Advertisement
MIRROR FOCUS

ಮಾಲ್ಡೀವ್ಸ್‌ಗೆ ಯಾಕೆ ಹೋಗಬೇಕು..? ನಮ್ಮ ಮಂಗಳೂರಿನಲ್ಲೇ ಇದೆ ಸೂಪರ್‌ ಲಕ್ಷದ್ವೀಪ | 6 ಸಾವಿರಕ್ಕೆ 3 ದಿನದ ಟೂರ್ ಪ್ಯಾಕೇಜ್

Share

ಅನೇಕ ಪ್ರವಾಸಿಗರು(Tourist) ನಮ್ಮೂರಿನ ಅಂದ ಚಂದ ಬಿಟ್ಟು ವಿದೇಶಗಳಿಗೆ(Foreign), ಬೇರೆ ರಾಜ್ಯಗಳಿಗೆ(State) ಪ್ರವಾಸ(Tour) ಹೋಗೋದು ಮಾಮೂಲು. ನಮ್ಮ ಅಕ್ಕ ಪಕ್ಕ ಏನಿದೆ ಅನ್ನೋದು ಕೆಲವರಿಗೆ ಗೊತ್ತಿರಲ್ಲ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಪ್ರಕೃತಿ ಸೌಂದರ್ಯದ ನಾಡು. ಇಲ್ಲೆ ನಮ್ಮ ಸುತ್ತಮುತ್ತ ಅನೇಕ ಪ್ರವಾಸಿ ತಾಣಗಳಿವೆ. ಅದೇ ರೀತಿ ಲಕ್ಷದ್ವೀಪಗಳಿಗೇನು ಕಮ್ಮಿ ಇಲ್ಲ.  ಮಂಗಳೂರಿನಿಂದ(Mangaluru) 356 ಕಿಮೀ ದೂರದಲ್ಲಿ ಒಂದು ಸುಂದರ ಲಕ್ಷದ್ವೀಪವಿದೆ. ಕೊಚ್ಚಿಯಿಂದ(Kochi) 391 ಕಿಮೀ ದೂರದಲ್ಲಿದೆ. ಲಕ್ಷದ್ವೀಪಕ್ಕೆ ತರಕಾರಿ(Vegetable), ಆಹಾರ(Food) ಸಾಮಾಗ್ರಿಯಿಂದ ಹಿಡಿದು ಕಟ್ಟಡ ಸಾಮಾಗ್ರಿವರೆಗೂ ಮಂಗಳೂರಿನಿಂದಲೇ ಸಾಗಾಟವಾಗುತ್ತದೆ..!

ಪ್ರಧಾನಿ ಮೋದಿ ಮಾಲ್ಡೀವ್ಸ್ ಲಕ್ಷದ್ವೀಪ ಭೇಟಿ ಬಳಿಕ ಲಕ್ಷ ದ್ವೀಪದ ಬಗ್ಗೆ ಕುತೂಹಲ ಹೆಚ್ಚುತ್ತಿದೆ. ಇದೇ ವೇಳೆ ಕರ್ನಾಟಕದ ಮಂಗಳೂರಿನ ಜೊತೆಗೆ ಲಕ್ಷದ್ವೀಪಕ್ಕೆ ಇರುವ ಸಂಬಂಧಗಳು ಸಹ ಮುನ್ನೆಲೆಗೆ ಬರುತ್ತಿವೆ. ಮುನ್ನೂರು ವರ್ಷಗಳಿಂದಲೇ ಲಕ್ಷದ್ವೀಪದ ಜೊತೆ ಮಂಗಳೂರಿಗೆ ಸಂಪರ್ಕವಿತ್ತು, ಇಡೀ ವಿಶ್ವದಲ್ಲೇ ಲಕ್ಷದ್ವೀಪದ ಜೊತೆ ಸಂಪರ್ಕ ಇರೋದು ಕೇರಳ ಕೊಚ್ಚಿ ಮತ್ತು ಮಂಗಳೂರಿಗೆ ಮಾತ್ರ.

ಲಕ್ಷದ್ವೀಪ ಮಂಗಳೂರಿನಿಂದ 356 ಕಿಮೀ ದೂರದಲ್ಲಿದೆ. ಕೊಚ್ಚಿಯಿಂದ 391 ಕಿಮೀ ದೂರದಲ್ಲಿದೆ. ಲಕ್ಷದ್ವೀಪಕ್ಕೆ ತರಕಾರಿ ಆಹಾರ ಸಾಮಾಗ್ರಿಯಿಂದ ಹಿಡಿದು ಕಟ್ಟಡ ಸಾಮಾಗ್ರಿವರೆಗೂ ಮಂಗಳೂರಿನಿಂದಲೇ ಸಾಗಾಟವಾಗುತ್ತದೆ. ಮಂಗಳೂರಿನಿಂದ ಪ್ರತಿದಿನ ಲಕ್ಷದ್ವೀಪಕ್ಕೆ ಐವತ್ತಕ್ಕೂ ಹೆಚ್ಚು ವೆಸೆಲ್ಗಳು ತೆರಳುತ್ತವೆ. ಲಕ್ಷದ್ವೀಪದಲ್ಲಿರುವ 36 ಐಲ್ಯಾಂಡ್ಗಳಲ್ಲಿ ಕೇವಲ ಆರು ಐಲ್ಯಾಂಡ್ಗಳಲ್ಲಿ ಮಾತ್ರ ಜನವಸತಿ ಇದ್ದು, ಇನ್ನೂ ಮೂರು ಐಲ್ಯಾಂಡ್ಗಳ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ.

ಲಕ್ಷದ್ವೀಪ ಅಭಿವೃದ್ಧಿಯಾದರೆ ಮಂಗಳೂರಿನ ಪ್ರವಾಸೋದ್ಯಮಕ್ಕೂ ಬೂಸ್ಟ್ ದೊರೆಯಲಿದೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ಲಕ್ಷದ್ವೀಪ ಸಂಪರ್ಕಿಸುವ ಜೆಟ್ಟಿಗಳು ನಿಲುಗಡೆಯಾಗುತ್ತವೆ. ಕೋವಿಡ್ ಬರುವ ಮುಂಚೆ ಲಕ್ಷದ್ವೀಪಕ್ಕೆ ಪ್ರವಾಸಿ ಹಡಗಿತ್ತು.  ಆರು ಸಾವಿರಕ್ಕೆ ಊಟ ವಸತಿ ಸೇರಿದಂತೆ ಮೂರು ದಿನದ ಪ್ಯಾಕೇಜ್ ಇತ್ತು. ಆದರೆ ಕೋವಿಡ್ ಬಳಿಕ ಲಕ್ಷದ್ವೀಪದ ಪ್ರವಾಸಿ ಹಡಗು ಸಂಚಾರ ನಿಲುಗಡೆಯಾಗಿದೆ.

ಲಕ್ಷದ್ವೀಪ ಪ್ರವಾಸಕ್ಕೆ ಕಠಿಣ ನಿಯಮಗಳೇ ಅಡ್ಡಿಯಾಗಿವೆ. ಪರ್ಮಿಟ್ ಪಡೆಯಲು ಹತ್ತಾರು ನಿಬಂಧನೆಗಳಿವೆ. ಪ್ರವಾಸಕ್ಕೆ 20 ದಿನದ ಮೊದಲು ಅರ್ಜಿ ಸಲ್ಲಿಸಬೇಕು. ಪೊಲೀಸ್ ವೆರಿಫಿಕೇಶನ್ ಆಗಬೇಕು. ಪೊಲೀಸ್ ಕ್ಲಿಯರೆನ್ಸ್ ಈ ಪೋರ್ಟಲ್‌ನಲ್ಲಿ ಅಪ್ ಲೋಡ್ ಮಾಡಬೇಕಿದೆ. ಇಂತಹ ಹರಸಾಹಸದಿಂದ ಪರ್ಮಿಟ್ ಪಡೆಯಬೇಕನ್ನುವ ಕಾರಣದಿಂದ ಪ್ರವಾಸಿಗರು ಲಕ್ಷದ್ವೀಪದ ಪ್ರವಾಸದಿಂದ ದೂರವುಳಿಯುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

After Prime Minister Modi’s visit to Maldives Lakshadweep, curiosity about Lakshadweep is increasing. At the same time, relations with Mangalore in Karnataka and Lakshadweep are also coming to the fore. Mangalore has been connected with Lakshadweep for 300 years, Kochi and Mangalore are the only places in the world that have connections with Lakshadweep.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

2 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

3 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

4 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

11 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

15 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

15 hours ago