The Rural Mirror ಫಾಲೋಅಪ್

ಮಲೆನಾಡು ತಪ್ಪಲಲ್ಲಿ ಮೇಘಸ್ಫೋಟ- ಭಾರೀ ಮಳೆ ಯಾಕಿರಬಹುದು ?| ವಾಯವ್ಯ ಮೋಡಗಳು ಏನು ಮಾಡುತ್ತವೆ…? | ಮೋಡಗಳ ವಿಸ್ತರಣೆಗೆ ಅವಕಾಶ ಏಕಿಲ್ಲ…? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಲೆನಾಡು ತಪ್ಪಲು ಪ್ರದೇಶದಲ್ಲಿ ಭಾರೀ ಮಳೆ. ಮೇಘಸ್ಫೋಟ-ಭಾರೀ ಮಳೆ.ಈ ಕಾರಣದಿಂದ ಭೂಕುಸಿತ. ಇದೆಲ್ಲಾ ಒಂದಕ್ಕೊಂದು ಲಿಂಕ್‌ ಆಗುತ್ತಿವೆ. ಇದಕ್ಕೂ ಮೊದಲು ಭೂಕಂಪನ. ಒಟ್ಟಾರೆ ತಪ್ಪಲು ಪ್ರದೇಶ ಜನರಿಗೆ ಭಯ. ಹಾಗಿದ್ದರೆ ಏನು ಕಾರಣ? ಮೋಡಗಳ ಚಲನೆ ಏನು ? ಈ ಬಗ್ಗೆ ಹವಾಮಾನ ವೀಕ್ಷಣೆ ಮಾಡುವ ಹಾಗೂ ವಿಶ್ಲೇಷಣೆ ಮಾಡುವ ಕೃಷಿಕರುಗಳಾ ಸಾಯಿಶೇಖರ್‌ ಕರಿಕಳ ಹಾಗೂ ರಘುರಾಮ ಕಂಪದಕೋಡಿ ಹೀಗೆ ಅಂದಾಜಿಸಿದ್ದಾರೆ….

ಈ ಸಲ ನೈರುತ್ಯ ಮುಂಗಾರು ಅಂತ ಹೆಸರು ಮಾತ್ರ. ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಬೆರಳೆಣಿಕೆಯಷ್ಟು ದಿನಗಳಲ್ಲಿ ಮಾತ್ರ ಮೋಡ ನೈರುತ್ಯದಿಂದ ಈಶಾನ್ಯಕ್ಕೆ ಸಂಚರಿಸಿದೆ. ಹೆಚ್ಚಿನ ದಿನಗಳಲ್ಲಿ ವಾಯವ್ಯದಿಂದ ಆಗ್ನೇಯಕ್ಕೆ ಚಲಿಸಿದೆ.ಈಗಿನ  ಪರಿಸ್ಥಿತಿಗೆ ಈ ವೈಪರೀತ್ಯ ಕಾರಣ ಇರಬಹುದಾದರೂ, ವಾಯವ್ಯ ಮೋಡಗಳಿಂದ ನಿರೀಕ್ಷೆಗಿಂತ ಕಡಿಮೆ ಮಳೆಯಾಗುತ್ತಿದೆ. ಈ ಮೋಡಗಳು ಘಟ್ಟದ ತಪ್ಪಲ ಭಾಗಕ್ಕೆ ತಲುಪಿದಾಗ ಒತ್ತಡ ಹೆಚ್ಚಾಗಿ ಮಳೆಯಾಗುತ್ತಿದೆ. ಸುರಿಯುತ್ತಿದೆ.

Advertisement

ಮೊದಲು ಮುಂಗಾರು ದುರ್ಬಲಗೊಂಡಾಗ ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸುತ್ತಿತ್ತು. ಆಗ ಸಾಮಾನ್ಯವಾಗಿ ಮಡಿಕೇರಿಯಿಂದ ಧರ್ಮಸ್ಥಳದ ತನಕ ವಿಶಾಲತೆ ಸಿಕುತ್ತಿತ್ತು. ಪೂರ್ವದಲ್ಲಿ ಶೇಖರಣೆಗೊಂಡ ಮೋಡಗಳ ಒತ್ತಡದಿಂದ ಗಾಳಿ ಬೀಸುತ್ತಿತ್ತು. ಮೋಡಗಳು ಚದುರಿ ಮಳೆ ಹಂಚಿಕೆಯಾಗುತ್ತಿತ್ತು. ವಾಯವ್ಯ ಮೋಡಗಳಿಗೆ ವಿಸ್ತರಣೆಗೆ ಅವಕಾಶ ಕಡಿಮೆಯಾದಂತಿದೆ. ಇನ್ನು ಮುಂದೆ ಸರಿಯಾಗಲಿ ಎಂದು ನಂಬೋಣ.

ಇದರ ಜೊತೆಗೆ  ಶಿರಾಡಿ ಘಾಟಿಯ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಬೃಹತ್ ಯೋಜನೆಗಳ ಫಲವಾಗಿ ಅರಣ್ಯ ಕಡಿಮೆಯಾಗಿದೆ. ಉಷ್ಣಾಂಶ ಏರಿಕೆಯಿಂದ ಬಿಸಿ ಗಾಳಿಯ ಜೊತೆಗೆ ಮೋಡಗಳು ತಂಪಾದ ಅರಣ್ಯದ ಕಡೆಗೆ ಸೆಳೆಯಲ್ಪಡುತ್ತಿದೆ. ಅಂದರೆ ಹರಿಹರ, ಕೊಲ್ಲಮೊಗ್ರ, ಸಂಪಾಜೆ, ಮಡಿಕೇರಿ ಬೆಟ್ಟದ ಸಾಲುಗಳ ಕಡೆಗೆ. ಹೀಗಾದಾಗ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸಿದೆಂತೆ ಭಾಸವಾಗುತ್ತದೆ. ಮೋಡಗಳ ವಿಸ್ತರಣೆಗೆ ಅವಕಾಶವಿಲ್ಲದ್ದರಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮೇಘಸ್ಪೋಟದಂತಹ ಮಳೆಗೆ ಕಾರಣವಾಗುವಾಗಿರಬಹುದು. ಇದು ಈಗಿನ ಸ್ಥಿತಿಗೆ ಕಾರಣವಿರಲೂಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

4 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

7 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

13 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

13 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

14 hours ago