Rural Mirror - ಅತಿಥಿ

ದಕ್ಷಿಣ ಕನ್ನಡ ಬುದ್ದಿವಂತರ ಜಿಲ್ಲೆ ಯಾಕಾಯ್ತು..? ಯಾಕಾಗಿತ್ತು…? ಈಗ ಹೇಗಿದೆ..? | ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಅವರ ಜೊತೆ ಮಾತುಕತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಗ ಚುನಾವಣೆಯ ಕಾಲ. ಚುನಾವಣೆಯ ಕಾವು ಏರುತ್ತಿದೆ. ಇಂತಹ ಚುನಾವಣಾ ಪ್ರಕ್ಷುಬ್ದ ಸ್ಥಿತಿಯಲ್ಲಿ ಈ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರ ಜೊತೆ ಮಾತನಾಡಿದಾಗ, ಅವರು ಹೀಗೆ ಹೇಳುತ್ತಾರೆ….

Advertisement
Advertisement
ದಕ್ಷಿಣ ಕನ್ನಡ ಹಾಗೂ ಉಡುಪಿ ಸಂಯೋಜಿತವಾದ ಜಿಲ್ಲೆಗಳ ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ ,ಪರಿಸರದ ಬಗ್ಗೆ ಕಂಡವನು ನಾನು. ಸಾಹಿತ್ಯಿಕವಾಗಿ ಗೋವಿಂದ ಪೈ ,ಅಡಿಗರಿಂದ ತೊಡಗಿ ತೋಳ್ಪಾಡಿವರೆಗಿನ  ಎಲ್ಲಾ ಸಾಂಸ್ಕೃತಿಕ ವ್ಯಕ್ತಿಗಳನ್ನು ಕಂಡವರಲ್ಲಿ ನಾನೂ ಒಬ್ಬ. ಎಲ್ಲರಲ್ಲೂ ಸಾಮಾಜಿಕ ಕಾಳಜಿಯೂ ಇತ್ತು. ಶಿವರಾಮ ಕಾರಂತ, ಕಾರ್ನಾಡ್ ಸದಾಶಿವ ರಾವ್‌, ಕುದ್ಮಲ್ ರಂಗರಾವ್‌, ಶ್ರೀನಿವಾಸ ಮಲ್ಯ, ಕೆ ಎಸ್‌ ಹೆಗ್ಡೆ ಮೊದಲಾದವರು ಕರ್ನಾಟಕಕ್ಕೆ ಸಾಂಸ್ಕೃತಿಕ, ಭೌಗೋಳಿಕ ಎಚ್ಚರವನ್ನು ತಂದುಕೊಟ್ಟವರು, ಬೆಳೆಸಲು ಕಾರಣರಾದವರು. ಅದಕ್ಕೆ ಸಾಹಿತ್ಯಿಕ  ಬೆಂಬಲವೂ ಇತ್ತು. ಡಾ.ಶಿವರಾಮ ಕಾರಂತರು ಪರಿಸರ ಪರವಾಗಿದ್ದವರು, ಹೋರಾಡಿದವರು, ಚುನಾವಣೆಗೂ ಸ್ಫರ್ಧಿಸಿದವರು.

ಸುಬ್ರಾಯ ಚೊಕ್ಕಾಡಿ
ದ ಕ ಜಿಲ್ಲೆಗೆ ಸಾಂಸ್ಕೃತಿಕ ಎಚ್ಚರ ತಂದವರು, ತಂದುಕೊಟ್ಟವರನ್ನು ಬಹಳ ಮುಖ್ಯವಾಗಿ ಗಮನಿಸಬೇಕು. ಇಂದು ದ ಕ ಜಿಲ್ಲೆಗೆ ಇವರೆಲ್ಲಾ ಏನು ಮಾಡಿದ್ದಾರೆ ಎಂದು ಕೇಳವವರೇ ಹೆಚ್ಚಾಗಿದ್ದಾರೆ. ಶ್ರೀನಿವಾಸ ಮಲ್ಯ, ಕೆ ಎಸ್‌ ಹೆಗಡೆ ಅವರು , ಕೆಎಸ್‌ ರಾವ್‌ ಅವರದೆಲ್ಲಾ ಕೊಡುಗೆ ಅಪಾರ. ಈಗ ಅವರೇನು ಮಾಡಿದ್ದಾರೆ ಎಂದು ಕೇಳವ ಹಾಗೆ ಆಗಬಾರದು.  ದ ಕ ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂದು ಹೆಸರುವಾಸಿಯಾಗಲು ಇಂತಹವರು ಕೂಡಾ ಪ್ರಮುಖ ಕಾರಣ. ಅವರ ಹಿಂದೆ ಆಳವಾದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಅಭಿವೃದ್ಧಿಯ ಕಾಳಜಿ ಇತ್ತು. ಶ್ರೀಮಂತವಾದ  ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದ ಪ್ರದೇಶ ಇದು.
ಇದು ನಿಧಾನಕ್ಕೆ ಕಡಿಮೆಯಾಗಿ ಬಂತು. ಅಡಿಗರ ನಂತರ ಸಾಹಿತ್ಯಿಕವಾಗಿ ಅಂತಹ ದೊಡ್ಡವರು ಬೆಳೆದಿಲ್ಲ. ಈಗ ಹೊಸತಲೆಮಾರಿನ ಜನ ಇಲ್ಲದ ಹಾಗಿದೆ. ರಾಜಕೀಯವಾಗಿಯೂ  ಜನರು ಇಲ್ಲ. 5 ವರ್ಷದ ನಂತರ ಮರೆತೇ ಹೋಗುತ್ತದೆ. ಶಾಸಕರುಗಳೂ ಹಾಗೇ, ಬಹಳ ಸರಳವಾಗಿ ಇದ್ದವರು. ಮೊದಲಿನ ಶಾಸಕ ವೆಂಕಟ್ರಮಣ ಗೌಡ ಅವರೂ ಹಾಗೆ ಬಹಳ ಸರಳವಾಗಿ ಬದುಕಿದವರು. ಬಹಳ ಕೆಲಸ ಮಾಡಿದವರು, ಇಂದು ಸಣ್ಣ ಮೋರಿ ಮಾಡಿದವರು ಹೆಸರೂ ನೆನಪಿರುತ್ತದೆ, ಅಂದು ಮಾಡಿರುವ ದೊಡ್ಡ ಕೆಲಸಗಳು ಎಷ್ಟು..?
ಇಂದು ಏನಾಗಿದೆ ಎಂದರೆ, ಸೌಹಾರ್ದವಾಗಿ ಬಾಳಿದ ಜನರು , ದಕ ಜಿಲ್ಲೆಯ ಜನರು ಇಂದು ಈ ಸೌಹಾರ್ದತೆಯನ್ನು ಕಳೆದುಕೊಂಡಿದೆ. ಈಗ ಗಲಭೆಗಳು ನಡೆಯುತ್ತದೆ, ಬಹಳ ಕುಬ್ಜ ವ್ಯಕ್ತಿತ್ವದ ರಾಜಕೀಯ ವ್ಯಕ್ತಿಗಳು ಬರುತ್ತಿದ್ದಾರೆ. ಇದು ಬಹಳ ಬೇಸರವಾಗುತ್ತದೆ. ಆದರೆ ಹೇಳುವ ಹಾಗೆ ಇಲ್ಲ, ಹೀಗೆ ಹೇಳಿದರೆ ಬೇರೆ ಬೇರೆ ರೀತಿಯ ಆಕ್ರಮಣಗಳು ನಡೆಯುತ್ತದೆ. ಇದಕ್ಕಾಗಿ ಈಗ ಮೌನವೇ ಹೆಚ್ಚು ಮತ್ತು ಈ ಉಸಾಬರಿಗಳು ನಮಗ್ಯಾಕೆ ಎಂದು ಅನಿಸಿ, ಕತೆ-ಕವಿತೆಯೇ ಹೆಚ್ಚು ಮುಖ್ಯ ಅಂತ ಅನಿಸಿ ಅದರಲ್ಲೇ ತಲ್ಲೀನತೆಯಲ್ಲಿದ್ದೇನೆ ಎನ್ನುತ್ತಾರೆ ಸುಬ್ರಾಯ ಚೊಕ್ಕಾಡಿ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

6 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

7 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

9 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

10 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago