Advertisement
ಧಾರ್ಮಿಕ

#Culture | ಮನೆಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಏಕೆ..? | ಪೈಂಟಿನಿಂದ ಶಾಶ್ವತ ರಂಗೋಲಿ ಹಚ್ಚಿದಿರಿ ಜೋಕೆ…!

Share

ಸೂರ್ಯೋದಯಕ್ಕೂ ಮುನ್ನ ಎದ್ದು ಗೃಹಿಣಿಯರು ಮನೆ ಅಂಗಳದ ಕಸ ಗುಡಿಸಿ, ಹೊಸ್ತಿಲನ್ನು ನೀರಿನಿಂದ ಸ್ವಚ್ಛಗೊಳಿಸಿ ಅರಿಶಿನ, ಕುಂಕುಮ ಹಚ್ಚಿ ಹೂಗಳನ್ನು ಇಡುವುದು  ಹಿಂದೂ ಧರ್ಮದಲ್ಲಿ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಯಾರು ಅಷ್ಟು ಬೇಗ ಎದ್ದು ಇದೆಲ್ಲಾ ಮಾಡ್ತಾರೆ ಅಂತಾ ಶಾಶ್ವತವಾಗಿ ಹೊಸ್ತಿಲಿಗೆ ಹಳದಿ ಪೇಂಟ್ ಬಳಸ್ತಾರೆ. ಅದರ ಮೇಲೆ ಬಿಳಿ ಪೇಂಟ್‌ನಿಂದ ರಂಗೋಲಿ ಗೆರೆಗಳನ್ನು ಹಾಕಿಸ್ತಾರೆ.

ಕೆಂಪು, ಹಳದಿ ಪೇಂಟ್‌ನಿಂದ ಅರಿಶಿನ, ಕುಂಕುಮ ಇಡುವಂತೆ ವೃತ್ತಾಕಾರದ ಚುಕ್ಕೆಗಳನ್ನು ಇಡಲಾಗಿರುತ್ತೆ. ಹೀಗೆ ಮಾಡೋದು ಶುದ್ಧ ತಪ್ಪು. ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾದ್ರೆ ಪ್ರತಿನಿತ್ಯ ನೀವೂ ಈ ಆಚರಣೆಯನ್ನು ಪಾಲಿಸೋಕೆ ಆರಂಭಿಸ್ತೀರಾ. ನಿಮಗೆ ಗೊತ್ತಾ? ಮನೆಯ ಬಾಗಿಲು ಆಕರ್ಷಕವಾಗಿದ್ರೆ ಪಾಸಿಟಿವ್ ಎನರ್ಜಿಯು ಹೆಚ್ಚು ಅನುಭವವಾಗುತ್ತೆ. ಮನೆಯ ಮುಂಬಾಗಿಲು ಆಕರ್ಷಕವಾಗಿದ್ರೆ ಮನೆಗೆ ಶುಭವಾಗುತ್ತೆ ಅಂತಾ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆಯ ಮುಂಬಾಗಿಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ. ಹೀಗಾಗೇ ಮನೆಯ ಮುಂದೆ ಹಾಗೂ ಹೊಸ್ತಿಲ ಮೇಲೆ ರಂಗೋಲಿ ಬಿಡೋದು. ಅರಿಶಿನ, ಕುಂಕುಮ ಹಾಕೊದು ಶುಭದ ಸಂಕೇತ. ಹೊಸ್ತಿಲು ಬರಿದಾಗಿದ್ರೆ ಅದು ಅಶುಭ ಎಂಬ ನಂಬಿಕೆ ಇದೆ. ಮನೆಯ ಹೊಸ್ತಿಲು ಸಾಕ್ಷಾತ್ ಮಹಾಲಕ್ಷ್ಮೀ ಸ್ವರೂಪ ಎನ್ನಲಾಗುತ್ತೆ. ಮನೆಯ ಮುಖ್ಯದ್ವಾರದ ಹೊಸ್ತಿಲಲ್ಲಿ ಸಾಕ್ಷಾತ್ ಲಕ್ಷ್ಮೀ ಇರ್ತಾಳೆ. ಇನ್ನು ಹೊಸ್ತಿಲ ಮೇಲ್ಬಾಗದಲ್ಲಿ ಗೌರಿ ನೆಲೆಸಿರ್ತಾಳೆ. ರಂಗೋಲಿ, ಅರಿಶಿನ-ಕುಂಕುಮ ಇಲ್ಲದ ಮನೆಗೆ ದೇವತೆಗಳ ಪ್ರವೇಶಿಸೋದಿಲ್ಲ ಅಂತಾ ನಮ್ಮ ಧರ್ಮಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆ ಬಾಗಿಲಿಗೆ ಏಕೆ ಮಂಗಳದ್ರವ್ಯಗಳನ್ನು ಹಚ್ಚಬೇಕು. ಇದು ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತೆ -ಮನೆಯ ಶುಚಿತ್ವ ಕಾಪಾಡುತ್ತೆ. ಹೊಸ್ತಿಲಲ್ಲಿ ಮಹಾಲಕ್ಷ್ಮೀ ನೆಲೆಸಿರುತ್ತಾಳೆ -ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟುಗಳಿರೋದ್ರಿಂದ ಮನೆಯೊಳಗೆ ಕ್ರಿಮಿಕೀಟಗಳು ಪ್ರವೇಶಿಸಲ್ಲ.

ಕೆಲಸ ಕಾರ್ಯದ ನಿಮಿತ್ತ ಹೊರಗಡೆ ಹೋಗುವವರಿಗೆ ಇದ್ರಿಂದ ಒಳಿತಾಗುತ್ತೆ, ಮನೆಯ ಬಾಗಿಲು ಸುಂದರವಾಗಿ ಕಾಣುತ್ತೆ, – ಮನೆಯವರಲ್ಲಿ ನಕಾರಾತ್ಮಕ ಚಿಂತನೆಗಳು ಬಾರದಂತೆ ತಡೆಯುತ್ತೆ,  ಮನೆಯಲ್ಲಿ ಸದಾ ಪಾಸಿಟಿವ್ ವೈಬ್ರೇಷನ್ ಉಂಟಾಗಲು ಸಹಕಾರಿಯಾಗುತ್ತೆ, ಮನೆಯಲ್ಲಿರುವವರ ಆಯಸ್ಸು ಹೆಚ್ಚುತ್ತೆ,  ಮನೆಯಲ್ಲಿ ಆರೋಗ್ಯ, ನೆಮ್ಮದಿ ನೆಲೆಸುತ್ತದೆ.

ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಮೂಢನಂಬಿಕೆಯಲ್ಲ. ಈ ಆಚರಣೆಯ ಹಿಂದೆ ವೈಜ್ಞಾನಿಕ ಕಾರಣವಿದೆ. ಪುರಾತನ ಕಾಲದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ನಮಗೆ ಆರೋಗ್ಯದ ರಕ್ಷಾ ಕವಚವಿದ್ದಂತೆ. ಇಂತಹ ಆಚರಣೆಗಳ ಬಗ್ಗೆ ಅರಿತು ಆಚರಿಸಿದ್ರೆ ಸುಂದರ, ಸ್ವಾಸ್ಥ್ಯ ಜೀವನ ನಮ್ಮದಾಗುತ್ತದೆ.

(ಕೃಪೆ : ಅಂತರ್ಜಾಲ ) 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

15 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

16 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago