Advertisement
ಧಾರ್ಮಿಕ

#Culture | ಮನೆಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಏಕೆ..? | ಪೈಂಟಿನಿಂದ ಶಾಶ್ವತ ರಂಗೋಲಿ ಹಚ್ಚಿದಿರಿ ಜೋಕೆ…!

Share

ಸೂರ್ಯೋದಯಕ್ಕೂ ಮುನ್ನ ಎದ್ದು ಗೃಹಿಣಿಯರು ಮನೆ ಅಂಗಳದ ಕಸ ಗುಡಿಸಿ, ಹೊಸ್ತಿಲನ್ನು ನೀರಿನಿಂದ ಸ್ವಚ್ಛಗೊಳಿಸಿ ಅರಿಶಿನ, ಕುಂಕುಮ ಹಚ್ಚಿ ಹೂಗಳನ್ನು ಇಡುವುದು  ಹಿಂದೂ ಧರ್ಮದಲ್ಲಿ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಯಾರು ಅಷ್ಟು ಬೇಗ ಎದ್ದು ಇದೆಲ್ಲಾ ಮಾಡ್ತಾರೆ ಅಂತಾ ಶಾಶ್ವತವಾಗಿ ಹೊಸ್ತಿಲಿಗೆ ಹಳದಿ ಪೇಂಟ್ ಬಳಸ್ತಾರೆ. ಅದರ ಮೇಲೆ ಬಿಳಿ ಪೇಂಟ್‌ನಿಂದ ರಂಗೋಲಿ ಗೆರೆಗಳನ್ನು ಹಾಕಿಸ್ತಾರೆ.

ಕೆಂಪು, ಹಳದಿ ಪೇಂಟ್‌ನಿಂದ ಅರಿಶಿನ, ಕುಂಕುಮ ಇಡುವಂತೆ ವೃತ್ತಾಕಾರದ ಚುಕ್ಕೆಗಳನ್ನು ಇಡಲಾಗಿರುತ್ತೆ. ಹೀಗೆ ಮಾಡೋದು ಶುದ್ಧ ತಪ್ಪು. ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾದ್ರೆ ಪ್ರತಿನಿತ್ಯ ನೀವೂ ಈ ಆಚರಣೆಯನ್ನು ಪಾಲಿಸೋಕೆ ಆರಂಭಿಸ್ತೀರಾ. ನಿಮಗೆ ಗೊತ್ತಾ? ಮನೆಯ ಬಾಗಿಲು ಆಕರ್ಷಕವಾಗಿದ್ರೆ ಪಾಸಿಟಿವ್ ಎನರ್ಜಿಯು ಹೆಚ್ಚು ಅನುಭವವಾಗುತ್ತೆ. ಮನೆಯ ಮುಂಬಾಗಿಲು ಆಕರ್ಷಕವಾಗಿದ್ರೆ ಮನೆಗೆ ಶುಭವಾಗುತ್ತೆ ಅಂತಾ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆಯ ಮುಂಬಾಗಿಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ. ಹೀಗಾಗೇ ಮನೆಯ ಮುಂದೆ ಹಾಗೂ ಹೊಸ್ತಿಲ ಮೇಲೆ ರಂಗೋಲಿ ಬಿಡೋದು. ಅರಿಶಿನ, ಕುಂಕುಮ ಹಾಕೊದು ಶುಭದ ಸಂಕೇತ. ಹೊಸ್ತಿಲು ಬರಿದಾಗಿದ್ರೆ ಅದು ಅಶುಭ ಎಂಬ ನಂಬಿಕೆ ಇದೆ. ಮನೆಯ ಹೊಸ್ತಿಲು ಸಾಕ್ಷಾತ್ ಮಹಾಲಕ್ಷ್ಮೀ ಸ್ವರೂಪ ಎನ್ನಲಾಗುತ್ತೆ. ಮನೆಯ ಮುಖ್ಯದ್ವಾರದ ಹೊಸ್ತಿಲಲ್ಲಿ ಸಾಕ್ಷಾತ್ ಲಕ್ಷ್ಮೀ ಇರ್ತಾಳೆ. ಇನ್ನು ಹೊಸ್ತಿಲ ಮೇಲ್ಬಾಗದಲ್ಲಿ ಗೌರಿ ನೆಲೆಸಿರ್ತಾಳೆ. ರಂಗೋಲಿ, ಅರಿಶಿನ-ಕುಂಕುಮ ಇಲ್ಲದ ಮನೆಗೆ ದೇವತೆಗಳ ಪ್ರವೇಶಿಸೋದಿಲ್ಲ ಅಂತಾ ನಮ್ಮ ಧರ್ಮಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಮನೆ ಬಾಗಿಲಿಗೆ ಏಕೆ ಮಂಗಳದ್ರವ್ಯಗಳನ್ನು ಹಚ್ಚಬೇಕು. ಇದು ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತೆ -ಮನೆಯ ಶುಚಿತ್ವ ಕಾಪಾಡುತ್ತೆ. ಹೊಸ್ತಿಲಲ್ಲಿ ಮಹಾಲಕ್ಷ್ಮೀ ನೆಲೆಸಿರುತ್ತಾಳೆ -ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟುಗಳಿರೋದ್ರಿಂದ ಮನೆಯೊಳಗೆ ಕ್ರಿಮಿಕೀಟಗಳು ಪ್ರವೇಶಿಸಲ್ಲ.

ಕೆಲಸ ಕಾರ್ಯದ ನಿಮಿತ್ತ ಹೊರಗಡೆ ಹೋಗುವವರಿಗೆ ಇದ್ರಿಂದ ಒಳಿತಾಗುತ್ತೆ, ಮನೆಯ ಬಾಗಿಲು ಸುಂದರವಾಗಿ ಕಾಣುತ್ತೆ, – ಮನೆಯವರಲ್ಲಿ ನಕಾರಾತ್ಮಕ ಚಿಂತನೆಗಳು ಬಾರದಂತೆ ತಡೆಯುತ್ತೆ,  ಮನೆಯಲ್ಲಿ ಸದಾ ಪಾಸಿಟಿವ್ ವೈಬ್ರೇಷನ್ ಉಂಟಾಗಲು ಸಹಕಾರಿಯಾಗುತ್ತೆ, ಮನೆಯಲ್ಲಿರುವವರ ಆಯಸ್ಸು ಹೆಚ್ಚುತ್ತೆ,  ಮನೆಯಲ್ಲಿ ಆರೋಗ್ಯ, ನೆಮ್ಮದಿ ನೆಲೆಸುತ್ತದೆ.

ಮನೆ ಬಾಗಿಲಿಗೆ ಅರಿಶಿನ, ಕುಂಕುಮ ಹಚ್ಚುವುದು ಮೂಢನಂಬಿಕೆಯಲ್ಲ. ಈ ಆಚರಣೆಯ ಹಿಂದೆ ವೈಜ್ಞಾನಿಕ ಕಾರಣವಿದೆ. ಪುರಾತನ ಕಾಲದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ನಮಗೆ ಆರೋಗ್ಯದ ರಕ್ಷಾ ಕವಚವಿದ್ದಂತೆ. ಇಂತಹ ಆಚರಣೆಗಳ ಬಗ್ಗೆ ಅರಿತು ಆಚರಿಸಿದ್ರೆ ಸುಂದರ, ಸ್ವಾಸ್ಥ್ಯ ಜೀವನ ನಮ್ಮದಾಗುತ್ತದೆ.

(ಕೃಪೆ : ಅಂತರ್ಜಾಲ ) 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

9 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago