Advertisement
Rural Mirror - ಅತಿಥಿ

ದಕ್ಷಿಣ ಕನ್ನಡ ಬುದ್ದಿವಂತರ ಜಿಲ್ಲೆ ಯಾಕಾಯ್ತು..? ಯಾಕಾಗಿತ್ತು…? ಈಗ ಹೇಗಿದೆ..? | ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಅವರ ಜೊತೆ ಮಾತುಕತೆ |

Share

ಈಗ ಚುನಾವಣೆಯ ಕಾಲ. ಚುನಾವಣೆಯ ಕಾವು ಏರುತ್ತಿದೆ. ಇಂತಹ ಚುನಾವಣಾ ಪ್ರಕ್ಷುಬ್ದ ಸ್ಥಿತಿಯಲ್ಲಿ ಈ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರ ಜೊತೆ ಮಾತನಾಡಿದಾಗ, ಅವರು ಹೀಗೆ ಹೇಳುತ್ತಾರೆ….

ದಕ್ಷಿಣ ಕನ್ನಡ ಹಾಗೂ ಉಡುಪಿ ಸಂಯೋಜಿತವಾದ ಜಿಲ್ಲೆಗಳ ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ ,ಪರಿಸರದ ಬಗ್ಗೆ ಕಂಡವನು ನಾನು. ಸಾಹಿತ್ಯಿಕವಾಗಿ ಗೋವಿಂದ ಪೈ ,ಅಡಿಗರಿಂದ ತೊಡಗಿ ತೋಳ್ಪಾಡಿವರೆಗಿನ  ಎಲ್ಲಾ ಸಾಂಸ್ಕೃತಿಕ ವ್ಯಕ್ತಿಗಳನ್ನು ಕಂಡವರಲ್ಲಿ ನಾನೂ ಒಬ್ಬ. ಎಲ್ಲರಲ್ಲೂ ಸಾಮಾಜಿಕ ಕಾಳಜಿಯೂ ಇತ್ತು. ಶಿವರಾಮ ಕಾರಂತ, ಕಾರ್ನಾಡ್ ಸದಾಶಿವ ರಾವ್‌, ಕುದ್ಮಲ್ ರಂಗರಾವ್‌, ಶ್ರೀನಿವಾಸ ಮಲ್ಯ, ಕೆ ಎಸ್‌ ಹೆಗ್ಡೆ ಮೊದಲಾದವರು ಕರ್ನಾಟಕಕ್ಕೆ ಸಾಂಸ್ಕೃತಿಕ, ಭೌಗೋಳಿಕ ಎಚ್ಚರವನ್ನು ತಂದುಕೊಟ್ಟವರು, ಬೆಳೆಸಲು ಕಾರಣರಾದವರು. ಅದಕ್ಕೆ ಸಾಹಿತ್ಯಿಕ  ಬೆಂಬಲವೂ ಇತ್ತು. ಡಾ.ಶಿವರಾಮ ಕಾರಂತರು ಪರಿಸರ ಪರವಾಗಿದ್ದವರು, ಹೋರಾಡಿದವರು, ಚುನಾವಣೆಗೂ ಸ್ಫರ್ಧಿಸಿದವರು.

ಸುಬ್ರಾಯ ಚೊಕ್ಕಾಡಿ
ದ ಕ ಜಿಲ್ಲೆಗೆ ಸಾಂಸ್ಕೃತಿಕ ಎಚ್ಚರ ತಂದವರು, ತಂದುಕೊಟ್ಟವರನ್ನು ಬಹಳ ಮುಖ್ಯವಾಗಿ ಗಮನಿಸಬೇಕು. ಇಂದು ದ ಕ ಜಿಲ್ಲೆಗೆ ಇವರೆಲ್ಲಾ ಏನು ಮಾಡಿದ್ದಾರೆ ಎಂದು ಕೇಳವವರೇ ಹೆಚ್ಚಾಗಿದ್ದಾರೆ. ಶ್ರೀನಿವಾಸ ಮಲ್ಯ, ಕೆ ಎಸ್‌ ಹೆಗಡೆ ಅವರು , ಕೆಎಸ್‌ ರಾವ್‌ ಅವರದೆಲ್ಲಾ ಕೊಡುಗೆ ಅಪಾರ. ಈಗ ಅವರೇನು ಮಾಡಿದ್ದಾರೆ ಎಂದು ಕೇಳವ ಹಾಗೆ ಆಗಬಾರದು.  ದ ಕ ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂದು ಹೆಸರುವಾಸಿಯಾಗಲು ಇಂತಹವರು ಕೂಡಾ ಪ್ರಮುಖ ಕಾರಣ. ಅವರ ಹಿಂದೆ ಆಳವಾದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಅಭಿವೃದ್ಧಿಯ ಕಾಳಜಿ ಇತ್ತು. ಶ್ರೀಮಂತವಾದ  ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದ ಪ್ರದೇಶ ಇದು.
ಇದು ನಿಧಾನಕ್ಕೆ ಕಡಿಮೆಯಾಗಿ ಬಂತು. ಅಡಿಗರ ನಂತರ ಸಾಹಿತ್ಯಿಕವಾಗಿ ಅಂತಹ ದೊಡ್ಡವರು ಬೆಳೆದಿಲ್ಲ. ಈಗ ಹೊಸತಲೆಮಾರಿನ ಜನ ಇಲ್ಲದ ಹಾಗಿದೆ. ರಾಜಕೀಯವಾಗಿಯೂ  ಜನರು ಇಲ್ಲ. 5 ವರ್ಷದ ನಂತರ ಮರೆತೇ ಹೋಗುತ್ತದೆ. ಶಾಸಕರುಗಳೂ ಹಾಗೇ, ಬಹಳ ಸರಳವಾಗಿ ಇದ್ದವರು. ಮೊದಲಿನ ಶಾಸಕ ವೆಂಕಟ್ರಮಣ ಗೌಡ ಅವರೂ ಹಾಗೆ ಬಹಳ ಸರಳವಾಗಿ ಬದುಕಿದವರು. ಬಹಳ ಕೆಲಸ ಮಾಡಿದವರು, ಇಂದು ಸಣ್ಣ ಮೋರಿ ಮಾಡಿದವರು ಹೆಸರೂ ನೆನಪಿರುತ್ತದೆ, ಅಂದು ಮಾಡಿರುವ ದೊಡ್ಡ ಕೆಲಸಗಳು ಎಷ್ಟು..?
ಇಂದು ಏನಾಗಿದೆ ಎಂದರೆ, ಸೌಹಾರ್ದವಾಗಿ ಬಾಳಿದ ಜನರು , ದಕ ಜಿಲ್ಲೆಯ ಜನರು ಇಂದು ಈ ಸೌಹಾರ್ದತೆಯನ್ನು ಕಳೆದುಕೊಂಡಿದೆ. ಈಗ ಗಲಭೆಗಳು ನಡೆಯುತ್ತದೆ, ಬಹಳ ಕುಬ್ಜ ವ್ಯಕ್ತಿತ್ವದ ರಾಜಕೀಯ ವ್ಯಕ್ತಿಗಳು ಬರುತ್ತಿದ್ದಾರೆ. ಇದು ಬಹಳ ಬೇಸರವಾಗುತ್ತದೆ. ಆದರೆ ಹೇಳುವ ಹಾಗೆ ಇಲ್ಲ, ಹೀಗೆ ಹೇಳಿದರೆ ಬೇರೆ ಬೇರೆ ರೀತಿಯ ಆಕ್ರಮಣಗಳು ನಡೆಯುತ್ತದೆ. ಇದಕ್ಕಾಗಿ ಈಗ ಮೌನವೇ ಹೆಚ್ಚು ಮತ್ತು ಈ ಉಸಾಬರಿಗಳು ನಮಗ್ಯಾಕೆ ಎಂದು ಅನಿಸಿ, ಕತೆ-ಕವಿತೆಯೇ ಹೆಚ್ಚು ಮುಖ್ಯ ಅಂತ ಅನಿಸಿ ಅದರಲ್ಲೇ ತಲ್ಲೀನತೆಯಲ್ಲಿದ್ದೇನೆ ಎನ್ನುತ್ತಾರೆ ಸುಬ್ರಾಯ ಚೊಕ್ಕಾಡಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

10 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

11 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

17 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago