Advertisement
ಧಾರ್ಮಿಕ

#Culture | ಮನೆಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಏಕೆ..? | ಪೈಂಟಿನಿಂದ ಶಾಶ್ವತ ರಂಗೋಲಿ ಹಚ್ಚಿದಿರಿ ಜೋಕೆ…!

Share

ಸೂರ್ಯೋದಯಕ್ಕೂ ಮುನ್ನ ಎದ್ದು ಗೃಹಿಣಿಯರು ಮನೆ ಅಂಗಳದ ಕಸ ಗುಡಿಸಿ, ಹೊಸ್ತಿಲನ್ನು ನೀರಿನಿಂದ ಸ್ವಚ್ಛಗೊಳಿಸಿ ಅರಿಶಿನ, ಕುಂಕುಮ ಹಚ್ಚಿ ಹೂಗಳನ್ನು ಇಡುವುದು  ಹಿಂದೂ ಧರ್ಮದಲ್ಲಿ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಯಾರು ಅಷ್ಟು ಬೇಗ ಎದ್ದು ಇದೆಲ್ಲಾ ಮಾಡ್ತಾರೆ ಅಂತಾ ಶಾಶ್ವತವಾಗಿ ಹೊಸ್ತಿಲಿಗೆ ಹಳದಿ ಪೇಂಟ್ ಬಳಸ್ತಾರೆ. ಅದರ ಮೇಲೆ ಬಿಳಿ ಪೇಂಟ್‌ನಿಂದ ರಂಗೋಲಿ ಗೆರೆಗಳನ್ನು ಹಾಕಿಸ್ತಾರೆ.

ಕೆಂಪು, ಹಳದಿ ಪೇಂಟ್‌ನಿಂದ ಅರಿಶಿನ, ಕುಂಕುಮ ಇಡುವಂತೆ ವೃತ್ತಾಕಾರದ ಚುಕ್ಕೆಗಳನ್ನು ಇಡಲಾಗಿರುತ್ತೆ. ಹೀಗೆ ಮಾಡೋದು ಶುದ್ಧ ತಪ್ಪು. ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾದ್ರೆ ಪ್ರತಿನಿತ್ಯ ನೀವೂ ಈ ಆಚರಣೆಯನ್ನು ಪಾಲಿಸೋಕೆ ಆರಂಭಿಸ್ತೀರಾ. ನಿಮಗೆ ಗೊತ್ತಾ? ಮನೆಯ ಬಾಗಿಲು ಆಕರ್ಷಕವಾಗಿದ್ರೆ ಪಾಸಿಟಿವ್ ಎನರ್ಜಿಯು ಹೆಚ್ಚು ಅನುಭವವಾಗುತ್ತೆ. ಮನೆಯ ಮುಂಬಾಗಿಲು ಆಕರ್ಷಕವಾಗಿದ್ರೆ ಮನೆಗೆ ಶುಭವಾಗುತ್ತೆ ಅಂತಾ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆಯ ಮುಂಬಾಗಿಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ. ಹೀಗಾಗೇ ಮನೆಯ ಮುಂದೆ ಹಾಗೂ ಹೊಸ್ತಿಲ ಮೇಲೆ ರಂಗೋಲಿ ಬಿಡೋದು. ಅರಿಶಿನ, ಕುಂಕುಮ ಹಾಕೊದು ಶುಭದ ಸಂಕೇತ. ಹೊಸ್ತಿಲು ಬರಿದಾಗಿದ್ರೆ ಅದು ಅಶುಭ ಎಂಬ ನಂಬಿಕೆ ಇದೆ. ಮನೆಯ ಹೊಸ್ತಿಲು ಸಾಕ್ಷಾತ್ ಮಹಾಲಕ್ಷ್ಮೀ ಸ್ವರೂಪ ಎನ್ನಲಾಗುತ್ತೆ. ಮನೆಯ ಮುಖ್ಯದ್ವಾರದ ಹೊಸ್ತಿಲಲ್ಲಿ ಸಾಕ್ಷಾತ್ ಲಕ್ಷ್ಮೀ ಇರ್ತಾಳೆ. ಇನ್ನು ಹೊಸ್ತಿಲ ಮೇಲ್ಬಾಗದಲ್ಲಿ ಗೌರಿ ನೆಲೆಸಿರ್ತಾಳೆ. ರಂಗೋಲಿ, ಅರಿಶಿನ-ಕುಂಕುಮ ಇಲ್ಲದ ಮನೆಗೆ ದೇವತೆಗಳ ಪ್ರವೇಶಿಸೋದಿಲ್ಲ ಅಂತಾ ನಮ್ಮ ಧರ್ಮಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆ ಬಾಗಿಲಿಗೆ ಏಕೆ ಮಂಗಳದ್ರವ್ಯಗಳನ್ನು ಹಚ್ಚಬೇಕು. ಇದು ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತೆ -ಮನೆಯ ಶುಚಿತ್ವ ಕಾಪಾಡುತ್ತೆ. ಹೊಸ್ತಿಲಲ್ಲಿ ಮಹಾಲಕ್ಷ್ಮೀ ನೆಲೆಸಿರುತ್ತಾಳೆ -ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟುಗಳಿರೋದ್ರಿಂದ ಮನೆಯೊಳಗೆ ಕ್ರಿಮಿಕೀಟಗಳು ಪ್ರವೇಶಿಸಲ್ಲ.

ಕೆಲಸ ಕಾರ್ಯದ ನಿಮಿತ್ತ ಹೊರಗಡೆ ಹೋಗುವವರಿಗೆ ಇದ್ರಿಂದ ಒಳಿತಾಗುತ್ತೆ, ಮನೆಯ ಬಾಗಿಲು ಸುಂದರವಾಗಿ ಕಾಣುತ್ತೆ, – ಮನೆಯವರಲ್ಲಿ ನಕಾರಾತ್ಮಕ ಚಿಂತನೆಗಳು ಬಾರದಂತೆ ತಡೆಯುತ್ತೆ,  ಮನೆಯಲ್ಲಿ ಸದಾ ಪಾಸಿಟಿವ್ ವೈಬ್ರೇಷನ್ ಉಂಟಾಗಲು ಸಹಕಾರಿಯಾಗುತ್ತೆ, ಮನೆಯಲ್ಲಿರುವವರ ಆಯಸ್ಸು ಹೆಚ್ಚುತ್ತೆ,  ಮನೆಯಲ್ಲಿ ಆರೋಗ್ಯ, ನೆಮ್ಮದಿ ನೆಲೆಸುತ್ತದೆ.

ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಮೂಢನಂಬಿಕೆಯಲ್ಲ. ಈ ಆಚರಣೆಯ ಹಿಂದೆ ವೈಜ್ಞಾನಿಕ ಕಾರಣವಿದೆ. ಪುರಾತನ ಕಾಲದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ನಮಗೆ ಆರೋಗ್ಯದ ರಕ್ಷಾ ಕವಚವಿದ್ದಂತೆ. ಇಂತಹ ಆಚರಣೆಗಳ ಬಗ್ಗೆ ಅರಿತು ಆಚರಿಸಿದ್ರೆ ಸುಂದರ, ಸ್ವಾಸ್ಥ್ಯ ಜೀವನ ನಮ್ಮದಾಗುತ್ತದೆ.

(ಕೃಪೆ : ಅಂತರ್ಜಾಲ ) 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

13 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

17 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

23 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago