Advertisement
MIRROR FOCUS

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

Share

ಅಡಿಕೆ ಬೆಳೆಗಾರರಿಗೆ ಈಗ ಸವಾಲಿನ ದಿನಗಳು. ಮಳೆಗಾಲ ಆರಂಭವಾದ ಬಳಿಕ ಅಡಿಕೆಗೆ ಔಷಧಿ ಸಿಂಪಡಣೆ ಮಾಡಬೇಕು, ಕೊಳೆರೋಗ ಬಾರದಂತೆ ತಡೆಯಬೇಕು. ಆದರೆ  ಮಳೆ ಯಾವಾಗ ಬರುತ್ತದೆ..? ಯಾವಾಗ ಕಡಿಮೆಯಾಗುತ್ತದೆ ಎನ್ನುವುದೇ ತಿಳಿಯದ ಕಾರಣ ಅಡಿಕೆ ಬೆಳೆಗಾರರಿಗೆ ಸವಾಲು. ಅದರ ಜೊತೆಗೇ ಕಾರ್ಮಿಕರಿಗೂ ಸಂಕಷ್ಟ. ಇಂತಹ ಸಮಸ್ಯೆಗೆ ಕೃಷಿ ಕಾರ್ಮಿಕ ಹವಾಮಾನ ಮಾಹಿತಿಯನ್ನು ವೆದರ್‌ ಆಪ್‌ ಮೂಲಕ ಪಡೆದು ಔಷಧಿ ಸಿಂಪಡಣೆಗೆ ತೆರಳುವ ಬಗ್ಗೆ ಕೃಷಿಕ ರಾಜಗೋಪಾಲ ಕೈಪಂಗಳ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ವಿಡಿಯೋ ಕೂಡಾ ಇದೆ.

ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ

ಕೃಷಿಗೆ ಈಗ ತಂತ್ರಜ್ಞಾನ ಏಕೆ ಬೇಕು? ಅದೂ ಸಾಮಾನ್ಯ ಕೃಷಿಕರಿಗೂ, ಕೃಷಿ ಕಾರ್ಮಿಕರಿಗೂ ಲಭ್ಯವಾಗುವಂತೆ ಇರಬೇಕು ?. ಇದಕ್ಕೊಂದು ಉದಾಹರಣೆಯಾಗಿ ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು.ಅಡಿಕೆಗೆ ಔಷಧಿ ಸಿಂಪಡಣೆಗೆ ತೆರಳುವ ಮುನ್ನ ಹವಾಮಾನ ಮಾಹಿತಿಯ “ವೆದರ್‌ ಆಪ್”‌ ಮೂಲಕ ಯಾವಾಗ ಮಳೆಯಾಗುತ್ತದೆ ಎನ್ನುವುದನ್ನು ಗಮನಿಸಿ ಸಿಂಪಡಣೆಗೆ ತೆರಳುತ್ತಾರೆ.ಕೃಷಿಕ ರಾಜಗೋಪಾಲ ಕೈಪಂಗಳ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗ ಎಲ್ಲರ ಬಳಿಯೂ ಆಧುನಿಕ ತಂತ್ರಜ್ಞಾನಗಳು ಒಳಗೊಂಡ ಮೊಬೈಲ್‌ ಇದೆ. ಈ ಮೊಬೈಲ್‌ ಮೂಲಕ ಲಭ್ಯವಾಗುವ ಹವಾಮಾನ ಮಾಹಿತಿ ಪಡೆದು ಔಷಧಿ ತಯಾರಿಸುವುದು ಹಾಗೂ ಔಷಧಿ ಸಿಂಪಡಣೆಗೆ ಅನುಕೂಲವಾಗುತ್ತದೆ. ಇದರಿಂದ ಕಾರ್ಮಿಕರಿಗೂ ಇಡೀ ದಿನ ವ್ಯರ್ಥವಾಗುವುದಿಲ್ಲ, ಮಾನವ ಶ್ರಮವೂ ಸರಿಯಾಗಿ ಬಳಕೆಯಾಗುತ್ತದೆ. ಕೃಷಿಕನಿಗೂ ನಷ್ಟವೂ ಇಲ್ಲ, ಸರಿಯಾದ ಸಮಯಕ್ಕೆ ಔಷಧಿ ಸಿಂಪಡಣೆಯೂ ಸಾಧ್ಯವಾಗುತ್ತದೆ. ಕೃಷಿಕರು ಈಗಾಗಲೇ ಹವಾಮಾನ ಮಾಹಿತಿಯನ್ನು ಪಡೆಯುತ್ತಾರೆ. ಆದರೆ ಕೃಷಿ ಕಾರ್ಮಿಕರು ಕೂಡಾ ಇಂತಹ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಳ್ಳಬೇಕಾದ ಅಗತ್ಯವೂ ಇದೆ. ಗ್ರಾಮೀಣ ಭಾಗಕ್ಕೂ ತಂತ್ರಜ್ಞಾನಗಳು ಎಷ್ಟು ಅಗತ್ಯ ಎನ್ನುವುದಕ್ಕೂ ಕೂಡಾ ಇದೊಂದು ಸಂದೇಶವಾಗಿದೆ.

ಕೃಷಿ ಕಾರ್ಮಿಕ ರಾಮಕೃಷ್ಣ ಅವರ ಈ ಪ್ರಯತ್ನವು ಮಾದರಿಯಾಗಿದೆ. ಅಷ್ಟೇ ಅಲ್ಲ, ಕೃಷಿ ತಂತ್ರಜ್ಞಾನಗಳು ಅತ್ಯಂತ ಸಾಮಾನ್ಯ ಜನರೂ ಬಳಕೆ ಮಾಡಿದಾಗ ಮಾನವ ಶ್ರಮವೂ ಸರಿಯಾಗಿ ಬಳಕೆಯಾಗುತ್ತದೆ ಎನ್ನುವುದಕ್ಕೆ ಇದೊಂದು ಮಾದರಿಯಾಗಿದೆ.

Why do we need technology in farming these days? It’s important that everyday farmers have access to it too. Take Ramakrishna Ilanthodi, for example, an agricultural worker near Nettanige in the Kasaragod district. Before he heads out to spray pesticides on  arecanut crops, he checks the “Weather App” to see if it’s going to rain, so he can plan his day better.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

9 minutes ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

5 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

5 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

6 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

6 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

6 hours ago