. ಇದು ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತೆ -ಮನೆಯ ಶುಚಿತ್ವ ಕಾಪಾಡುತ್ತೆ. ಹೊಸ್ತಿಲಲ್ಲಿ ಮಹಾಲಕ್ಷ್ಮೀ ನೆಲೆಸಿರುತ್ತಾಳೆ -ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟುಗಳಿರೋದ್ರಿಂದ ಮನೆಯೊಳಗೆ ಕ್ರಿಮಿಕೀಟಗಳು ಪ್ರವೇಶಿಸಲ್ಲ.

ಕೆಲಸ ಕಾರ್ಯದ ನಿಮಿತ್ತ ಹೊರಗಡೆ ಹೋಗುವವರಿಗೆ ಇದ್ರಿಂದ ಒಳಿತಾಗುತ್ತೆ, ಮನೆಯ ಬಾಗಿಲು ಸುಂದರವಾಗಿ ಕಾಣುತ್ತೆ, – ಮನೆಯವರಲ್ಲಿ ನಕಾರಾತ್ಮಕ ಚಿಂತನೆಗಳು ಬಾರದಂತೆ ತಡೆಯುತ್ತೆ,  ಮನೆಯಲ್ಲಿ ಸದಾ ಪಾಸಿಟಿವ್ ವೈಬ್ರೇಷನ್ ಉಂಟಾಗಲು ಸಹಕಾರಿಯಾಗುತ್ತೆ, ಮನೆಯಲ್ಲಿರುವವರ ಆಯಸ್ಸು ಹೆಚ್ಚುತ್ತೆ,  ಮನೆಯಲ್ಲಿ ಆರೋಗ್ಯ, ನೆಮ್ಮದಿ ನೆಲೆಸುತ್ತದೆ.

ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಮೂಢನಂಬಿಕೆಯಲ್ಲ. ಈ ಆಚರಣೆಯ ಹಿಂದೆ ವೈಜ್ಞಾನಿಕ ಕಾರಣವಿದೆ. ಪುರಾತನ ಕಾಲದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ನಮಗೆ ಆರೋಗ್ಯದ ರಕ್ಷಾ ಕವಚವಿದ್ದಂತೆ. ಇಂತಹ ಆಚರಣೆಗಳ ಬಗ್ಗೆ ಅರಿತು ಆಚರಿಸಿದ್ರೆ ಸುಂದರ, ಸ್ವಾಸ್ಥ್ಯ ಜೀವನ ನಮ್ಮದಾಗುತ್ತದೆ.

(ಕೃಪೆ : ಅಂತರ್ಜಾಲ ) 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

14 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

17 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

18 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

18 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

18 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago